ಬಡವರ ಮಕ್ಕಳ ಊಟಕ್ಕೆ ಕಲ್ಲು ಬಿತ್ತು: ಡಿಸಿಎಂ ಕಾರಜೋಳ
ಬೆಂಗಳೂರು, ಅ. 12: ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಶ್ರೀರಾಮುಲು ಅವರನ್ನು ಬದಲಾವಣೆ ಮಾಡಲಾಗಿದೆ. ಅವರಲ್ಲಿದ್ದ ಆರೋಗ್ಯ ಖಾತೆಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರಿಗೆ ವಹಿಸಲಾಗಿದೆ.
ಡಿಸಿಎಂ ಗೋವಿಂದ್ ಕಾರಜೋಳ ಅವರ ಬಳಿಯಿದ್ದ ಸಮಾಜ ಕಲ್ಯಾಣ ಖಾತೆಯನ್ನು ಶ್ರೀರಾಮುಲು ಅವರಿಗೆ ವಹಿಸಲಾಗಿದೆ. ಇಂದು ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಬಳಿಕ ಡಿಸಿಎಂ ಗೋವಿಂದ್ ಕಾರಜೋಳ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ನನ್ನ ಬಳಿ ಹೆಚ್ಚುವರಿಯಾಗಿತ್ತು ಅದನ್ನು ಈಗ ಶ್ರೀರಾಮುಲು ಅವರಿಗೆ ಕೊಡಲು ಸಿಎಂ ಉದ್ದೇಶಿಸಿದ್ದಾರೆ. ಸಮಾಜ ಕಲ್ಯಾಣ ಹಾಗು ಹಿಂದುಳಿದ ವರ್ಗಗಳ ಇಲಾಖೆ ಎರಡೂ ಒಂದೆ.
ಹಾಗಾಗಿ ಆ ಎರಡೂ ಇಲಾಖೆಗಳನ್ನು ಒಬ್ಬರೇ ನಿರ್ವಹಣೆ ಮಾಡುವುದು ಸೂಕ್ತ ಎಂದು ಶ್ರೀರಾಮುಲು ಅವರಿಗೆ ನೀಡಿದ್ದಾರೆ. ಅದೇ ರೀತಿ ಆರೋಗ್ಯ ಮತ್ರು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಎರಡೂ ಸಹ ಒಬ್ಬರಲ್ಲೇ ಇರುವುದು ಸೂಕ್ತ ಎಂದು ಗೋವಿಂದ ಕಾರಜೋಳ ಹೇಳಿಕೆ ಕೊಟ್ಟಿದ್ದಾರೆ.

ಆಡಳಿತದ ದೃಷ್ಟಿಯಿಂದ ಅನುಕೂಲವಾಗುತ್ತದೆ ಎಂದು ಅದನ್ನು ಡಾ. ಸುಧಾಕರ್ ಅವರಿಗೆ ನೀಡಿದ್ದಾರೆ. ಹೆಚ್ಚುವರಿಯಾಗಿದ್ದ ಖಾತೆ ನೀಡಿದ್ದರಿಂದ ನನಗೆ ಯಾವುದೇ ಬೇಸರವಿಲ್ಲ.
ಆದರೆ ಕೋವಿಡ್ ಕಾರಣದಿಂದಾಗಿ ಈ ವರ್ಷ ಬಡವರು, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮಕ್ಕಳ ಶಿಕ್ಷಣ ಹಾಳಾಯ್ತು ಅನ್ನೋದೊಂದೇ ನನಗೆ ಬೇಸರ.
ಸಮಾಜ ಕಲ್ಯಾಣ ಇಲಾಖೆಯ ಹಾಸ್ಟಲ್ ಹಾಗೂ ವಸತಿ ಶಾಲೆಗಳಲ್ಲಿ ಸಾವಿರಾರು ಮಕ್ಕಳಿಗೆ ಶಿಕ್ಷಣ ಊಟ ಹಾಗು ವಸತಿ ಸಿಗುತ್ತಿತ್ತು, ಈ ವರ್ಷ ಅದಕ್ಕೆ ಕಲ್ಲು ಬಿತ್ತು ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications