ಸಿಕೆಪಿಯಲ್ಲಿ ದಸರಾ ಹಬ್ಬದ ವಿಶೇಷ ಮಾರಾಟ ಹಾಗೂ ಪ್ರದರ್ಶನ ಮೇಳ
ಬೆಂಗಳೂರು ಸೆಪ್ಟೆಂಬರ್ 11: ಕರ್ನಾಟಕ ರಾಜ್ಯದ ನಾಡ ಹಬ್ಗ ದಸರಾ ಸಮೀಪಿಸುತ್ತಿದೆ. ದೇಶ ವಿದೇಶ ಹಾಗೂ ವಿಶ್ವದ ಗಮನ ಸೆಳೆಯುವ ದಸರಾ ಹಬ್ಬದಲ್ಲಿ ಮತ್ತೊಂದು ವಿಶೇಷ ಎಂದರೆ ದಸರಾ ಗೊಂಬೆಗಳು. ಈ ಗೊಂಬೆಗಳನ್ನು ಕೂರಿಸುವುದು ಒಂದು ಸಂಪ್ರದಾಯವಾಗಿ ಮುಂದುವರೆದುಕೊಂಡು ಬಂದಿದೆ. ಕಣ್ಮನ ಸೆಳೆಯುವ ಗೊಂಬೆಗಳನ್ನು ಪ್ರದರ್ಶನಕ್ಕೆ ಇಡುವ ಮೂಲಕ ಮನೆ ಮಂದಿಯೆಲ್ಲಾ ಸಂಭ್ರಮಿಸುತ್ತಾರೆ.
Recommended Video
ಈ ಗೊಂಬೆಗಳು ಪರಂಪರಾಗತವಾಗಿ ಓಂದು ತಲೆಮಾರಿನಿಂದ ಇನ್ನೊಂದಕ್ಕೆ ಹಸ್ತಾಂತರಗೊಳ್ಳುತ್ತವೆ. ಆದರೆ, ಪ್ರತಿಬಾರಿಯೂ ಹೊಸದನ್ನು ನೀಡುವ ದೃಷ್ಟಿಯಿಂದ ಕೆಲವೊಂದು ಗೊಂಬೆಗಳನ್ನು ಖರೀದಿಸುವುದು ನಡೆದು ಬಂದಿರುವ ಸಂಪ್ರದಾಯ.
ಇಂತಹ ಸಂಪ್ರದಾಯಕ್ಕೆ ಪುಷ್ಠಿ ಕೊಡುವ ನಿಟ್ಟಿನಲ್ಲಿ ಹಾಗೂ ದಸರಾ ಹಬ್ಬಕ್ಕೆ ಬೇಕಾದ ಎಲ್ಲಾ ಸಾಮಗ್ರಿಗಳನ್ನು ಒಂದೇ ವೇದಿಕೆಯಡಿಯಲ್ಲಿ ಸಿಗುವ ರೀತಿಯಲ್ಲಿ ಮಾಡುವ ದೃಷ್ಟಿಯಿಂದ ಸೆಪ್ಟೆಂಬರ್ 13 ರಿಂದ 22 ರ ವರೆಗೆ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಡಿಸೈನ್ ಸ್ಟ್ರೋಮ್ಸ್, ಚಿತ್ತಾರ ಸಹಯೋಗದಲ್ಲಿ ಅರ್ಬನ್ ಬಜಾರ್ ಕರಕುಶಲ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಿದೆ.

ದಸರಾ ಗೊಂಬೆಗಳು ಆಕರ್ಷಣೆ
ಈ ಪ್ರದರ್ಶನ ಹಾಗೂ ಮಾರಾಟ ಮೇಳದ ಪ್ರಮುಖ ಆಕರ್ಷಣೆ ದಸರಾ ಗೊಂಬೆಗಳು. ಈ ಬಾರಿ ಒಂದೇ ವೇದಿಕೆಯ ಅಡಿಯಲ್ಲಿ ಎಲ್ಲಾ ರೀತಿಯ ಹಾಗೂ ವಿಭಿನ್ನ ಆಯಾಮದ ಗೊಂಬೆಗಳನ್ನು ಖರೀದಿಸಬಹುದಾಗಿದೆ. ಇದರ ಜೊತೆಯಲ್ಲಿಯೇ ಹಬ್ಬಕ್ಕೆ ಬೇಕಾಗಿರುವ ಎಲ್ಲಾ ರೀತಿಯ ಸಾಮಗ್ರಿಗಳನ್ನು ಇಲ್ಲಿ ಕೊಳ್ಳಬಹುದಾಗಿದೆ. ಅಲಂಕಾರಿಕ ವಸ್ತುಗಳ ಜೊತೆಯಲ್ಲಿಯೇ ಮನೆ ಮಂದಿಗೆ ಬೇಕಾಗಿರುವ ಬಟ್ಟೆಗಳು ಹಾಗೂ ಇನ್ನಿತರೆ ವಸ್ತುಗಳನ್ನು ಕೊಳ್ಳಬಹುದಾಗಿದೆ.

100ಕ್ಕೂ ಅಧಿಕ ಅಂಗಡಿಗಳಿವೆ
100 ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಡಲಿದ್ದಾರೆ. ಮಣ್ಣು, ಕಲ್ಲು, ಮರ ಹಾಗೂ ಲೋಹಗಳನ್ನು ಬಳಸಿ ತಯಾರಿಸಿರುವ ಗೊಂಬೆಗಳು ಪ್ರಮುಖ ಆಕರ್ಷಣೆಯಾಗಿರಲಿವೆ.
ಇದರ ಜೊತೆಯಲ್ಲಿಯೇ, ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ.

ಹ್ಯಾಂಡ್ ಲೂಮ್ ಸ್ಯಾರಿ ಕೊಳ್ಳಿರಿ
ನಿಮ್ಮ ಮನೆಯ ಗಾರ್ಡನ್ ಅಲಂಕರಿಸಲು, ನಿಮಗೊಪ್ಪುವ ಹ್ಯಾಂಡ್ ಲೂಮ್ ಸ್ಯಾರಿಯನ್ನು ಸೆಲೆಕ್ಟ್ ಮಾಡಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿರಲಿದೆ.
ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತವೆ.

ನೂರಾರು ಬಗೆಯ ಉತ್ಪನ್ನಗಳ ಪ್ರದರ್ಶನ
ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಹ್ಯಾಂಡ್ಲೂಂಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು, ಹೆಂಗಳೆಯರ ಆಕರ್ಷಣೆಗೆಂದು ಆಭರಣಗಳು, ಬೆಡ್ ಲೈನೆನ್, ಕಲಾಕೃತಿಗಳು, ಪೀಠೋಪಕರಣಗಳು, ಮ್ಯಾಟ್ಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ನೂರಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿರಲಿವೆ.

ಸೆಪ್ಟೆಂಬರ್ 13 ರಿಂದ 22 ರ ವರೆಗೆ ಮಾರಾಟ
ಸೆಪ್ಟೆಂಬರ್ 13 ರಿಂದ 22 ರ ವರೆಗೆ ಪ್ರತಿದಿನ ಬೆಳಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ಈ ಪ್ರದರ್ಶನ ಮತ್ತು ಮಾರಾಟ ಮೇಳ ಇರಲಿದೆ. ಡಿಸೈನ್ ಸ್ಟ್ರೋಮ್ಸ್, ಚಿತ್ತಾರ ಸಹಯೋಗದಲ್ಲಿ ಆಯೋಜಿಸಿರುವ ಈ ಮೇಳದ ಪ್ರಮುಖ ಉದ್ದೇಶ ಕುಶಲಕರ್ಮಿಗಳನ್ನು ಉತ್ತೇಜಿಸಿ ಅವರಿಗೊಂದು ಮಾರುಕಟ್ಟೆ ಕಲ್ಪಿಸುವುದಾಗಿದೆ.
ಅರ್ಬನ್ ಬಜಾರ್
ಸ್ಥಳ: ಕರ್ನಾಟಕ ಚಿತ್ರಕಲಾ ಪರಿಷತ್
(ಶಿವಾನಂದ ವೃತ್ತದ ಬಳಿ)
ದಿನಾಂಕ: ಸೆಪ್ಟೆಂಬರ್ 13 ರಿಂದ ಸೆಪ್ಟೆಂಬರ್ 22, 2019 ವರೆಗೆ
ಸಮಯ: ಬೆಳಿಗ್ಗೆ 11 ಗಂಟೆಯಿಂದ ಸಂಜೆ 7 ರ ವರೆಗೆ
-
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ












Click it and Unblock the Notifications