ದಯಾನಂದ ಸ್ವಾಮಿ ರಾಸಲೀಲೆ ಸಿ.ಡಿ ಪ್ರಕರಣ ಮತ್ತೆ ಜೀವಂತ
ಬೆಂಗಳೂರು, ನವೆಂಬರ್ 28 : ಯಲಹಂಕ ಬಳಿಯ ಹುಣಮಾರನಹಳ್ಳಿ ಮದ್ದೇವಣಾಪುರ ಜಂಗಮ ಮಠದ ದಯಾನಂದ ಸ್ವಾಮಿಯ ರಾಸಲೀಲೆ ಪ್ರಕರಣ ಇನ್ನೇನು ಜನರ ಸ್ಮೃತಿಯಿಂದ ಮಾಸುತ್ತಿದೆ ಎನ್ನುವಾಗ ರಾಸಲೀಲೆ ಸಿ.ಡಿಯಲ್ಲಿದ್ದ ಯುವತಿ ಇಂದು (ನವೆಂಬರ್ 28) ವಿಡಿಯೊ ಒಂದನ್ನು ಬಿಡುಗಡೆ ಮಾಡಿ ಪ್ರಕರಣಕ್ಕೆ ಮತ್ತೆ ಜೀವ ತಂದಿದ್ದಾಳೆ.
ರಾಸಲೀಲೆ ಸಿ.ಡಿಯಲ್ಲಿ ಸ್ವಾಮಿ ಜೊತೆ ಪಲ್ಲಂಗ ಹಂಚಿಕೊಂಡಿದ್ದ ಸ್ಯಾಂಡ್ಲ್ವುಡ್ ನಟಿ ಪ್ರಕರಣದ ಸಂಬಂಧ ತನ್ನ ಹೇಳಿಕೆ ಒಳಗೊಂಡ ವಿಡಿಯೊ ಒಂದನ್ನು ಬಿಡುಗಡೆ ಮಾಡಿದ್ದು, ತನಗೆ ಕೊಲೆ ಬೆದರಿಕೆ ಇರುವುದಾಗಿ ವಿಡಿಯೊದಲ್ಲಿ ಹೇಳಿದ್ದಾಳೆ.

ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ತನಗೆ ಆರೋಗ್ಯ ಸರಿಯಿಲ್ಲದ ಕಾರಣ ಹಾಗೂ ಕೊಲೆ ಬೆದರಿಕೆಗಳು ಇದ್ದ ಕಾರಣದಿಂದ ಇಷ್ಟು ದಿನ ಅಜ್ಞಾತವಾಗಿ ಇರಬೇಕಾಗಿ ಬಂದಿತ್ತು ಎಂದಿದ್ದಾಳೆ.
ಇನ್ನು ಮೂರು ನಾಲ್ಕು ದಿನಗಳಲ್ಲಿ ಬೆಂಗಳೂರಿಗೆ ಬಂದು ನನಗೆ ಕಿರುಕುಳ ಕೊಟ್ಟ, ನನ್ನನ್ನು ತಮ್ಮ ಲಾಭಕ್ಕೆ ಬಳಸಿಕೊಂಡ 10 ಜನರ ವಿರುದ್ಧ ದೂರು ದಾಖಲಿಸುವುದಾಗಿ ನಟಿ ಹೇಳಿದ್ದಾಳೆ.
"ನನ್ನ ಸ್ಥಿತಿ ಯಾವ ಹೆಣ್ಣಿಗೂ ಬಾರದೇ ಇರಲಿ ಎಂದು ಕಣ್ಣೀರು ಹಾಕಿರುವ ನಟಿ, ನನ್ನನ್ನು ಕೆಲವರು ವೈಯಕ್ತಿಕ ಲಾಭಕ್ಕೆ ದಾಳವಾಗಿ ಬಳಸಿಕೊಂಡಿದ್ದಾರೆ' ಎಂದಿದ್ದಾಳೆ. ಬೆಂಗಳೂರಿಗೆ ಬಂದು ಸುದ್ದಿಗೋಷ್ಠಿ ನಡೆಸಿ ಎಲ್ಲ ಸತ್ಯಗಳನ್ನು ಹೊರಗೆಡವುದಾಗಿಯೂ ಆಕೆ ಹೇಳಿದ್ದಾಳೆ.

ಆತ್ಮಹತ್ಯೆಗೆ ಯತ್ನಿಸಿದಾಗ ನನ್ನ ಕುಟುಂಬ ನನ್ನ ಬೆನ್ನಿಗೆ ನಿಂತು ಅನ್ಯಾಯ ಮಾಡಿದವರ ವಿರುದ್ಧ ಹೋರಾಡಲು ಶಕ್ತಿ ನೀಡಿದ್ದಾರೆ ಹಾಗಾಗಿ ಹೋರಾಡಲು ಮುಂದಾಗಿದ್ದೇನೆ ಎಂದು ಆಕೆ ಹೇಳಿದ್ದಾಳೆ.
ಸಿಡಿ ಬಿಡುಗಡೆ ಆಗಿ ವಿವಾದ ಉಂಟಾದಾಗ ನಟಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಳು.
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ?












Click it and Unblock the Notifications