ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಮೇಶ್ ಜಾರಕಿಹೊಳಿ ಪಕ್ಷ ಬಿಡುವುದಿಲ್ಲ, ವದಂತಿ ಅಷ್ಟೇ: ಪರಮೇಶ್ವರ

By Nayana
|
Google Oneindia Kannada News

Recommended Video

ರಮೇಶ್ ಜಾರಕಿಹೊಳಿ ಪಕ್ಷ ಬಿಡುವುದಿಲ್ಲ, ವದಂತಿ ಅಷ್ಟೇ: ಡಿಸಿಎಂ ಜಿ.ಪರಮೇಶ್ವರ | Oneindia Kannada

ಬೆಂಗಳೂರು, ಸೆಪ್ಟೆಂಬರ್ 10: ಸಚಿವ ರಮೇಶ್ ಜಾರಕಿಹೊಳಿ ಯಾವುದೇ ಕಾರಣಕ್ಕೂ ಪಕ್ಷ ತೊರೆಯುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ.

ಸಹೋದರನ ಸಿಎಂ ಮಾಡಲು ಬಿಜೆಪಿಗೆ ಹೊರಟರಾ ರಮೇಶ್ ಜಾರಕಿಹೊಳಿ? ಸಹೋದರನ ಸಿಎಂ ಮಾಡಲು ಬಿಜೆಪಿಗೆ ಹೊರಟರಾ ರಮೇಶ್ ಜಾರಕಿಹೊಳಿ?

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿಯವರನ್ನು ಭೇಟಿ ಮಾಡಿದಾಗ ಕಾಂಗ್ರೆಸ್ ಪಕ್ಷವನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಹೇಳಿದ್ದಾರೆ, ಪಕ್ಷ ಬಿಡುವುದು ಕೇವಲ ವದಂತಿಯಷ್ಟೇ ಎಂದು ಹೇಳಿದ್ದಾರೆ.

ಜಾರಕಿಹೊಳಿ ಸಹೋದರರ ಟಾರ್ಗೆಟ್ 14: ಯಾರು ಆ ಶಾಸಕರು? ಜಾರಕಿಹೊಳಿ ಸಹೋದರರ ಟಾರ್ಗೆಟ್ 14: ಯಾರು ಆ ಶಾಸಕರು?

ಕಳೆದ ಒಂದು ವಾರದಿಂದ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರುತ್ತಿದ್ದಾರೆ ಎನ್ನುವ ಗುಸು-ಗುಸು ಆರಂಭವಾಗಿತ್ತು ಇದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೂ ಗ್ರಾಸವಾಗಿತ್ತು.

DCM opines that Ramesh Jarkiholi never leave congress

ಇದೀಗ ಈ ಕುರಿತು ಪರಮೇಶ್ವರ ಮಾತನಾಡಿದ್ದು ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ, ಆದರೆ ಬಿಜೆಪಿ ನಾಯಕರ ಪ್ರಯತ್ನ ಎಂದಿಗೂ ಫಲ ನೀಡುವುದಿಲ್ಲ ಯಾಕೆಂದರೆ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ ಎಂದರು.

ಸಮ್ಮಿಶ್ರ ಸರ್ಕಾರ ಹೋಗಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುತ್ತದೆ ಎನ್ನವ ಮಾತುಗಳು ಕೇಳಿಬರುತ್ತಿದೆ ಆದರೆ ಇದೆಲ್ಲವೂ ಬಿಜೆಪಿಯ ಭ್ರಮೆ, ಯಾವುದೇ ಕಾರಣಕ್ಕೂ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಒಡೆಯುವುದಿಲ್ಲ ಭದ್ರವಾಗಿದೆ, ಇನ್ನೂ ಐದು ವರ್ಷಗಳ ಕಾಲ ನಮ್ಮ ಆಡಳಿತ ಹೀಗೆಯೇ ಮುಂದುವರೆಯಿದೆ, ಬಿಜೆಪಿ ಎಷ್ಟೇ ಪ್ರಯತ್ನಪಟ್ಟರೂ ಅವರು ಅಂದುಕೊಂಡದ್ದು ನಡೆಯುವುದಿಲ್ಲ ಎಂದು ಎಂದು ಹೇಳಿದ್ದಾರೆ.

English summary
Deputy chief minister Dr G Parameshwara clears that minister Ramesh jarkiholi will not leave the party and BJP will not be succeeded in this mission.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X