Get Updates
Get notified of breaking news, exclusive insights, and must-see stories!

Darshan Fans Reaction: ಪವಿತ್ರ ಗೌಡ ಸಲುವಾಗಿ ಯಾವ ಹಂತ ಹೋಗಲೂ ಸಿದ್ದ ನಮ್ಮ ದರ್ಶನ್: ಹುಚ್ಚಾಟ ಮೆರೆಯುತ್ತಿರುವ ಅಭಿಮಾನಿಗಳು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಅಭಿಮಾನಿಗಳಿಗೆ ದೊಡ್ಡ ಶಾಕ್ ಕೊಟ್ಟಿದೆ. ಸದಾ ವಿವಾದದಲ್ಲೇ ಇರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಸುದ್ದಿ ಕಾಡ್ಗಿಚ್ಚಿನಂತೆ ಹರಿದಾಡುತ್ತಿದ್ದು ಸಾಕಷ್ಟು ಅಭಿಮಾನಿಗಳು ಮನಬಂದಂತೆ ಕಾಮೆಂಟ್ ಮಾಡುತ್ತಿದ್ದಾರೆ.

ನಟ ದರ್ಶನ್ ಪ್ರೇಯಸಿ ಪವಿತ್ರ ಗೌಡ ಅವರಿಗೆ ಅಶ್ಲೀಲವಾಗಿ ಕಾಮೆಂಟ್ ಮಾಡಿದ್ದ ಎನ್ನುವ ಕಾರಣಕ್ಕೆ ರೇಣುಕಾಸ್ವಾಮಿಯನ್ನು ಕೊಲೆ ಮಾಡಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಪ್ರಕರಣದಲ್ಲಿ ದರ್ಶನ್ ಅವರನ್ನು ಬಂಧಿಸಿದ ಬಳಿಕ ಪವಿತ್ರಾ ಗೌಡ ಅವರನ್ನೂ ವಶಕ್ಕೆ ಪಡೆಯಲಾಗಿದೆ. ಆರ್‌ಆರ್‌ ನಗರ ಪೊಲೀಸರು ದರ್ಶನ್ ಪ್ರೇಯಸಿ ಪವಿತ್ರಾ ಗೌಡ ಅವರನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ. ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದೆ.

Darshan was arrested in Renukaswamy s murder case - What is the reaction of the fans

ಹೀಗಾಗಿ ದರ್ಶನ್ ಅವರ ಕೆಲ ಅಭಿಮಾನಿಗಳು ನಾನಾ ರೀತಿ ಕಾಮೆಂಟ್ ಮಾಡುತ್ತಿದ್ದಾರೆ. ''ಪವಿತ್ರ ಗೌಡ ಸಲುವಾಗಿ ಯಾವ ಹಂತ ಹೋಗಲೂ ಸಿದ್ದ ನಮ್ಮ ದರ್ಶನ್. He is the real 'ಪ್ರೇಮಿ'' ಎಂದು ಅಭಿಮಾನಿಗಳು ಹುಚ್ಚಾಟ ಮೆರೆಯುತ್ತಿದ್ದಾರೆ. ದರ್ಶನ್ ಅವರ ಮೇಲಿರುವ ಆರೋಪಕ್ಕೆ ಸಾಥ್ ನೀಡುವಂತೆ ಕೆಲವರು ಪ್ರತಿಕ್ರಿಯೆ ನೀಡುತ್ತಿದ್ದಾರೆ.

ಮತ್ತೊಂದೆಡೆ ನಟ ಎನ್ನುವ ಕಾರಣಕ್ಕೆ ಎಲ್ಲಾ ತಪ್ಪುಗಳನ್ನು ಮಾಡಬಹುದು ಎಂದುಕೊಂಡಿದ್ದಾರೆ ಎಂದು ಜನ ಚೀಮಾರಿ ಹಾಕುತ್ತಿದ್ದಾರೆ. ದರ್ಶನ್ ಅವರಿಂದ ನಾವು ಇದನ್ನು ನಿರೀಕ್ಷೆ ಮಾಡಿರಲಿಲ್ಲ ಎಂದು ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ದರ್ಶನ್ ಅವರು ಸಿನಿಮಾ ಮೂಲಕ ಖ್ಯಾತರಾಗುವುದು ಮಾತ್ರವಲ್ಲದೆ ವಿವಾದಿತ ನಟ ಎಂದು ಫೇಮಸ್ ಆಗಿದ್ದಾರೆ. ದರ್ಶನ್ ಅವರ ವೈವಾಹಿಕ ಜೀವನದಲ್ಲಿ ಎಲ್ಲವೂ ಸರಿ ಇಲ್ಲ. ಅವರು ತಮ್ಮ ಪತ್ನಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪದಿಂದ ಹಿಡಿದು ನಾಲಿಗೆ ಹರಿಬಿಟ್ಟು ಮಾತನಾಡಿದ ಆರೋಪಗಳು ಅವರ ಮೇಲಿದೆ. ಈ ಹಿಂದೆ ಪವಿತ್ರಾ ಗೌಡ ಅವರ ವಿಚಾರದಲ್ಲೂ ದರ್ಶನ್ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಆದರೀಗ ಪವಿತ್ರಾ ಗೌಡ ವಿಚಾರಕ್ಕೆ ಕೊಲೆ ಕೂಡ ನಡೆದಿದೆ ಎನ್ನಲಾಗುತ್ತಿದೆ.

