Vijayalakshmi: ಪತಿ ದರ್ಶನ್ ಇಲ್ಲದೇ ವಿಜಯಲಕ್ಷ್ಮೀ ಭೀಮನ ಅಮಾವಾಸ್ಯೆ ಮಾಡಿದ್ದೇಗೆ?
ಬೆಂಗಳೂರು, ಆಗಸ್ಟ್ 06: ಕೊಲೆ ಪ್ರಕರಣದ ಆರೋಪದ ಮೇಲೆ ಸುಮಾರು 55 ದಿನಗಳಿಂದ ನಟ ದರ್ಶನ್ ಜೈಲಿನಲ್ಲಿದ್ದಾರೆ. ಅವರ ಮನೆ ಊಟದ ಅರ್ಜಿ ಪುರಸ್ಕೃತಗೊಂಡಿಲ್ಲ. ಇತ್ತ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಪತಿಗಾಗಿ, ಪತಿಯ ಬಿಡುಗಡೆಗಾಗಿ ಟೆಂಪಲ್ ರನ್ ಮುಂದುವರೆಸಿದ್ದಾರೆ.
ದರ್ಶನ್ಗೆ ಜಾಮೀನು ಕೊಡಿಸಿ ಜೈಲಿನಿಂದ ಬಿಡುಗಡೆ ಮಾಡಲು ವಕೀಲರ ಜೊತೆಗೆ ನಿರಂತರ ಸಂಪರ್ಕದಲ್ಲಿರುವ ಪತ್ನಿ ವಿಜಯಲಕ್ಷ್ಮೀ ಅವರು, ಇದೀಗ ಸಾಲು ಸಾಲು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಕಳೆದ ವಾರವಷ್ಟೇ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ತೆರಳಿ ಪತಿ ದರ್ಶನ್ ಹೆಸರಿನಲ್ಲಿ ವಿಶೇಷ ಪೂಜೆ, ಪುನಸ್ಕಾರಗಳನ್ನು ಮಾಡಿದ್ದರು. ದರ್ಶನ್ ಒಳಿತಿಗೆ ದೇವರದಲ್ಲಿ ಪ್ರಾರ್ಥಿಸಿದ್ದರು.

ಇನ್ನೂ ಭಾನುವಾರ ಭೀಮನ ಅಮಾವಾಸ್ಯೆ ಇತ್ತು. ಈ ದಿನ ಪತ್ನಿಯಾದವರು ತಮ್ಮ ಪತಿಯ ಪಾದ ಪೂಜೆ ಮಾಡಿ, ಆಶೀರ್ವಾದ ಪಡೆಯುವುದು ಈ ಅಮಾವಾಸ್ಯೆಯ ಆಚರಣಾ ಪದ್ಧತಿಯಾಗಿದೆ. ಆದರೆ ಈ ವರ್ಷ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರಿಗೆ ಈ ಭಾಗ್ಯ ಇಲ್ಲದಾಗಿದೆ.
ಬನಶಂಕರಿ ದೇವಾಲಯದಲ್ಲಿ ದರ್ಶನ್ ಹೆಸರಿನಲ್ಲಿ ಪತ್ನಿ ಪೂಜೆ
ಹೀಗಾಗಿಯೇ ಅವರು ಭೀಮನ ಅಮಾವಾಸ್ಯೆ ದಿನ ಮತ್ತೆ ದೇವಸ್ಥಾನಕ್ಕೆ ತೆರಳಿದ್ದಾರೆ. ಬನಶಂಕರಿ ದೇವಾಲಯಕ್ಕೆ ತೆರಳಿ ದೇವಿಗೆ ದರ್ಶನ್ ಹೆಸರಿನಲ್ಲಿ ಅರ್ಚನೆ, ಪೂಜೆ ಮಾಡುವ ಮೂಲಕ ಈ ವರ್ಷದ ಭೀಮನ ಅಮಾವಾಸ್ಯೆಯನ್ನು ನೆರವೇರಿಸಿದ್ದಾರೆ. ಈ ಕುರಿತ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಅಲ್ಲದೇ ಡಿ ಬಾಸ್ ಫ್ಯಾನ್ಸ್ ಸಹ ವಿಜಯಲಕ್ಷ್ಮೀ ಅವರ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ.

ನಟ ದರ್ಶನ್ ವಿಜಯಲಕ್ಷ್ಮೀ ಅವರಿಗೆ ಮನಬಂದಂತೆ ಬೈದರು, ಬೇರೆ ಹೆಣ್ಣಿನ ಸಹವಾಸ ಮಾಡಿ ಜೈಲು ಸೇರಿದರೂ ಸಹ ಪತ್ನಿಯಾದವಳು ಹೇಗೆ ನಡೆದುಕೊಳ್ಳಬೇಕು ಎಂದು ವಿಜಯಲಕ್ಷ್ಮೀ ಅವರು ತೋರಿಸಿಕೊಟ್ಟಂತಿದೆ. ಈ ಕಾರಣದಿಂದಲೇ ದರ್ಶನ್ ಅಭಿಮಾನಿಗಳು ವಿಜಯಲಕ್ಷ್ಮಿಯವರನ್ನು ಅತ್ತಿಗೆ ಎಂದು ಕರೆಯುತ್ತಿದ್ದಾರೆ. ನಿಮ್ಮ ನಡೆ ಮಾದರಿ ಎಂದು ಕೊಂಡಾಡಿದ್ದಾರೆ.
ಚಾಮುಂಡೇಶ್ವರಿ ದೇಗುಲದಲ್ಲಿ ದಿನಕರ್ ಪೂಜೆ
ಸದ್ಯ ದರ್ಶನ್ ಜೈಲಿನಲ್ಲಿದ್ದು, ಜಾಮೀನು ಕೊಡಿಸಲು ಪತ್ನಿ ವಿಜಯಲಕ್ಷ್ಮೀ ಓಡಾಡುತ್ತಿದ್ದಾರೆ. ಅವರಿಗೆ ದರ್ಶನ್ ಸಹೋದರ ದಿನಕರ್ ತೂಗೂದೀಪ ಅವರು ಸಾಥ್ ನೀಡಿದ್ದಾರೆ. ಅವರು ಸಹ ಮೈಸೂರು ಚಾಮುಂಡೇಶ್ವರಿಗೆ ದರ್ಶನ್ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಪತಿ ಇಲ್ಲದೇ ಭೀಮನ ಅಮಾವಾಸ್ಯೆ ಮಾಡಿರುವ ಪತ್ನಿ ವಿಜಯಲಕ್ಷ್ಮೀ ಅವರು ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ತೆರಳಿ ಪತಿಯ ದರ್ಶನ ಪಡೆಯಲಿದ್ದಾರೆ ಎಂದು ತಿಳಿದು ಬಂದಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications