ಅಪಾರ್ಟ್ಮೆಂಟ್ ಒಕ್ಕೂಟದ ಪ್ರತಿನಿಧಿಗಳ ಜತೆ ಸಂವಾದ ನಡೆಸಿದ ಡಿಸಿಎಂ
ಬೆಂಗಳೂರು, ಮೇ 20: ಲಾಕ್ಡೌನ್ ಹಿನ್ನೆಲೆಯಲ್ಲಿ ಬುಧವಾರ ಬೆಂಗಳೂರು ಅಪಾರ್ಟ್ಮೆಂಟ್ ಒಕ್ಕೂಟದ ಪ್ರತಿನಿಧಿಗಳ ಜತೆ ಬುಧವಾರ ವಿಡಿಯೊ ಸಂವಾದ ನಡೆಸಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು, ತಿಂಗಳಲ್ಲಿ ಅರ್ಧ ಗಂಟೆ ಕಾಲ ಅವರ ಸಮಸ್ಯೆಗಳ ಕುರಿತು ಚರ್ಚಿಸಲಾಗುವುದು ಎಂದು ಹೇಳಿದರು.
ನಗರದ 700 ಅಪಾರ್ಟ್ಮೆಂಟ್ಗಳು ಈ ಒಕ್ಕೂಟದಲ್ಲಿ ಸದಸ್ಯತ್ವ ಪಡೆದಿವೆ. ಒಂದೊಂದು ಕಡೆ ಒಂದೊಂದು ರೀತಿಯ ಸಮಸ್ಯೆಗಳು ಇದ್ದು ಆ ಬಗ್ಗೆ ಚರ್ಚಿಸಿ, ಪರಿಹಾರ ಕಲ್ಪಿಸಲಾಗುವುದು ಅಶ್ವತ್ಥನಾರಾಯಣ ಎಂದರು.
ಕೋವಿಡ್ ಸಂದರ್ಭದಲ್ಲಿ ಜನಜಾಗೃತಿ ಮೂಡಿಸುವುದರ ಜತೆಗೆ ಕೃಷಿ ಉತ್ಪನ್ನಗಳನ್ನು ನೇರವಾಗಿ ರೈತರಿಂದ ಖರೀದಿಸುವುದರ ಮೂಲಕ ಅಪಾರ್ಟ್ಮೆಂಟ್ ನಿವಾಸಿಗಳು ಮಾದರಿ ಕೆಲಸ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ನಾಗರಾಜ ರಾವ್, ಪ್ರಧಾನ ಕಾರ್ಯದರ್ಶಿ ವಿಕ್ರಮ್ ಸೇರಿದಂತೆ ಇತರರು ಮಾತನಾಡಿದರು. ವಾರ್ಡ್ ಸಮಿತಿಗಳಲ್ಲಿ ಅಪಾರ್ಟ್ಮೆಂಟ್ ನಿವಾಸಿಗಳನ್ನೂ ಸದಸ್ಯರನ್ನಾಗಿ ಮಾಡಬೇಕು; ಬೆಂಗಳೂರು ಸಮುದಾಯ ಕಾರ್ಯಪಡೆ ರಚಿಸುವಂತೆಯೂ ಅವರು ಆಗ್ರಹಿಸಿದರು.












Click it and Unblock the Notifications