Darshan was arrested in Renukaswamy s murder case - What is the reaction of the fans

ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೇಜ್ ಮಾಡಿದ್ದ ಎನ್ನುವ ಕಾರಣಕ್ಕೆ ರೇಣುಕಾಸ್ವಾಮಿ ಎಂಬುವವರನ್ನು ಕೊಲೆ ಮಾಡಿಸಿದ್ದಾರೆ ಎನ್ನುವ ಆರೋಪ ದರ್ಶನ್ ಮೇಲಿದೆ. ಜೂನ್ 8ರಂದು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಅವರ ಶವ ಬೆಂಗಳೂರಿನ ಕಾಮಾಕ್ಷಿಪಾಳ್ಯದ ಮೋರಿಯೊಂದರಲ್ಲಿ ಪತ್ತೆಯಾಗಿದೆ.

ರೇಣುಕಾಸ್ವಾಮಿ ಕೊಲೆಯಾದ ಜಾಗ ಯಾವುದು?

ಜಯಣ್ಣ ಅವರಿಗೆ ಸಂಬಂಧಿಸಿದ ಶೆಡ್ ನಲ್ಲಿ ರೇಣುಕಾಸ್ವಾಮಿ ಅವರನ್ನು ಕೊಲೆ ಮಾಡಲಾಗಿದೆ ಎನ್ನುವ ವಿಚಾರ ತಿಳಿದು ಬಂದಿದೆ. ಲೋನ್ ಕಟ್ಟಲು ಸಾಧ್ಯವಾಗದ ಕಾರು ಹಾಗೂ ಬೈಕ್‌ಗಳನ್ನು ಸ್ಟೋರೇಜ್ ಮಾಡುವ ಶೆಡ್ ಇದಾಗಿದೆ. ಐದು ಎಕರೆಯಲ್ಲಿ ಶೆಡ್ ನಿರ್ಮಾಣ ಮಾಡಲಾಗಿದೆ. ರೇಣುಕಾ ಸ್ವಾಮಿಯವರನ್ನು ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆನ್ನುವ ಆರೋಪವಿದೆ.

ಪವಿತ್ರಾ ಗೌಡ ಮೇಲೂ ಹಲ್ಲೆ ಮಾಡಿದ್ದ ದರ್ಶನ್

ರೇಣುಕಾಸ್ವಾಮಿ ಅವರ ಮೇಲೆ ಹಲ್ಲೆ ಮಾಡುವಾಗ ದರ್ಶನ್ ಹಾಗೂ ಪವಿತ್ರಾ ಗೌಡ ಕೂಡ ಸ್ಥಳದಲ್ಲಿ ಇದ್ದರು ಎನ್ನಲಾಗುತ್ತಿದೆ. ಹಲ್ಲೆ ಮಾಡಿದ ಬಳಿಕ ರೇಣುಕಾಸ್ವಾಮಿ ಅವರು ಸಾವನ್ನಪ್ಪಿದ್ದಾರೆ. ಇದರಿಂದ ಮತ್ತೆ ಪ್ಯಾನಿಕ್ ಆದ ದರ್ಶನ್ ಪವಿತ್ರಾ ಗೌಡ ಅವರ ಮೇಲೂ ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಗಾಯಗೊಂಡ ಪವಿತ್ರಾ ಗೌಡ ಆಸ್ಪತ್ರೆಗೆ ದಾಖಲಾಗಿ ನಿನ್ನೆಯಷ್ಟೇ ಆಕೆ ಡಿಸ್ಚಾರ್ಚ್ ಆಗಿರುವುದಾಗಿ ವಿಚಾರಣೆ ವೇಳೆ ಹೇಳಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಕೊಲೆ ಪ್ರಕರಣದಲ್ಲಿ ದರ್ಶನ್ ಅವರ ಬೋನ್ಸರ್‌ ಅವರನ್ನು ವಶಕ್ಕೆ ಪಡೆಯಲಾಗಿದೆ.

Darshan was arrested in Renukaswamy s murder case - What is the reaction of the fans

ಆರೋಪಿ ವಿನಯ್ ದರ್ಶನ್ ಆಪ್ತ

ಆರೋಪಿ ವಿನಯ್ ದರ್ಶನ್ ಆಪ್ತ ಎಂದು ತಿಳಿದು ಬಂದಿದೆ. ಇವರು ಹೋಟೇಲ್ ಉದ್ಯಮಿ ಆಗಿದ್ದಾರೆ. ಈತನಿಗೆ ಸಂಬಂಧಿಸಿದ ಶೆಡ್‌ನಲ್ಲಿ ಈ ಕೊಲೆ ನಡೆದಿದೆ ಎನನ್ಲಾಗುತ್ತಿದೆ. ಈತ ದರ್ಶನ್‌ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದು ದರ್ಶನ್ ಅವರೊಂದಿಗೆ ಫೋಟೋಗಳು ವೈರಲ್ ಆಗಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+