ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ವಶ- ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್

ಬೆಂಗಳೂರು ಜೂನ್ 11: ಖ್ಯಾತ ನಟ ದರ್ಶನ್ ಅವರ ಬಂಧನದ ಕುರಿತು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಸುದ್ದಿಗೋಷ್ಠಿಯಲ್ಲಿ ಕೆಲ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಈ ವೇಳೆ ಬಿ. ದಯಾನಂದ್ ಅವರು, 'ಭಾನುವಾರ ಅಪರಿಚಿತ ಗಂಡಸಿನ ಶವದ ಮೇಲಿನ ಗಾಯಗಳನ್ನು ಗಮನಿಸಿ ಕೊಲೆ ಪ್ರಕರಣ ದಾಖಲಾಗಿತ್ತು. ಕಾಮಾಕ್ಷಿಪಾಳ್ಯ ವ್ಯಾಪ್ತಿಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಸಿಸಿಟಿವಿ ಇತರ ತಾಂತ್ರಿಕ ಆಧಾರದ ಮೇಲೆ ಕೆಲವರನ್ನು ಬಂಧಿಸಲಾಯಿತು. ನಂತರ ಅವರ ವಿಚಾರಣೆ ಬಳಿಕ ಇದು ಚಿತ್ರದುರ್ಗದ ರೇಣುಕಾಸ್ವಾಮಿ ಎಂದು ತಿಳಿದು ಬಂದಿದೆ. ಇದರ ಹಿಂದೆ ಚಿತ್ರದ ಓರ್ವ ನಟ(ದರ್ಶನ್) ಇರುವುದು ತಿಳಿದು ಬಂದಿದೆ. ಸದ್ಯ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ' ಎಂದು ಹೇಳಿದರು.

Darshan was arrested in Renukaswamy s murder case - City Police Commissioner press conference

'ಕೊಲೆ ಜೂನ್ 9ರಂದು ಆಗಿದೆ. ಹತ್ತು ಜನರಿಗಿಂತ ಹೆಚ್ಚು ಜನ ಈ ಪ್ರಕರಣದಲ್ಲಿ ಬಂಧಿಸಲಾಗಿದೆ. ದರ್ಶನ್ ವಶಕ್ಕೆ ಪಡೆಯಲಾಗಿದೆ. ವಿಚಾರಣೆ ಬಳಿಕ ನಂತರ ಕ್ರಮ ತೆಗೆದುಕೊಳ್ಳುತ್ತೇವೆ. ಮೃತ ರೇಣುಕಾಸ್ವಾಮಿಗೆ 33 ವರ್ಷ. ಹೆಚ್ಚಿನ ತನಿಖೆ ನಡೆದ ಬಳಿಕವಷ್ಟೇ ನಾವು ಹೆಚ್ಚಿನ ಮಾಹಿತಿ ನೀಡಲು ಸಾಧ್ಯ' ಎಂದು ಹೇಳಿದರು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಂದು ಬೆಳಗ್ಗೆ 8.30ಕ್ಕೆ ಬೆಂಗಳೂರು ವಿಜಯನಗರ ಎಸಿಪಿ ಚಂದನ್ ನೇತೃತ್ವದಲ್ಲಿ ನಟ ದರ್ಶನ್ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ. ಮೈಸೂರಿನ ರ್ಯಾಡಿಸನ್ ಬ್ಲ್ಯೂ ಹೋಟೆಲ್ (Radisson Blu Plaza Hotel, Mysore) ಶೂಟಿಂಗ್‌ಗಾಗಿ ದರ್ಶನ್ ತಂಗಿದ್ದರು ಎನ್ನಲಾಗುತ್ತಿದೆ.

Darshan was arrested in Renukaswamy s murder case - City Police Commissioner press conference

ಆರ್ಆರ್‌ನಗರದಲ್ಲಿ ದರ್ಶನ್ ಪ್ರೇಯಸಿ ಪವಿತ್ರಾ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+