ಬೆಂಗಳೂರಿನ ಈ ಭಾಗದಲ್ಲಿ ಟ್ರಾಫಿಕ್ಗೆ ಮುಕ್ತಿ! ಡಿಸಿಎಂ ಕೊಟ್ರು ಸಿಹಿಸುದ್ದಿ
ಸಿಲಿಕಾನ್ ಸಿಟಿ ಹಾಗೂ ಐಟಿ ಹಬ್ ಖ್ಯಾತಿ ಪಡೆದಿರುವ ಬೆಂಗಳೂರಿಗೆ ಟ್ರಾಫಿಕ್ ಸಿಟಿ ಎನ್ನುವ ಮತ್ತೊಂದು ಹೆಸರೂ ಇದೆ. ಬೆಂಗಳೂರಿನ ಬೆಳ್ಳಂದೂರು ಭಾಗದಲ್ಲಿ ಐಟಿ ಕಂಪನಿಗಳು ಹೆಚ್ಚಾಗಿರುವುದರಿಂದ ಇಲ್ಲಿ ಟ್ರಾಫಿಕ್ ಸಮಸ್ಯೆ ಕೂಡ ಹೆಚ್ಚಾಗಿತ್ತು. ಇದಕ್ಕೆ ಕಡಿವಾಣ ಹಾಕಲು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಪಣ ತೊಟ್ಟಿದ್ದಾರೆ.
ಈ ಬಗ್ಗೆ ಸಿಹಿಸುದ್ದಿ ನೀಡಿರುವ ಡಿ.ಕೆ.ಶಿವಕುಮಾರ್ ಅವರು, ಬೆಳ್ಳಂದೂರಿನ ಟ್ರಾಫಿಕ್ ಸಮಸ್ಯೆಗೆ ಕಡಿವಾಣ ಹಾಕಲು ರಕ್ಷಣಾ ಇಲಾಖೆಯ 22 ಎಕರೆ ಜಮೀನನ್ನು ಸರ್ಕಾರ ಖರೀದಿಸುತ್ತಿದೆ ಎಂದು ಹೇಳಿದ್ದಾರೆ. ಈ ಸಂಬಂಧ ಇಂದು ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಹಿರಿಯ ಸೇನಾಧಿಕಾರಿ, ಲೆಫ್ಟಿನೆಂಟ್ ಜನರಲ್ ಬಸಂತ್ ಕುಮಾರ್ ರೆಪ್ಸ್ವಾಲ್ ಕೂಡ ಇದ್ದರು.

ಟ್ರಾಫಿಕ್ಗೆ ಮುಕ್ತಿ ನೀಡಲು ಜಮೀನು ಖರೀದಿಸುವ ಬಗ್ಗೆ ರಕ್ಷಣಾ ಇಲಾಖೆ ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿಯಾಗಿದ್ದೇನೆ. ಜಮೀನು ನೀಡುವ ಬಗ್ಗೆ ಮನವಿಯೂ ಮಾಡಿದ್ದೇನೆ. ಹಾಗಾಗಿ ಈ ಭಾಗದಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಿಸಲು ಪರ್ಯಾಯ ರಸ್ತೆ ನಿರ್ಮಿಸಲು ನಿರ್ಧರಿಸಿದ್ದೇವೆ. ಇದಕ್ಕಾಗಿ 12 ಎಕರೆ ಜಮೀನು ಕೊಡಲು ರಕ್ಷಣಾ ಇಲಾಖೆ ಕೂಡ ಒಪ್ಪಿದೆ ಎಂದಿದ್ದಾರೆ.
ಇದರ ಜೊತೆಗೆ ಈಜೀಪುರ ಹಾಗೂ ಬೆಳ್ಳಂದೂರು ನಡುವಿನ ರಸ್ತೆಗಾಗಿ ಟೆಂಡರ್ ಕೂಡ ಕರೆದಿದ್ದೇನೆ. ಹೀಗಾಗಿ ಲೆಫ್ಟಿನೆಂಟ್ ಜನರಲ್ ಬಸಂತ್ ಕುಮಾರ್ ರೆಪ್ಸ್ವಾಲ್ ಅವರನ್ನು ಕರೆದು ಧನ್ಯವಾದ ಹೇಳಿದ್ದೇನೆ. ಬೆಂಗಳೂರಿನ ಮತ್ತೊಂದು ಟ್ರಾಫಿಕ್ ಜಾಮ್ ಹೆಚ್ಚಾಗಿರುವ ಹೆಬ್ಬಾಳ ಕಡೆಗೂ 10 ಎಕರೆ ಜಾಗ ನೀಡುವಂತೆ ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಟ್ರಾಫಿಕ್ ಸಮಸ್ಯೆ ನೀಗಿಸಲು ಒಟ್ಟಾರೆಯಾಗಿ 22 ಎಕರೆ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಬೆಂಗಳೂರು ನಗರದಲ್ಲಿ ಇನ್ನೂ ತುಂಬಾ ಗುಂಡಿಗಳಿವೆ. ಅವುಗಳ ದುರಸ್ತಿ ಮಾಡುತ್ತೇವೆ. ನಮ್ಮ ಅಧಿಕಾರಿಗಳು ಒಳ್ಳೆಯ ಕೆಲಸ ಮಾಡಿದ್ದಾರೆ. ಈ ಸಬಂಧ ಮತ್ತೊಂದು ಪರಿಶೀಲನಾ ಸಭೆ ಕರೆಯುತ್ತೇನೆ ಎಂದಿದ್ದಾರೆ.
ಸ್ವಚ್ಛತಾ ಕಾರ್ಯಕ್ರಮ: ಮಹಾತ್ಮಾ ಗಾಂಧೀಜಿ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕಿ ನೂರು ವರ್ಷಗಳಾಗಿವೆ. ಅದಕ್ಕಾಗಿ ಈ ಬಾರಿಯ ಗಾಂಧಿ ಜಯಂತಿಯನ್ನು ವಿಶೇಷವಾಗಿ ಆಚರಿಸಲು ಚಿಂತಿಸಿದ್ದೇವೆ. ಮೊದಲ ಹಂತವಾಗಿ ಸ್ವಚ್ಛತಾ ಕಾರ್ಯಕ್ರಮ ಮಾಡುತ್ತಿದ್ದೇವೆ. ಜಿಲ್ಲಾ, ತಾಲೂಕಿನ ಹಾಗೂ ಪಾಲಿಕೆಗಳ ಮಟ್ಟದಲ್ಲಿ ಗಾಂಧಿ ನಡಿಗೆ ಹಮ್ಮಿಕೊಂಡಿದ್ದೇವೆ ಎಂದು ಡಿಕೆಶಿ ಮಾಹಿತಿ ನೀಡಿದ್ದಾರೆ.
ಇದು ಒಂದು ಕಿ.ಮೀ ನಡಿಗೆ ಇರುತ್ತದೆ. ಬೆಂಗಳೂರಿನಲ್ಲಿ ಗಾಂಧಿ ಭವನದಿಂದ ಗಾಂಧಿ ಪ್ರತಿಮೆಯವರೆಗೂ ನಡಿಗೆ ಹಮ್ಮಿಕೊಂಡಿದ್ದೇವೆ. ಪಕ್ಷ ಭೇದ ಮರೆತು ಎಲ್ಲರೂ ಇದರಲ್ಲಿ ಭಾಗಿಯಾಗಬೇಕು. ಸ್ವಚ್ಛತೆಗಾಗಿ ಈ ಕಾರ್ಯಕ್ರಮ ಮಾಡುತ್ತಿದ್ದೇವೆ. ಇದೇ ವೇಳೆ ಸ್ವಚ್ಛತೆ ಕಾಪಾಡಲು ಪ್ರತಿಜ್ಞೆ ಹಮ್ಮಿಕೊಂಡಿದ್ದೇವೆ ಎಂದಿದ್ದಾರೆ.
ಈ ಕಾರ್ಯಕ್ರಮಕ್ಕಾಗಿ ಆ್ಯಪ್ ಸಹ ತಯಾರು ಮಾಡುತ್ತಿದ್ದೇವೆ. ಎಲ್ಲರೂ ಸಹ ಈ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು. ಸ್ವಚ್ಛತೆ ಬಗ್ಗೆ ನಾವು ಈ ಕಾರ್ಯಕ್ರಮ ಮಾಡುತ್ತೇವೆ. ಒಂದು ವರ್ಷ ಒಂದೊಂದು ಕಡೆ ಈ ಕಾರ್ಯಕ್ರಮ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications