ಸಿದ್ದರಾಮಯ್ಯ ಬಗ್ಗೆ ಕೋಡಿ ಶ್ರೀಗಳ ಭವಿಷ್ಯ: ಅಶ್ವತ್ಥ ನಾರಾಯಣ ಪ್ರತಿಕ್ರಿಯೆ
Recommended Video
ಬೆಂಗಳೂರು,ಸೆಪ್ಟೆಂಬರ್ 21: ಸಿದ್ದರಾಮಯ್ಯ ರಾಜಕೀಯ ಭವಿಷ್ಯ ಕುರಿತು ಕೋಡಿಮಠದ ಶ್ರೀಗಳು ನುಡಿದ ಭವಿಷ್ಯಕ್ಕೆ ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಹೀಗೆ ಪ್ರತಿಕ್ರಿಯಿಸಿದ್ದಾರೆ.
'ಸಿದ್ದರಾಮಯ್ಯ ಅವರ ಕುರಿತು ಕೋಡಿ ಶ್ರೀಗಳು ನುಡಿದಿರುವುದು ಅವರ ವೈಯಕ್ತಿಕ ಅಭಿಪ್ರಾಯ, ಆದರೆ ಬಿಜೆಪಿ ತನ್ನ ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿದೆ ಎನ್ನುವ ವಿಶ್ವಾಸ ನನಗಿದೆ' ಎಂದು ಹೇಳಿದ್ದಾರೆ.
ನಾವು ವಿಧಾನಸಭೆ ಚುನಾವಣೆಯಾಗಲೀ, ಲೋಕಸಭೆ ಚುನಾವಣೆಯಾಗಲೀ ಎದುರಿಸಲು ಸಿದ್ಧರಿದ್ದೇವೆ. ಕಾಂಗ್ರೆಸ್, ಜೆಡಿಎಸ್ಗೆ ಚುನಾವಣಾ ಭೀತಿ ಶುರುವಾಗಿದೆ.
ಮಧ್ಯಂತರ ಚುನಾವಣೆಗೆ ಹೋಗಲು ಯಾರು ತಯಾರಿಲ್ಲ. ಆದರೆ, ಸಿದ್ದರಾಮಯ್ಯ ಮತ್ತು ಎಚ್.ಡಿ ಕುಮಾರಸ್ವಾಮಿ ಚುನಾವಣೆ ಎನ್ನುವ ಮೂಲಕ ಅನರ್ಹ ಶಾಸಕರನ್ನು ಹೆದರಿಸುತ್ತಿದ್ದಾರೆ ಎಂದು ಹೇಳಿದರು.

ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ಬರುವುದಿಲ್ಲ, ಈಗಷ್ಟೇ ಅಲ್ಲ ಮುಂದೆಯೂ ಬಿಜೆಪಿ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ. ನಾವು ಇನ್ನಷ್ಟು ಸಧೃಡವಾಗಲಿದ್ದೇವೆ ಎಂದು ಅಭಿಪ್ರಾಯ ಪಟ್ಟರು.
ಸಿದ್ದರಾಮಯ್ಯ ಮತ್ತು ಎಚ್.ಡಿ ಕುಮಾರಸ್ವಾಮಿಗೆ ಚುನಾವಣೆ ಕಂಡರೆ ಭಾರೀ ಹೆದರಿಕೆ. ಚುನಾವಣೆಯೆಂದರೆ ಅವರಿಗೆ ನಿದ್ದೆಯೇ ಬರಲ್ಲ. ನಾವು ಎಲ್ಲಾ ಚುನಾವಣೆಗಳು ಸಿದ್ಧರಿದ್ದೇವೆ. ನಾವು ಅಧಿಕಾರಕ್ಕೆ ಬರುವ ಮುನ್ನ ಯಾವುದೇ ಚುನಾವಣೆ ಬರುವುದಿಲ್ಲ ಎಂದರು.
'ನಾನು ಹಿಂದೆಯೇ ಹೇಳಿದ್ದೆ ಕಂಬಳಿ ಹಾಸೀತು ಹಂಬಳಿ ಹಳಸೀತು, ಸಿದ್ದು ಗದ್ದುಗೆ ಹಾಸೀತು ಎಂದು ಈ ಹಿಂದೆಯೇ ಹೇಳಿದ್ದೆ. ಆಗ ಸಿದ್ದರಾಮಯ್ಯ ಸಿಎಂ ಆಗಿದ್ದರು ನನ್ನ ಮಾತು ಸುಳ್ಳಾಗಲಿಲ್ಲ. ಈಗ ಮತ್ತೆ ಶುಭ ಸೂಚನೆ ಇದೆ' ಎಂದು ಶ್ರೀಗಳು ಹೇಳಿದ್ದಾರೆ.
ಸಿದ್ದರಾಮಯ್ಯರಿಗೆ ನೀವು ರಾಜ್ಯದ ಗದ್ದುಗೆ ಹಿಡಿದಿದ್ದೀರಿ, ನೀವು ದೆಹಲಿಯ ಗದ್ದುಗೆ ಹಿಡಿಯಿರಿ ಎಂದು ಸಲಹೆ ನೀಡುತ್ತಿದ್ದೇನೆ. ಹಾಲುಮತ ಸಮಾಜದವರು ಇಡೀ ಭಾರತದಾದ್ಯಂತ ಎಲ್ಲಾ ರಾಜ್ಯಗಳಲ್ಲಿ ನೆಲೆಸಿದ್ದಾರೆ.
-
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
ಪತಿ ವಿಜಯ್ ದೇವರಕೊಂಡ ಜೊತೆ ಮೊದಲ ಬಾರಿಗೆ ತವರಿಗೆ ಬಂದ ರಶ್ಮಿಕಾ: ತಂದೆಯಿಂದ ಐಷಾರಾಮಿ ಬಂಗಲೆ ಉಡುಗೊರೆ -
Bengaluru Sambar: ಬೆಂಗಳೂರು ಹೋಟೆಲ್ಗಳಲ್ಲಿ ಸಾಂಬಾರ್ ಸ್ವೀಟ್ ಯಾಕೆ, ಇಲ್ಲಿದೆ ಕನ್ನಡಿಗರ ಯಕ್ಷ ಪ್ರಶ್ನೆಗೆ ಉತ್ತರ -
Dhurandhar 2: ಧುರಂಧರ್ 2 ಸಿನಿಮಾ ನೋಡಿ; ರಿವ್ಯೂ ಕೊಟ್ಟ ವಿರಾಟ್ ಕೊಹ್ಲಿ - ಅನುಷ್ಕಾ ಶರ್ಮಾ -
Manju Warrier: ನಟಿ ಮಂಜು ವಾರಿಯರ್ಗೆ ವೇದಿಕೆಯಲ್ಲೇ ಮುತ್ತಿಟ್ಟ ಹುಚ್ಚು ಅಭಿಮಾನಿ, ವೈರಲ್ ವಿಡಿಯೋ ಇಲ್ಲಿದೆ -
Job Resignation: ಇರೋ ಕೆಲಸಕ್ಕೆ ರಾಜೀನಾಮೆ ಕೊಡುವ ಮೊದಲು ಕೇಳಿಕೊಳ್ಳಬೇಕಾದ 17 ಪ್ರಶ್ನೆಗಳಿವು -
Content Creator: ಇನ್ಸ್ಟಾಗ್ರಾಂನಿಂದ ತಿಂಗಳಿಗೆ 70 ಲಕ್ಷ ರೂಪಾಯಿ ಗಳಿಕೆ: ಎಲ್ಲರ ಹುಬ್ಬೇರಿಸಿದ ಕೇರಳ ಕಂಟೆಂಟ್ ಕ್ರಿಯೇಟರ್












Click it and Unblock the Notifications