ವಿಪಕ್ಷ ನಾಯಕ ಸಿದ್ದರಾಮಯ್ಯರ ಟೀಕೆ ಅಚ್ಚರಿ ತಂದಿದೆ
ಬೆಂಗಳೂರು, ಜು. 16: ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದು ಹೊರಡಿಸಲಾಗಿರುವ ಸುಗ್ರೀವಾಜ್ಞೆಯನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಡಿಸಿಎಂ ಡಾ. ಸಿ.ಎನ್. ಅಶ್ವಥ್ ನಾರಾಯಣ ಹೇಳಿದರು.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಜತೆ ಮಾತನಾಡಿದ ಅವರು, ಪ್ರಗತಿಗೆ ಪೂರಕವಾದ ಈ ತಿದ್ದುಪಡಿ ಕಾಯ್ದೆಯನ್ನು ಹಿಂದೆ ಸದನದಲ್ಲಿ ಕಾಂಗ್ರೆಸ್ ಸದಸ್ಯರೇ ಬೆಂಬಲಿಸಿದ್ದರು. ಈಗ ನೋಡಿದರೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕೆ ಮಾಡುತ್ತಿರುವುದು ಅಚ್ಚರಿ ತಂದಿದೆ ಎಂದರು.
ಇಡೀ ದೇಶದಲ್ಲೇ ಒಂದು ಕಾಯ್ದೆ ಇದ್ದರೆ, ನಮ್ಮ ರಾಜ್ಯದಲ್ಲೇ ಒಂದು ಕಾಯ್ದೆ ಇತ್ತು. ಅದರಿಂದ ರೈತರಿಗೆ, ಜನರಿಗೆ ಅನುಕೂಲವಾಗಿದ್ದು ಏನೂ ಇಲ್ಲ. ಈವರೆಗೂ ಇದರ ದುರ್ಬಳಕೆ ಆಗಿ ವಿಪರೀತ ಭ್ರಷ್ಟಾಚಾರಕ್ಕೆ ಕಾರಣವಾಗಿತ್ತು. ಇದರಿಂದಾಗಿಯೇ ರಾಜ್ಯಕ್ಕೆ ಸಾಕಷ್ಟು ಹಾನಿಯಾಗಿದೆ. ಹಾಗೆ ನೋಡಿದರೆ ಈ ತಿದ್ದಪಡಿ ಕಾಯ್ದೆಯೂ ಪ್ರಗತಿಗೆ ಪೂರಕವಾದ ಕ್ರಮವಾಗಿದೆ ಎಂದು ಡಿಸಿಎಂ ಕಾಯ್ದೆಯನ್ನು ಸಮರ್ಥಿಸಿಕೊಂಡರು.

ವಿಧಾನಸಭೆಯಲ್ಲಿ ಚರ್ಚೆ ನಡೆಯಬೇಕಾದರೆ, ಇದೊಂದು ಅತ್ಯುತ್ತಮ ಕಾಯ್ದೆ. ಇದು ಜಾರಿಗೆ ಬರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೇ ಹೇಳಿದ್ದರು. ಈ ಬಗ್ಗೆ ಬಗ್ಗೆ ಟೀಕೆ ಮಾಡುತ್ತಿರುವವರು ಎದೆ ಮುಟ್ಟಿಕೊಂಡು ಆತ್ಮಾವಲೋಕನ ಮಾಡಿಕೊಳ್ಳಲಿ. ಇದು ಖಂಡಿತಾ ರೈತ ವಿರೋಧಿಯಲ್ಲ. ಕೆಲವರು ತಮ್ಮ ಏನೇನೋ ರಾಜಕೀಯ ಹುನ್ನಾರಗಳ ಕಾರಣಕ್ಕೆ ಭಿನ್ನಸ್ವರ ಹಾಡುತ್ತಿದ್ದಾರೆ. ಜನರನ್ನು ಹಾಳು ಮಾಡುವುದೇ ಕೆಲವರ ನಿತ್ಯ ಕೆಲಸವಾಗಿದೆ ಎಂದು ಡಿಸಿಎಂ ಹರಿಹಾಯ್ದರು.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications