ರಾಜ್ಯದ ಜನತೆ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸ್ವೀಕರಿಸಿದ್ದಾರೆ: ಪರಮೇಶ್ವರ
ಬೆಂಗಳೂರು, ನವೆಂಬರ್ 6: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಜಯ ಗಳಿಸುವ ಮೂಲಕ ಬಿಜೆಪಿಗೆ ಮುಖಭಂಗ ಮಾಡಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜನತೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು. ನಾವೇ ಗೆಲ್ಲುತ್ತೇವೆ ಎಂದು ಬೀಗುತ್ತಿದ್ದ ಬಿಜೆಪಿಗೆ ಜನರು ಮುಖಭಂಗ ಆಗುವಂತೆ ಮಾಡಿದ್ದಾರೆ. ಈ ಚುನಾವಣೆ ಮುಂದಿನ ಲೋಕಸಭಾ ಚುನಾವಣೆ ಗೆಲುವಿನ ಮುನ್ಸೂಚನೆ ಎಂದರು.
ನಾಲ್ಕು ಕ್ಷೇತ್ರದಲ್ಲಿ ಗೆಲುವು, ಶಿವಮೊಗ್ಗದಲ್ಲಿ ನೈತಿಕ ಗೆಲುವು: ಕುಮಾರಸ್ವಾಮಿ
ಬಳ್ಳಾರಿ ಕ್ಷೇತ್ರವನ್ನೇ ಭದ್ರ ಕೋಟೆಯನ್ನಾಗಿ ಮಾಡಿ ಕೊಂಡಿದ್ದ ಬಿಜೆಪಿಗೆ ಅಲ್ಲಿನ ಮತದಾರರು ಪಾಠ ಕಲಿಸಿದ್ದಾರೆ. ಬಿಜೆಪಿ ಭದ್ರ ಕೋಟೆ ಒಡೆದು, ಕಾಂಗ್ರೆಸ್ ತನ್ನ ಅಸ್ತಿತ್ವ ಸಾರಿದೆ. ಈ ಮೊದಲು ಕೂಡ ಬಳ್ಳಾರಿ ಕಾಂಗ್ರೆಸ್ ಕೋಟೆಯಾಗಿತ್ತು ಎಂದರು.
ಜೆಡಿಎಸ್ ಭದ್ರ ಕೋಟೆ ಮಂಡ್ಯ ಮತ್ತೆ 'ಗೌಡರ' ವಶಕ್ಕೆ
ಶಿವಮೊಗ್ಗ ಕ್ಷೇತ್ರದಲ್ಲಿ ಕಳೆದ ಬಾರಿ ಎರಡು ಲಕ್ಷಕ್ಕೂ ಹೆಚ್ಚು ಅಂತರದಲ್ಲಿ ಬಿಜೆಪಿ ಗೆದ್ದಿತ್ತು. ಈ ಬಾರಿ ಕೇವಲ 52 ಸಾವಿರ ಮತಗಳ ಅಂತದಲ್ಲಿ ಗೆದ್ದಿದೆ. ಅಂದರೆ ಶಿವಮೊಗ್ಗದಲ್ಲೂ ಒಂದು ರೀತಿಯ ಸೋಲು ಅನುಭವಿಸಿದೆ. ಹೀಗಾಗಿ ಐದು ಕ್ಷೇತ್ರದಲ್ಲೂ ಮೈತ್ರಿ ಪಕ್ಷವೇ ಗೆದ್ದಂತಾಗಿದೆ.
ಸಂಪುಟ ವಿಸ್ತರಣೆ, ನಿಗಮ-ಮಂಡಳಿ ನೇಮಕಕ್ಕೆ ಇಂದಿನಿಂದ ಶ್ರೀಕಾರ!
ಈ ಗೆಲುವು ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರಕಾರಕ್ಕೆ ಮತದಾರರ ಒಪ್ಪಿಗೆ ಮುದ್ರೆ ಒತ್ತಿದ್ದು, ಐದು ವರ್ಷ ನಮ್ಮ ಸರಕಾರ ಸುಭದ್ರವಾಗಿರಲಿದೆ ಎಂದರು.