ಮೈತ್ರಿಯಾ ಬಗ್ಗೆ ಡಾಟಿ ಸದಾನಂದ ಗೌಡರು ಹೇಳಿದ್ದೇನು?
ಬೆಂಗಳೂರು, ಸೆ.5 : "ನನಗೆ ವೈಯಕ್ತಿಕವಾಗಿ ಮೈತ್ರಿಯಾ ಗೌಡ ಯಾರೆಂದು ಪರಿಚಯವಿಲ್ಲ. ಒಂದು ಬಾರಿ ನನಗೆ ತಾನು ಕಾರ್ತಿಕ್ ಗೌಡನ ಸ್ನೇಹಿತೆ ಎಂದು ಆಕೆ ಕರೆ ಮಾಡಿದ್ದಳು". ಎಂದು ಕೇಂದ್ರ ರೈಲ್ವೆ ಸಚಿವ ಡಿ.ವಿ.ಸದಾನಂದ ಗೌಡರ ಪತ್ನಿ ಡಾಟಿ ಸದಾನಂದ ಗೌಡರು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.
ಕಾರ್ತಿಕ್ ಗೌಡ-ಮೈತ್ರಿಯಾ ಪ್ರಕರಣದ ತನಿಖೆ ನಡೆಸುತ್ತಿರುವ ಆರ್.ಟಿ.ನಗರ ಪೊಲೀಸರು ಗುರುವಾರ ರಾತ್ರಿ ಡಿ.ವಿ. ಸದಾನಂದ ಗೌಡರ ಪತ್ನಿ ಡಾಟಿ ಅವರನ್ನು ಸುಮಾರು ಒಂದೂವರೆ ತಾಸು ವಿಚಾರಣೆ ನಡೆಸಿದ್ದು, ಅವರ ಹೇಳಿಕೆಯನ್ನು ಪಡೆದಿದ್ದಾರೆ.

ಸಂಜಯನಗರದಲ್ಲಿರುವ ಸಚಿವರ ನಿವಾಸಕ್ಕೆ ಜೆ.ಸಿ.ನಗರ ಉಪ-ವಿಭಾಗದ ಎಸಿಪಿ ಓಂಕಾರಯ್ಯ ನೇತೃತ್ವದ ಪೊಲೀಸ್ ತಂಡ ತೆರಳಿ ವಿಚಾರಣೆ ನಡೆಸಿದಾಗ, ಪ್ರಕರಣದ ಬಗ್ಗೆ ನನಗೆ ಹೆಚ್ಚು ಮಾಹಿತಿ ಇಲ್ಲ ಎಂದು ಡಾಟಿ ಅವರು ಪೊಲೀಸರಿಗೆ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ. [ಯಾವುದೇ ಕ್ಷಣದಲ್ಲಿ ಕಾರ್ತಿಕ್ ಗೌಡ ಬಂಧನ]
"ನನಗೆ ವೈಯಕ್ತಿಕವಾಗಿ ಮೈತ್ರಿಯಾ ಗೌಡ ಯಾರೆಂಬುದು ಪರಿಚಯವಿಲ್ಲ. ಒಂದು ಬಾರಿ ನನಗೆ ತಾನು ಕಾರ್ತಿಕ್ ಗೌಡನ ಸ್ನೇಹಿತೆ ಎಂದು ಆಕೆ ಕರೆ ಮಾಡಿದ್ದಳು. ಇದರ ಹೊರತು ನನಗೆ ಯಾವುದೇ ವಿಷಯ ಗೊತ್ತಿಲ್ಲವೆಂದು" ಡಾಟಿ ಸದಾನಂದ ಗೌಡರು ಪೊಲೀಸರಿಗೆ ಹೇಳಿದ್ದಾರೆ. [ಸದಾನಂದ ಗೌಡರ ಪುತ್ರ ಕಾರ್ತಿಕ್ ಕೈ ಕೊಟ್ಟ]
"ಸದಾನಂದಗೌಡರ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿದೆ. ಇದರಲ್ಲಿ ಮೈತ್ರಿಯಾ ಗೌಡ ಪಾತ್ರಧಾರಿಯಾಗಿದ್ದಾಳೆ. ನಮ್ಮ ಕುಟುಂಬದ ಆಸ್ತಿ ಕಬಳಿಸಲು ವಿರೋಧಿಗಳಿಂದ ಹುನ್ನಾರ ಕೂಡ ನಡೆದಿರುವ ಬಗ್ಗೆ ಅನುಮಾನವಿದೆ" ಎಂದು ಅವರು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. [ಸದಾನಂದ ಗೌಡರ ಪುತ್ರನ ವಿರುದ್ಧ ದೂರು ನೀಡಿದ ನಟಿ]
ಪ್ರಕರಣ ಬೆಳಕಿಗೆ ಬಂದ ನಂತರ ನಾಪತ್ತೆಯಾದ ಕಾರ್ತಿಕ್ ಕುರಿತು ಡಾಟಿ ಅವರು ಯಾವುದೇ ಮಾಹಿತಿ ಬಹಿರಂಗಪಡಿಸಿಲ್ಲ ಎಂದು ತಿಳಿದುಬಂದಿದೆ. ಕಾರ್ತಿಕ್ ಗೌಡ ವಿರುದ್ಧ ಈಗಾಗಲೇ ಬಂಧನ ವಾರೆಂಟ್ ಜಾರಿಯಾಗಿದ್ದು, ಯಾವುದೇ ಕ್ಷಣದಲ್ಲಿ ಪೊಲೀಸರು ಅವರನ್ನು ಬಂಧಿಸಬಹುದಾಗಿದೆ.
ವಿಚಾರಣೆ ಮೂಂದೂಡಿಕೆ : ಕೇಂದ್ರ ರೈಲ್ವೆ ಸಚಿವ ಸದಾನಂದ ಗೌಡರ ಪುತ್ರ ಕಾರ್ತಿಕ್ ಗೌಡ ಬಂಧನಕ್ಕೆ ಬೆಂಗಳೂರು ಪೊಲೀಸರು ನ್ಯಾಯಾಲಯದಿಂದ ವಾರಂಟ್ ಪಡೆದುಕೊಂಡಿದ್ದಾರೆ. ಬಂಧನ ಭೀತಿ ಎದುರಿಸುತ್ತಿರುವ ಕಾರ್ತಿಕ್ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು 8ನೇ ಎಸಿಎಂಎಂ ನ್ಯಾಯಾಲಯ ಶುಕ್ರವಾರಕ್ಕೆ ಮುಂದೂಡಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications