ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗು ಸಂತ್ರಸ್ತರಿಗೆ ಕೇಂದ್ರ ನಯಾ ಪೈಸೆ ಕೊಟ್ಟಿಲ್ಲ: ಪರಂ ವಾಗ್ದಾಳಿ

By Nayana
|
Google Oneindia Kannada News

ಬೆಂಗಳೂರು, ಆಗಸ್ಟ್ 25: ಕೇಂದ್ರ ಸರ್ಕಾರವು ಕೊಡಗನ್ನು ನಿರ್ಲಕ್ಷಿಸಿದೆ, ಎನ್‌ಡಿಆರ್ಎಫ್ ಸಿಬ್ಬಂದಿ ಕಳುಹಿಸಿಕೊಟ್ಟಿದ್ದು ಬಿಟ್ಟರೆ ಕೇಂದ್ರದಿಂದ ನಯಾಪೈಸೆ ಸಹಾಯವಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಆರೋಪಿಸಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಡಗಿನಲ್ಲಿ ನೆರೆಯಿಂದ ಉಂಟಾದ ಹಾನಿ ಸರಿದೂಗಿಸಲು ಕೇಂದ್ರಕ್ಕೆ ಪ್ರಥಮ ಹಂತದಲ್ಲಿ 2 ಸಾವಿರ ಕೋಟಿ ರೂ. ಹಣಕಾಸಿನ ನೆರವು ನೀಡಬೇಕೆಂದು ಮನವಿ‌ ಮಾಡಿದ್ದೇವೆ ಎಂದರು. ಕೇಂದ್ರದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೊಡಗು ನೆರೆ ಹಾವಳಿ ವೀಕ್ಷಣೆ ವೇಳೆ ಜಿಲ್ಲಾ ಉಸ್ತುವಾರಿ ಸಚಿವರ ಮೇಲೆ ಕೂಗಾಡಿರುವುದು ಸರಿಯಲ್ಲ. ಈ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು.

ಕೊಡಗಿಗೆ 1 ಕೋಟಿ ನೀಡಿದ ಕೇಂದ್ರ ಸಚಿವೆ, ಹೆಚ್ಚಿನ ನೆರವಿಗೆ ಮನವಿ ಮಾಡುವುದಾಗಿ ಭರವಸೆಕೊಡಗಿಗೆ 1 ಕೋಟಿ ನೀಡಿದ ಕೇಂದ್ರ ಸಚಿವೆ, ಹೆಚ್ಚಿನ ನೆರವಿಗೆ ಮನವಿ ಮಾಡುವುದಾಗಿ ಭರವಸೆ

ನಿರ್ಮಲಾ ಸೀತಾರಾಮ್ ಅವರು ಕರ್ನಾಟಕದಿಂದ ರಾಜ್ಯ ಸಭೆಗೆ ಆಯ್ಕೆಯಾದವರು. ಅವರೇ ಮುಂದಾಳತ್ವ ವಹಿಸಿ, ಸಂಸದರ ನಿಯೋಗದೊಂದಿಗೆ ಪ್ರಧಾನಿ ಅವರ ಬಳಿ ಪರಿಹಾರ ನೀಡುವಂತೆ ಮನವಿ‌ ಮಾಡಬೇಕಿತ್ತು. ಆದರೆ, ಅವರು ತಡವಾಗಿ ಬಂದಿದ್ದಲ್ಲದೇ ಇಲ್ಲಿನ ಜಿಲ್ಲಾ ಉಸ್ತುವಾರಿ ಸಚಿವರ ಅವರ ಮೇಲೇ‌ ಕೂಗಾಡುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

DCM critics centre has not given single paisa for flood relief

ಪ್ರಧಾನಿ ನರೇಂದ್ರ ಮೋದಿ ಅವರು ಕೇರಳದ ನಷ್ಟದ ಅಂದಾಜು ಮುನ್ನವೇ ಹಣ ಬಿಡುಗಡೆ ಮಾಡಿದಂತೇ ನಮಗೂ ಮಾಡಬೇಕಿತ್ತು. ಆದರೆ, ಅವರು ನಿರಾಸಕ್ತಿ ತೋರಿದ್ದಾರೆ. ಕೊಡಗಿನ ನಷ್ಟ ಭರಿಸಲು ಸದ್ಯ 2 ಸಾವಿರ ಕೋಟಿ ರು. ಹಣಕಾಸಿನ ನೆರವು ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದೇವೆ ಎಂದು ವಿವರಿಸಿದರು.

