ಮೈತ್ರಿಯಾ ಬಗ್ಗೆ ಡಾಟಿ ಸದಾನಂದ ಗೌಡರು ಹೇಳಿದ್ದೇನು?
ಬೆಂಗಳೂರು, ಸೆ.5 : "ನನಗೆ ವೈಯಕ್ತಿಕವಾಗಿ ಮೈತ್ರಿಯಾ ಗೌಡ ಯಾರೆಂದು ಪರಿಚಯವಿಲ್ಲ. ಒಂದು ಬಾರಿ ನನಗೆ ತಾನು ಕಾರ್ತಿಕ್ ಗೌಡನ ಸ್ನೇಹಿತೆ ಎಂದು ಆಕೆ ಕರೆ ಮಾಡಿದ್ದಳು". ಎಂದು ಕೇಂದ್ರ ರೈಲ್ವೆ ಸಚಿವ ಡಿ.ವಿ.ಸದಾನಂದ ಗೌಡರ ಪತ್ನಿ ಡಾಟಿ ಸದಾನಂದ ಗೌಡರು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.
ಕಾರ್ತಿಕ್ ಗೌಡ-ಮೈತ್ರಿಯಾ ಪ್ರಕರಣದ ತನಿಖೆ ನಡೆಸುತ್ತಿರುವ ಆರ್.ಟಿ.ನಗರ ಪೊಲೀಸರು ಗುರುವಾರ ರಾತ್ರಿ ಡಿ.ವಿ. ಸದಾನಂದ ಗೌಡರ ಪತ್ನಿ ಡಾಟಿ ಅವರನ್ನು ಸುಮಾರು ಒಂದೂವರೆ ತಾಸು ವಿಚಾರಣೆ ನಡೆಸಿದ್ದು, ಅವರ ಹೇಳಿಕೆಯನ್ನು ಪಡೆದಿದ್ದಾರೆ.

ಸಂಜಯನಗರದಲ್ಲಿರುವ ಸಚಿವರ ನಿವಾಸಕ್ಕೆ ಜೆ.ಸಿ.ನಗರ ಉಪ-ವಿಭಾಗದ ಎಸಿಪಿ ಓಂಕಾರಯ್ಯ ನೇತೃತ್ವದ ಪೊಲೀಸ್ ತಂಡ ತೆರಳಿ ವಿಚಾರಣೆ ನಡೆಸಿದಾಗ, ಪ್ರಕರಣದ ಬಗ್ಗೆ ನನಗೆ ಹೆಚ್ಚು ಮಾಹಿತಿ ಇಲ್ಲ ಎಂದು ಡಾಟಿ ಅವರು ಪೊಲೀಸರಿಗೆ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ. [ಯಾವುದೇ ಕ್ಷಣದಲ್ಲಿ ಕಾರ್ತಿಕ್ ಗೌಡ ಬಂಧನ]
"ನನಗೆ ವೈಯಕ್ತಿಕವಾಗಿ ಮೈತ್ರಿಯಾ ಗೌಡ ಯಾರೆಂಬುದು ಪರಿಚಯವಿಲ್ಲ. ಒಂದು ಬಾರಿ ನನಗೆ ತಾನು ಕಾರ್ತಿಕ್ ಗೌಡನ ಸ್ನೇಹಿತೆ ಎಂದು ಆಕೆ ಕರೆ ಮಾಡಿದ್ದಳು. ಇದರ ಹೊರತು ನನಗೆ ಯಾವುದೇ ವಿಷಯ ಗೊತ್ತಿಲ್ಲವೆಂದು" ಡಾಟಿ ಸದಾನಂದ ಗೌಡರು ಪೊಲೀಸರಿಗೆ ಹೇಳಿದ್ದಾರೆ. [ಸದಾನಂದ ಗೌಡರ ಪುತ್ರ ಕಾರ್ತಿಕ್ ಕೈ ಕೊಟ್ಟ]
"ಸದಾನಂದಗೌಡರ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿದೆ. ಇದರಲ್ಲಿ ಮೈತ್ರಿಯಾ ಗೌಡ ಪಾತ್ರಧಾರಿಯಾಗಿದ್ದಾಳೆ. ನಮ್ಮ ಕುಟುಂಬದ ಆಸ್ತಿ ಕಬಳಿಸಲು ವಿರೋಧಿಗಳಿಂದ ಹುನ್ನಾರ ಕೂಡ ನಡೆದಿರುವ ಬಗ್ಗೆ ಅನುಮಾನವಿದೆ" ಎಂದು ಅವರು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. [ಸದಾನಂದ ಗೌಡರ ಪುತ್ರನ ವಿರುದ್ಧ ದೂರು ನೀಡಿದ ನಟಿ]
ಪ್ರಕರಣ ಬೆಳಕಿಗೆ ಬಂದ ನಂತರ ನಾಪತ್ತೆಯಾದ ಕಾರ್ತಿಕ್ ಕುರಿತು ಡಾಟಿ ಅವರು ಯಾವುದೇ ಮಾಹಿತಿ ಬಹಿರಂಗಪಡಿಸಿಲ್ಲ ಎಂದು ತಿಳಿದುಬಂದಿದೆ. ಕಾರ್ತಿಕ್ ಗೌಡ ವಿರುದ್ಧ ಈಗಾಗಲೇ ಬಂಧನ ವಾರೆಂಟ್ ಜಾರಿಯಾಗಿದ್ದು, ಯಾವುದೇ ಕ್ಷಣದಲ್ಲಿ ಪೊಲೀಸರು ಅವರನ್ನು ಬಂಧಿಸಬಹುದಾಗಿದೆ.
ವಿಚಾರಣೆ ಮೂಂದೂಡಿಕೆ : ಕೇಂದ್ರ ರೈಲ್ವೆ ಸಚಿವ ಸದಾನಂದ ಗೌಡರ ಪುತ್ರ ಕಾರ್ತಿಕ್ ಗೌಡ ಬಂಧನಕ್ಕೆ ಬೆಂಗಳೂರು ಪೊಲೀಸರು ನ್ಯಾಯಾಲಯದಿಂದ ವಾರಂಟ್ ಪಡೆದುಕೊಂಡಿದ್ದಾರೆ. ಬಂಧನ ಭೀತಿ ಎದುರಿಸುತ್ತಿರುವ ಕಾರ್ತಿಕ್ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು 8ನೇ ಎಸಿಎಂಎಂ ನ್ಯಾಯಾಲಯ ಶುಕ್ರವಾರಕ್ಕೆ ಮುಂದೂಡಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications