ಬುಡಕಟ್ಟು ಜನಾಂಗದ ಜೀವನೋಪಾಯಕ್ಕೆ ನೆರವು ನೀಡಲು ಕೇಂದ್ರಕ್ಕೆ ಮನವಿ
ಬೆಂಗಳೂರು, ಮೇ.12: ನೊವೆಲ್ ಕೊರೊನಾ ವೈರಸ್ ಸೋಂಕು ಮತ್ತು ಭಾರತ ಲಾಕ್ ಡೌನ್ ನಡುವೆ ಪರಿಶಿಷ್ಟ ಪಂಗಡ ಹಾಗೂ ಬುಡಕಟ್ಟು ಸಮುದಾಯದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಜನರ ಜೀವನೋಪಾಯ ಆರ್ಥಿಕ ಸ್ವಾವಲಂಬನೆಗೆ 155 ಕೋಟಿ ರೂಪಾಯಿ ವೆಚ್ಚದ ವಿವಿಧ ಯೋಜನೆಗಳ ಬಗ್ಗೆ ಕಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ರಾಜ್ಯ ಸರ್ಕಾರವು ಸಲ್ಲಿಸಿದ ಈ ಪ್ರಸ್ತಾವನೆಯನ್ನು ಶೀಘ್ರವಾಗಿ ಮಂಜೂರು ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಉಪ ಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಮನವಿ ಮಾಡಿಕೊಂಡಿದ್ದಾರೆ. ಕೇಂದ್ರ ಬುಡಕಟ್ಟು ಕಲ್ಯಾಣ ಸಚಿವ ಶ್ರೀ ಜುವಲ್ ಓರಾಂ ಜೊತೆ ವೀಡಿಯೋ ಸಂವಾದದಲ್ಲಿ ಅವರು ಚರ್ಚೆ ನಡೆಸಿದ್ದರು.
ಕಿರು ಅರಣ್ಯ ಉತ್ಪನ್ನಗಳನ್ನು ಸಂಗ್ರಹಿಸುವ ಬುಡಕಟ್ಟು ಜನರನ್ನು ಸಂಘಟಿಸಿ ತರಬೇತಿ ನೀಡಿ, ಸಾಮರ್ಥ್ಯ ವೃದ್ದಿಸುವ ಮೂಲಕ ಸ್ವಾವಲಂಬಿಗೊಳಿಸಬೇಕು. ಕಿರು ಅರಣ್ಯ ಉತ್ಪನ್ನಗಳನ್ನು ಹೆಚ್ಚಿನ ಬೆಂಬಲ ಬೆಲೆಯಲ್ಲಿ ಖರೀದಿಸುವುದಕ್ಕಾಗಿ 7 ಕೋಟಿ ಅನುದಾನ ಘೋಷಿಸಬೇಕು ಎಂದು ಡಿಸಿಎಂ ಮನವಿ ಮಾಡಿಕೊಂಡಿದ್ದಾರೆ.

2 ಕೋಟಿ ರೂಪಾಯಿ ವೆಚ್ಚದ 7 ಕಿರು ಅರಣ್ಯ ಉತ್ಪನ್ನ ಸಂಸ್ಕರಣಾ ಘಟಕಗಳನ್ನು ಸಿಆರ್ ಟಿಆರ್ಐ ಮೂಲಕ ಸ್ಥಾಪಿಸಿ ತಾಂತ್ರಿಕ ಸಹಕಾರದ ಜೊತೆಗೆ ಅನುಷ್ಟಾನಗೊಳಿಸಬೇಕು. 355 ಇ-ಕಾರ್ಟ್ ಒದಗಿಸಬೇಕು. 41 ಕೋಟಿ ರೂ. ವೆಚ್ಚದ ಕುರಿ ಮತ್ತು ಮೇಕೆ ಘಟಕಗಳ ಸ್ಥಾಪಿಸಬೇಕು. ನೀರಾವರಿ ಸೌಲಭ್ಯ, ಶಿಥಿಲಗೊಂಡ ಆಶ್ರಮ ಶಾಲೆಗಳ ದುರಸ್ಥಿಗೊಳಿಸುವ ಪ್ರಸ್ತಾವನೆ ಸೇರಿ ಒಟ್ಟು 155 ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ.
ಕಿರು ಅರಣ್ಯ ಉತ್ಪನ್ನ ಸಂಗ್ರಹಣೆ, ಅಗತ್ಯ ಮೂಲಭೂತ ಸೌಲಭ್ಯ ಅಭಿವೃದ್ಧಿ, ಮೌಲ್ಯವರ್ಧನೆ, ಮಾರುಕಟ್ಟೆ ಸೃಜಿಸುವುದು, ಅಭಿವೃದ್ಧಿ ಪಡಿಸುವ ಹಿನ್ನೆಲೆ ವನ-ಧನ ವಿಕಾಸ ಕೇಂದ್ರಗಳನ್ನು ಸ್ಥಾಪಿಸುವುದು. ಈ ಮೂಲಕ ಕಿರು ಅರಣ್ಯ ಉತ್ಪನ್ನಗಳನ್ನು ಸಂಗ್ರಹಿಸುವ ಬುಡಕಟ್ಟು ಜನರನ್ನು ಸಂಘಟಿಸಿ ತರಬೇತಿಗೊಳಿಸಬೇಕು.
ರಾಜ್ಯದಲ್ಲಿ 23 ಕಿರು ಅರಣ್ಯ ಉತ್ಪನ್ನಗಳು ದೊರಕುತ್ತಿವೆ. 23 ಲ್ಯಾಂಪ್ಸ್ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, 74,500 ಸದಸ್ಯರಿದ್ದಾರೆ. ಬುಡಕಟ್ಟು ಜನಾಂಗದವರಿಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿ, ಮಾಸ್ಕ್ ಗಳನ್ನು ವಿತರಿಸಲಾಗಿದೆ ಎಂದು ಅವರು ತಿಳಿಸಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications