Day Against Drug Abuse 2023: ಡ್ರಗ್ಸ್ ವಿರೋಧಿ ಜಾಗೃತಿ ಜಾಥಾದಲ್ಲಿ ಮಕ್ಕಳೊಂದಿಗೆ ಹೆಜ್ಜೆ ಹಾಕಿದ ಡಿ.ಸಿ.ಎಂ. ಡಿಕೆಶಿ
ಬೆಂಗಳೂರು, ಜೂನ್, 26: ಇತ್ತೀಚಿನ ದಿನಗಳಲ್ಲಿ ಡ್ರಗ್ಸ್ ಸೇವನೆ ಮಾಡುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಯುವಕರಿಗಿಂತಲೂ ಯುವತಿಯರೇ ಹೆಚ್ಚಾಗಿ ಡ್ರಗ್ಸ್ ಸೇವನೆ ಮಾಡಿರುವ ಪ್ರಕರಣಗಳು ದಾಖಲಾಗುತ್ತಲೇ ಇವೆ. ಆದ್ದರಿಂದ ಇದಕ್ಕೆಲ್ಲ ನಾಂದಿಯಾಡುವ ಉದ್ದೇಶದಿಂದ ಇಂದು ದೇಶಾದ್ಯಂತ ಡ್ರಗ್ಸ್ ವಿರೋಧಿ ಜಾಗೃತಿ ಜಾಥಾಗಳನ್ನು ಹಮ್ಮಿಕೊಂಡಿದ್ದಾರೆ. ಹಾಗೆಯೇ ಬೆಂಗಳೂರಿನಲ್ಲಿ ನಡೆದ ಜಾಥಾದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಶಾಲಾ, ಕಾಲೇಜು ಮಕ್ಕಳ ಜೊತೆ ಹೆಜ್ಜೆ ಹಾಕುವ ಮೂಲಕ ಜಾಗೃತಿ ಮೂಡಿಸಿದರು.
ಡ್ರಗ್ಸ್, ಮಾದಕ ವಸ್ತುಗಳು ನಮ್ಮ ಸಮಾಜಕ್ಕೆ ಅಂಟಿರುವ ಶಾಪ ಹಾಗೂ ಕ್ಯಾನ್ಸರ್ ರೋಗಕ್ಕೆ ಕಾರಣವಾಗಿದೆ. ಇದರಿಂದ ನಮ್ಮ ಸಮಾಜವನ್ನು ರಕ್ಷಿಸುವ ಉದ್ದೇಶದೊಂದಿಗೆ ಮಾದಕ ವಸ್ತು ವಿರೋಧಿ ದಿನದಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಶಾಲಾ ಮಕ್ಕಳೊಂದಿಗೆ ಜಾಗೃತಿ ಜಾಥಾದಲ್ಲಿ ಹೆಜ್ಜೆ ಹಾಕಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ವಿಧಾನಸೌಧ ಮುಂಭಾಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಮಕ್ಕಳಲ್ಲಿ ಡ್ರಗ್ಸ್ ಸೇವನೆಯಿಂದ ಆಗಬಹುದಾದ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸುವ ವಿಚಾರಗಳನ್ನು ತೆರೆದಿಟ್ಟರು. ಹಾಗೆಯೇ ಇದೇ ವೇಳೆ ಡ್ರಗ್ಸ್ ವಿರುದ್ಧ ಹೋರಾಡಲು ಮಕ್ಕಳಿಗೆ ಉತ್ತೇಜನ ತುಂಬಿದರು.
ಮಾದಕ ವಸ್ತುಗಳು ಮುಂದಿನ ಪೀಳಿಗೆಯ ಭವಿಷ್ಯಕ್ಕೆ ಮಾರಕ ಆಗಲಿದೆ. ಹೀಗಾಗಿ ಇದನ್ನು ಕೊನೆಗೊಳಿಸಲು ನಾವೆಲ್ಲರೂ ಮಕ್ಕಳು, ಯುವಕರಲ್ಲಿ ಜಾಗೃತಿ ಮೂಡಿಸುವ ದಿನವನ್ನು ಆಚರಣೆ ಮಾಡುತ್ತಿದ್ದೇವೆ. ಮಕ್ಕಳು, ಯುವಕರು ಈ ದೇಶದ ಆಸ್ತಿ. ಅವರು ನಮ್ಮ ಸಂಸ್ಕೃತಿ ಉಳಿಸಿಕೊಂಡು, ವಿದ್ಯಾವಂತರಾಗಿ ವಿಶ್ವ ಮಟ್ಟದಲ್ಲಿ ಕೆಲಸ ಮಾಡುತ್ತಿರುವುದರಿಂದ ಇಂದು ಬೆಂಗಳೂರು, ರಾಜ್ಯ ಹಾಗೂ ದೇಶಕ್ಕೆ ವಿಶ್ವಮಟ್ಟದಲ್ಲಿ ಒಳ್ಳೆಯ ಹೆಸರು ಬಂದಿದೆ ಎಂದರು.
