ಅನಧಿಕೃತ ಕಟ್ಟಡ ಪರವಾನಗಿ ರದ್ದುಪಡಿಸಲು ಅಧಿಕಾರಿಗಳಿಗೆ ಡಿಸಿಎಂ ಸೂಚನೆ
ಬೆಂಗಳೂರು, ಜನವರಿ 9: ಅನಧಿಕೃತವಾಗಿ ವಸತಿ ಪ್ರದೇಶದಲ್ಲಿ ವಾಣಿಜ್ಯ ಚಟುವಟಿಕೆ ನಡೆಸುತ್ತಿರುವವ ಪರವಾನಗಿ ರದ್ದುಪಡಿಸುವಂತೆ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ಸೂಚನೆ ನೀಡಿದ್ದಾರೆ.
ಪಾದಚಾರಿ ಮಾರ್ಗದಲ್ಲಿ ಅಂಗಡಿಗಳನ್ನು ಇಡಲಾಗಿದೆ. ಎಷ್ಟು ಪಾದಚಾರಿ ಮಾರ್ಗಗಳು ಒತ್ತುವರಿಯಾಗಿದೆ ಎಂಬ ಸೂಕ್ತ ಮಾಹಿತಿ ಕೂಡ ಇಲ್ಲ, ಅದರ ಬಗ್ಗೆ ಸಮೀಕ್ಷೆ ನಡೆಸಿ ಮಾದಚಾರಿ ಮಾರ್ಗವನ್ನು ತೆರವುಗೊಳಿಸುವ ಕೆಲಸ ಆರಂಭಿಸಬೇಕು.
ವ್ಯಾಪಾರ ಪರವಾನಗಿ ಇಲ್ಲದ ಮಳಿಗೆಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ ನೀಡಿರು ಕುರಿತು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಮುಂದಿನ ದಿನಗಳಲ್ಲಿ ಪರವಾನಗಿ ಇಲ್ಲದವರಿಗೆ ಯಾವುದೇ ಸಂಪರ್ಕ ಕೊಡುವಂತಿಲ್ಲ, ಅನಧಿಕೃತ ಮಳಿಗೆಗಳು, ಬಾರ್, ರೆಸ್ಟೋರೆಂಟ್ ತೆರೆಯಲು ಅವಕಾಶ ನೀಡಬಾರದು ಎಂದರು.

ಹಾಗೆಯೇ ಅನಧಿಕೃತ ಆಪ್ಟಿಕಲ್ ಕೇಬಲ್ ತೆರವು ಕಾರ್ಯ ಮುಂದುವರೆಸಬೇಕು, ಎಂಟು ಸಾವಿರ ಕಿ.ಮೀ ಮಾರ್ಗದಲ್ಲಿ ಅನಧಿಕೃತ ಕೇಬಲ ತೆರವು ಗೊಳಿಸಲಾಗಿದೆ. ನಗರದಲ್ಲಿ ಪ್ಲಾಸ್ಟಿಕ್ ಬ್ಯಾನ್ ಮಾಡಿದ್ದರೂ ಕೆಲ ಕೈಗಾರಿಕೆಗಳು ಪ್ಲಾಸ್ಟಿಕ್ ತಯಾರಿಸುತ್ತಿದ್ದಾರೆ ಈ ಕುರಿತು ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಹೇಳಿದರು.












Click it and Unblock the Notifications