ಕೇರಳ ರಾಜ್ಯ ಸಂಪರ್ಣ ಮಳೆಯಿಂದ ತೋಯ್ದಿದೆ. ಇಡೀ ರಾಜ್ಯವನ್ನೇ ಮರು ನಿರ್ಮಾಣ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ಕೇರಳ ಪರಿಸ್ಥಿತಿಗೆ ಇಡೀ ದೇಶವೇ ಮರುಗಿ, ನೆರವಿನ ಹೊಳೆ ಹರಿಯುತ್ತಿದೆ. ಜನಸಾಮಾನ್ಯರು ಕೈಲಾದ ಸಹಾಯ ಮಾಡುತ್ತಿದ್ದಾರೆ. ಕೇಂದ್ರ ಸರಕಾರ ಹಾಗೂ ಕರ್ನಾಟಕ ಸರಕಾರ ಸೇರಿದಂತೆ ಎಲ್ಲ ರಾಜ್ಯಗಳು ಸಹಾಯ ಹಸ್ತ ಚಾಚಿವೆ. ಬಿಬಿಎಂಪಿಯಿಂದಲೂ ಒಂದು ಕೋಟಿ‌ ರು. ನೀಡಿದ್ದೇವೆ ಎಂದರು.ಸಿದ್ಧಾರ್ಥ ಶಿಕ್ಷಣ ಸಂಸ್ಥೆ ವತಿಯಿಂದ ಕೇರಳಾಗೆ ಒಟ್ಟು 9 ಟ್ರಕ್ ಗಳಲ್ಲಿ ಅಗತ್ಯ ಪರಿಕರಗಳನ್ನು ಕಳುಹಿಸಿಕೊಡಲಾಗುತ್ತಿದೆ.

ಕೇರಳ ಪ್ರವಾಹ: ಯುಎಇ ನೆರವು ಕೇಂದ್ರ ತಿರಸ್ಕರಿಸಿದ್ದೇಕೆ ಗೊತ್ತೇ? ಕೇರಳ ಪ್ರವಾಹ: ಯುಎಇ ನೆರವು ಕೇಂದ್ರ ತಿರಸ್ಕರಿಸಿದ್ದೇಕೆ ಗೊತ್ತೇ?

ಕೊಡಗು ನೆರೆ ನಿರಾಶ್ರಿತರಿಗೆ ಕಳೆದ ವಾರ ನಾಲ್ಕು ಟ್ರಕ್ ಗಳಲ್ಲಿ ಪರಿಕರ ಸಾಮಾಗ್ರಿ ಕಳುಹಿಸಿಕೊಟ್ಟಿದ್ದೆವು. ಬಿಬಿಎಂಪಿ, ಬಿಡಿಎ, ಬಿಡಬ್ಲ್ಯೂಎಸ್‌ಎಸ್‌ಬಿ ಹಾಗೂ ಬಿಎಂಆರ್ ಡಿಎಯಿಂದ ತಲಾ ಒಂದು ಕೋಟಿ ರು. ಪರಿಹಾರ, ಜೊತೆಗೆ ಪೊಲೀಸ್ ಸಿಬ್ಬಂದಿಯ ಒಂದು ದಿನ ಸಂಬಳದ 5.82 ಕೋಟಿ ರು. ಹಣವನ್ನು ಕೊಡುಗು‌ ನೆರೆ ನಿರಾಶ್ರಿತರಿಗೆ ನೀಡಿದ್ದೇವೆ ಎಂದರು.

English summary
Deputy Chief Minister Dr.G. Parameshwara has criticized the central government that not given single paisa relief fund for Kodagu flood despite NDRF assistance.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X