ಇಲ್ಲಿರುವ ಮಕ್ಕಳು ವಿಶ್ವದ ಯಾವುದೇ ಉನ್ನತ ಹುದ್ದೆಗೆ ಏರಬಹುದು. ಡಿ.ಕೆ.ಶಿವಕುಮಾರ್ ಕೂಡ ಆಗಬಹುದು. ನೀವು ಅಂದುಕೊಂಡಿದ್ದನ್ನು ಸಾಧಿಸಲು ಡ್ರಗ್ಸ್ ವ್ಯಸನದಂತಹ ದುಶ್ಚಟಗಳಿಂದ ದೂರ ಉಳಿಯಬೇಕು. ಆಗ ಮಾತ್ರ ಉತ್ತಮ ಸಾಧನೆ ಮಾಡಲು ಸಾಧ್ಯ. ಇಂದು ನಾನು ನಿಮ್ಮ ಜೊತೆ ಜಾಥಾದಲ್ಲಿ ಹೆಜ್ಜೆ ಹಾಕುತ್ತೇನೆ. ಈ ಜಾಥಾ ನಿಮ್ಮ ಜೀವನದುದ್ದಕ್ಕೂ ನೆನಪಿನಲ್ಲಿ ಉಳಿಯಲಿದೆ ಎಂದರು.
ನೀವೆಲ್ಲರೂ ಇಂದು ಇತ್ತ ವಿಧಾನಸೌಧ ಅಂದರೆ ಶಾಸಕಾಂಗ ಹಾಗೂ ಅತ್ತ ಹೈಕೋರ್ಟ್ ಅಂದರೆ ನ್ಯಾಯಾಂಗದ ಮುಂದೆ ಇದ್ದೀರಿ. ಇಡೀ ವಿಶ್ವದಲ್ಲೇ ಎಲ್ಲೂ ಶಾಸಕಾಂಗ ಹಾಗೂ ನ್ಯಾಯಾಂಗ ಎದುರುಬದುರು ಇಲ್ಲ. ಮುಂದೆ ಅಪ್ಪಿತಪ್ಪಿ ನಿಮ್ಮ ಸ್ನೇಹಿತರು ಅಥವಾ ಪರಿಚಯದವರಲ್ಲಿ ಯಾರಾದರೂ ಡ್ರಗ್ಸ್ ವ್ಯಸನಿಗಳಾದರೆ ಪೊಲೀಸರು ಬಂಧಿಸುತ್ತಾರೆ ಮತ್ತು ನ್ಯಾಯಾಲಯದಲ್ಲಿ ಶಿಕ್ಷೆ ಆಗಲಿದೆ ಎಂಬ ಸಂದೇಶ ನಿಮ್ಮ ಅರಿವಾಗಲಿ ಎಂದು ಈ ಕಾರ್ಯಕ್ರಮವನ್ನು ಮಾಡುತ್ತಿದ್ದೇವೆ ಎಂದರು.
ಕಳೆದೆರಡು ವರ್ಷಗಳಲ್ಲಿ ಡ್ರಗ್ಸ್ ದಂಧೆಯಲ್ಲಿ ದೊಡ್ಡ, ದೊಡ್ಡವರು ಸಿಕ್ಕಿಬಿದ್ದು ಯಾವ ರೀತಿ ಸಂಕಷ್ಟಗಳನ್ನು ಅನುಭವಿಸಿದ್ದಾರೆ ಎಂದು ನೀವು ನೋಡಿದ್ದೀರಿ. ನಿಮ್ಮ ಜೀವನದಲ್ಲಿ ಇದಕ್ಕೆ ಅವಕಾಶ ಮಾಡಿಕೊಡಬೇಡಿ. ಡ್ರಗ್ಸ್ ಅನ್ನು ನಮ್ಮ ರಾಜ್ಯದಲ್ಲಿ ಬೇರೆ ರಾಜ್ಯಗಳಿಗಿಂತ ಹೆಚ್ಚು ನಿಯಂತ್ರಣ ಮಾಡಲಾಗಿದೆ ಎಂದರು.
ಇನ್ನು ಕಳೆದ ಮೂರು ವರ್ಷಗಳಿಂದ ಅನೇಕ ಪಾದಯಾತ್ರೆಗಳಲ್ಲಿ ಪಾಲ್ಗೊಂಡಿದ್ದೇನೆ. ನೀರಿಗಾಗಿ ನಡಿಗೆ, ಸ್ವಾತಂತ್ರ್ಯ ನಡಿಗೆ, ಭಾರತ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದೇವೆ. ಇದೀಗ ಮತ್ತೆ ಡ್ರಗ್ಸ್ನಿಂದ ಆಗುವ ಸಮಸ್ಯೆಗಳ ಬಗ್ಗೆ ನಿಮಗೆ ಜಾಗೃತಿ ಮೂಡಿಸಲು ಇಂದು ನಿಮ್ಮ ಜೊತೆ ಹೆಜ್ಜೆ ಹಾಕಿದ್ದೇನೆ. ಡ್ರಗ್ಸ್ ಸೇವನೆ ಮಾಡಿದರೆ ಸಾವು, ನೋವು ಎರಡೂ ಬರುತ್ತದೆ. ಹೀಗಾಗಿ ಇದರ ಬಗ್ಗೆ ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಮನವಿ ಮಾಡಿದರು. ಅಲ್ಲದೆ ನೀವು ನಿಮ್ಮ ಸ್ನೇಹಿತರು, ಆತ್ಮೀಯರು ಆರೋಗ್ಯಕರ ಸಮಾಜವನ್ನು ನಿರ್ಮಾಣ ಮಾಡುವ ಉದ್ದೇಶದಿಂದ ಇಲ್ಲಿಗೆ ಬಂದಿದ್ದೀರಿ, ನಿಮಗೆ ಅಭಿನಂದನೆಗಳು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications