ನಿರಾಶ್ರಿತರ ಮೇಲೆ ಹೆಚ್ವಿನ ನಿಗಾ ವಹಿಸಲು ಡಿಸಿಎಂ ಕಾರಜೋಳ ಸೂಚನೆ
ಬೆಂಗಳೂರು, ಮೇ 11: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ನಿರಾಶ್ರಿತರ ಮೇಲೆ ಹೆಚ್ಚಿನ ನಿಗಾವಹಿಸಿ, ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸೂಚಿಸಿದ್ದಾರೆ.
ಬೆಂಗಳೂರಿನಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಈ ಕೇಂದ್ರದಲ್ಲಿ 672 ನಿರಾಶ್ರಿತರಿದ್ದಾರೆ. ನಿರಾಶ್ರಿತರಿಗೆ ಮಾಸ್ಕ್ ಹಾಗೂ ಸ್ಯಾನಿಟೈಜರ್ ನೀಡುವುದಷ್ಟೇ ಅಲ್ಲದೇ ಬಳಸುವಂತೆ ಮನವರಿಕೆ ಮಾಡಿಕೊಡಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ: ಗೋವಿಂದ ಕಾರಜೋಳ
ಮುಂಜಾಗ್ರತಾ ಕ್ರಮಕೈಗೊಂಡು ಮಾರ್ಚ್ 2 ನೇ ವಾರದಿಂದಲೇ ಈ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಲಾಕ್ ಡೌನ್ ಮಾಡಿ, ಪ್ರವೇಶವನ್ನು ನಿಷೇಧಿಸಿ, ಯಾರಿಗೂ ಹೊಸದಾಗಿ ದಾಖಲು ಮಾಡಿಕೊಂಡಿಲ್ಲ ಎಂದು ಹೇಳಿದರು.
ನಿರಾಶ್ರಿತರ ಪರಿಹಾರ ಕೇಂದ್ರದ ಕಾರ್ಯದರ್ಶಿ ಚಂದ್ರಾ ನಾಯ್ಕ್, ಕ್ರೈಸ್ ನ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಡಿಸಿಎಂ ಅವರ ಆಪ್ತಕಾರ್ಯದರ್ಶಿ ವಿ. ಶ್ರೀನಿವಾಸ್, ವಿಶೇಷ ಕರ್ತವ್ಯಾಧಿಕಾರಿ ಆರ್.ಬಿ. ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.