Get Updates
Get notified of breaking news, exclusive insights, and must-see stories!

ರಾಜ್ಯದ ಜನತೆ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸ್ವೀಕರಿಸಿದ್ದಾರೆ: ಪರಮೇಶ್ವರ

ಬೆಂಗಳೂರು, ನವೆಂಬರ್ 6: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್‌ ಮೈತ್ರಿ ಜಯ ಗಳಿಸುವ ಮೂಲಕ ಬಿಜೆಪಿಗೆ ಮುಖಭಂಗ ಮಾಡಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜನತೆ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು. ನಾವೇ ಗೆಲ್ಲುತ್ತೇವೆ ಎಂದು ಬೀಗುತ್ತಿದ್ದ ಬಿಜೆಪಿಗೆ ಜನರು ಮುಖಭಂಗ ಆಗುವಂತೆ ಮಾಡಿದ್ದಾರೆ. ಈ ಚುನಾವಣೆ ಮುಂದಿನ ಲೋಕಸಭಾ ಚುನಾವಣೆ ಗೆಲುವಿನ‌ ಮುನ್ಸೂಚನೆ ಎಂದರು.

ಬಳ್ಳಾರಿ ಕ್ಷೇತ್ರವನ್ನೇ ಭದ್ರ ಕೋಟೆಯನ್ನಾಗಿ ಮಾಡಿ ಕೊಂಡಿದ್ದ ಬಿಜೆಪಿಗೆ ಅಲ್ಲಿನ‌ ಮತದಾರರು ಪಾಠ ಕಲಿಸಿದ್ದಾರೆ. ಬಿಜೆಪಿ ಭದ್ರ ಕೋಟೆ ಒಡೆದು, ಕಾಂಗ್ರೆಸ್‌ ತನ್ನ ಅಸ್ತಿತ್ವ ಸಾರಿದೆ. ಈ‌ ಮೊದಲು ಕೂಡ ಬಳ್ಳಾರಿ ಕಾಂಗ್ರೆಸ್‌ ಕೋಟೆಯಾಗಿತ್ತು ಎಂದರು.

DCM describes victory is peoples acceptance of coalition govt

ಶಿವಮೊಗ್ಗ ಕ್ಷೇತ್ರದಲ್ಲಿ ಕಳೆದ ಬಾರಿ ಎರಡು ಲಕ್ಷಕ್ಕೂ ಹೆಚ್ಚು ಅಂತರದಲ್ಲಿ ಬಿಜೆಪಿ ಗೆದ್ದಿತ್ತು. ಈ ಬಾರಿ ಕೇವಲ 52 ಸಾವಿರ ಮತಗಳ ಅಂತದಲ್ಲಿ ಗೆದ್ದಿದೆ. ಅಂದರೆ ಶಿವಮೊಗ್ಗದಲ್ಲೂ ಒಂದು ರೀತಿಯ ಸೋಲು ಅನುಭವಿಸಿದೆ. ಹೀಗಾಗಿ ಐದು ಕ್ಷೇತ್ರದಲ್ಲೂ ಮೈತ್ರಿ ಪಕ್ಷವೇ ಗೆದ್ದಂತಾಗಿದೆ.

ಈ ಗೆಲುವು ಕಾಂಗ್ರೆಸ್ ಜೆಡಿಎಸ್ ‌ಮೈತ್ರಿ ಸರಕಾರಕ್ಕೆ ಮತದಾರರ ಒಪ್ಪಿಗೆ ಮುದ್ರೆ ಒತ್ತಿದ್ದು, ಐದು ವರ್ಷ ನಮ್ಮ ಸರಕಾರ ಸುಭದ್ರವಾಗಿರಲಿದೆ ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+