ಹೆರಿಗೆ ಆಸ್ಪತ್ರೆಯಲ್ಲಿ ಮತ್ತೊಂದು ಎಡವಟ್ಟು ಮಾಡಿದ ಪರಮೇಶ್ವರ
Recommended Video
ಬೆಂಗಳೂರು, ನವೆಂಬರ್ 23: ಗಂಗಾನಗರ ಹೆರಿಗೆ ಆಸ್ಪತ್ರೆಗೆ ಪರಿಶೀಲನೆಗೆಂದು ತೆರಳಿದ್ದ ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ ಮತ್ತೊಂದು ಎಡವಟ್ಟು ಮಾಡಿದ್ದಾರೆ.
ಆಸ್ಪತ್ರೆಯ ಶಸ್ತ್ರ ಚಿಕಿತ್ಸಾ ಘಟಕ ಹಾಗೂ ಹೆರಿಗೆ ವಾರ್ಡ್ಗೆ ಚಪ್ಪಲಿ ಹಾಕಿಕೊಂಡು ಹೋಗಿ ಎಡವಟ್ಟು ಮಾಡಿಕೊಂಡಿದ್ದಾರೆ, ಇದರಿಂದ ರೋಗಿಗಳು ಹಾಗೂ ವೈದ್ಯರು ಬೇಸರ ವ್ಯಕ್ತಪಡಿಸಿದ್ದಾರೆ.
ಇಂದಿರಾ ಕ್ಯಾಂಟೀನ್ನಲ್ಲಿ ತಿಂಡಿ ತಿನ್ನೋಕೆ ಹೋದ ಡಿಸಿಎಂ ಪೇಚಿಗೆ ಸಿಲುಕಿದ್ರು
ಶುಕ್ರವಾರ ಬೆಳಗ್ಗೆ ಡಿಸಿಎಂ ಪರಮೇಶ್ವರ, ಮೇಯರ್ ಗಂಗಾಂಬಿಕೆ ನಾಗರಾಜ್ ಹಾಗೂ ಬಿಬಿಎಂಪಿ ಆಯುಕ್ತರು ಸೇರಿ ನಗರ ಪ್ರದಕ್ಷಿಣೆ ಕೈಗೊಂಡಿದ್ದಾರೆ.
ಮೊದಲು ದೇವಸಂದ್ರದಲ್ಲಿರುವ ಇಂದಿರಾ ಕ್ಯಾಂಟೀನ್ಗೆ ಭೇಟಿ ನೀಡಿ ಬಿಸಿಬೇಳೆ ಬಾತ್ ತಿನ್ನುವ ಸಂದರ್ಭದಲ್ಲಿ ಚಮಚವಿಲ್ಲದೆ ಪೇಚಿಗೆ ಸಿಲುಕಿದ್ದರು ನಂತರ ಆಸ್ಪತ್ರೆ ಪರಿಶೀಲನೆಗೆ ತೆರಳಿ ರೋಗಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ರೈತರ ಬಗ್ಗೆ ಮಾತನಾಡಲು ಬಿಜೆಪಿಗೆ ಯಾವ ನೈತಿಕತೆಯೂ ಇಲ್ಲ: ಪರಮೇಶ್ವರ
ಶುಕ್ರವಾರ ಪರಮೇಶ್ವರ ದೇವಸಂದ್ರ ಬಳಿ ಇರುವ ಇಂದಿರಾ ಕ್ಯಾಂಟೀನ್, ಇಂದಿರಾ ಅಡುಗೆ ಮನೆ, ಸಾರ್ವಜನಿಕ ಗ್ರಂಥಾಲಯ, ರಿಂಗ್ ರಸ್ತೆ ವೈಟ್ ಟಾಪಿಂಗ್, ಗಂಗಾನಗರ ಹೆರಿಗೆ ಆಸ್ಪತ್ರೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.