ಚನ್ನಪಟ್ಟಣದ ಜನರ ಋಣ ತೀರಿಸುವೆ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್!
ಕರ್ನಾಟಕದಲ್ಲಿ ಚುನಾವಣೆ ಅಬ್ಬರ ಸದ್ಯಕ್ಕೆ ಮುಗಿದಿಲ್ಲ, ಯಾಕಂದ್ರೆ ಇದೀಗ ಉಪಚುನಾವಣೆ ಅಖಾಡ ರಂಗೇರುತ್ತಿದೆ. ಹೇಗೆ ಅಂದ್ರೆ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡೋದಕ್ಕೆ, ತಮ್ಮ ಶಾಸಕ ಸ್ಥಾನ ಬಿಟ್ಟುಕೊಟ್ಟ ನಾಯಕರ ಸ್ಥಾನಗಳಿಗೆ ಈಗ ಚುನಾವಣೆ ನಡೆಯಲಿದೆ. ಈ ಪೈಕಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರವು ಭರ್ಜರಿ ರಂಗ ಪಡೆದಿದೆ. ಅದರಲ್ಲೂ ಡಿಸಿಎಂ ಡಿ.ಕೆ. ಶಿವಕುಮಾರ್ ಇಲ್ಲಿಂದ ಅಖಾಡ ಪ್ರವೇಶ ಮಾಡುತ್ತಾರೆ ಎಂಬ ಸುದ್ದಿಗಳ ನಡುವೆ ಮಹತ್ವದ ಹೇಳಿಕೆ ಹೊರಬಿದ್ದಿದೆ.
ಅಂದಹಾಗೆ ಚನ್ನಪಟ್ಟಣ ಕ್ಷೇತ್ರದಿಂದ ವಿಧಾನಸಭೆ ಉಪಚುನಾವಣೆಗೆ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿದೆ. ಹೀಗಿದ್ದಾಗ ಚನ್ನಪಟ್ಟಣ ಕ್ಷೇತ್ರ ವ್ಯಾಪ್ತಿಯಲ್ಲಿ ಅವರು ಫುಲ್ ಆಕ್ಟಿವ್ ಆಗಿದ್ದು, ಚನ್ನಪಟ್ಟಣ ಅಭಿವೃದ್ಧಿ ಕುರಿತು ಈಗ ಮಹತ್ವದ ಹೇಳಿಕೆ ನೀಡಿದ್ದಾರೆ. ಯಾರು ಏನೇ ಟೀಕೆ ಮಾಡಲಿ. ನಾನು ಚನ್ನಪಟ್ಟಣ ಕ್ಷೇತ್ರದ ಜನರ ಋಣ ತೀರಿಸುತ್ತೇನೆ ಎಂದಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಈ ಹಿಂದೆ ನಾನು ಇಲ್ಲಿ ಶಾಸಕನಾಗಿದ್ದಾಗಲೂ ಅಧಿಕಾರಿಗಳನ್ನು ಹಳ್ಳಿಗಳಿಗೆ ಕರೆದುಕೊಂಡು ಹೋಗಿ ಜನರ ಸಮಸ್ಯೆ ಆಲಿಸಿ ಪರಿಹಾರ ನೀಡುವ ಕೆಲಸ ಮಾಡಿದ್ದೆ. ಈಗಲೂ ಅದೇ ಕೆಲಸ ಮುಂದುವರಿಸುವೆ ಎಂದಿದ್ದಾರೆ ಡಿಸಿಎಂ.

ಸೈಟ್ ಹಂಚಿಕೆ ಬಗ್ಗೆ ಮಾಹಿತಿ
ಕಳೆದ ಐದು ವರ್ಷಗಳಲ್ಲಿ ತಾಲೂಕಿನ ಬಡವರಿಗೆ ಒಂದೇ ಒಂದು ನಿವೇಶನ ಹಂಚಿಕೆ ಮಾಡಿಲ್ಲ. ಯಾರೊಬ್ಬರಿಗೂ, ಬಗರ್ ಹುಕಂ ಸಾಗುವಳಿ ಜಮೀನು ನೀಡಿಲ್ಲ. ಆಶ್ರಯ ಸಮಿತಿ ಸಭೆ ಕೂಡ ಮಾಡಿಲ್ಲ ಎಂಬ ವಿಚಾರ ತಿಳಿಯಿತು. ಈ ಹಿಂದೆ ಇದ್ದವರು ಯಾಕೆ ಮಾಡಲಿಲ್ಲ ಎಂದು ಇದೀಗ ನಾನು ಪ್ರಶ್ನೆ ಮಾಡುವುದಿಲ್ಲ. ಯಾರಿಗೆ ನಿವೇಶನವಿಲ್ಲ ಆಯಾ ಊರಲ್ಲಿ ಸರ್ಕಾರವೇ 2 ರಿಂದ 3 ಎಕರೆ ಜಮೀನು ಖರೀದಿಸಿ ಲೇಔಟ್ ಮಾಡಿ ಬಡವರಿಗೆ ನಿವೇಶನ ಹಂಚಿಕೆ ಮಾಡಲಿದೆ ಎಂದು, ಇದೇ ವೇಳೆ ಭರವಸೆ ನೀಡಿದ್ದಾರೆ ಡಿಸಿಎಂ ಡಿ.ಕೆ. ಶಿವಕುಮಾರ್.
50 ಕೋಟಿ ರೂಪಾಯಿ ತರುತ್ತೇವೆ!
ಮತ್ತೊಂದು ಕಡೆ ಚನ್ನಪಟ್ಟಣದ ಬಡವರಿಗೆ ನಿವೇಶನ ನೀಡಲು 50 ಕೋಟಿ ರೂ. ಹಣ ತಂದು 50 ರಿಂದ 100 ಎಕರೆ ಜಾಗದಲ್ಲಿ ಲೇಔಟ್ ಮಾಡ್ತೀವಿ. ಬಡವರಿಗೆ ಮನೆ ಕಟ್ಟಿಕೊಡಲಾಗುವುದು. ಮುಂದೆ ಇಲ್ಲಿ ನಮ್ಮ ಶಾಸಕರು ಆಯ್ಕೆ ಆಗುತ್ತಾರೆ. ಕನಿಷ್ಠ 10 ಸಾವಿರ ಜನರಿಗೆ ಸೈಟ್ ಹಂಚಿಕೆ ಮಾಡುತ್ತೇವೆ. ತಾಲೂಕಿನ 94% ಅಂದ್ರೆ ಸುಮಾರು 64 ಸಾವಿರ ಬಡ ಕುಟುಂಬದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ತಲುಪಿದೆ. ಇನ್ನು 7-8 % ಫಲಾನುಭವಿಗಳಿಗೆ ತಲುಪಬೇಕಿದೆ. ಇದಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಒಟ್ನಲ್ಲಿ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ಸಮೀಪ ಇರುವಾಗಲೇ ಮಹತ್ವದ ಹೇಳಿಕೆ, ಬೆಳವಣಿಗೆ ನಡೆಯುತ್ತಿವೆ. ಅದರಲ್ಲೂ ಈ ಬಾರಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಯುದ್ಧ ಶುರುವಾಗುವುದು ಪಕ್ಕಾ ಎಂಬ ಮಾತು ಕೇಳಿಬಂದಿದೆ. ಅದರಲ್ಲೂ ಈ ಕ್ಷೇತ್ರದಲ್ಲಿ ಗೆದ್ದು, ಮತ್ತೊಮ್ಮೆ ತಮ್ಮ ವಶಕ್ಕೆ ಪಡೆಯಬೇಕು ಎಂಬುದು ಕಾಂಗ್ರೆಸ್ ನಾಯಕರ ಗುರಿ ಆಗಿದೆ. ಈ ಕಾರಣಕ್ಕೆ, ಈ ತಿಕ್ಕಾಟದಲ್ಲಿ ಜಯ ಯಾರಿಗೆ? ಅನ್ನೋದನ್ನ ಕಾದು ನೋಡಬೇಕಿದೆ.
-
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ












Click it and Unblock the Notifications