ನಮ್ಮ ಸ್ಟ್ರಾಟಜಿ ವರ್ಕೌಟ್ ಆಗಿದೆ ಎಂದ ಡಿಸಿಎಂ ಪರಮೇಶ್ವರ
ಬೆಂಗಳೂರು, ಜುಲೈ 22: ನಮ್ಮ ಸ್ಟ್ರಾಟಜಿ ವರ್ಕೌಟ್ ಆಗಿದೆ ಎಂದು ಉಪ ಮುಖ್ಯಮಂತ್ರಿ ಜಿ ಪರಮೇಶ್ವರ ಹೇಳಿದ್ದಾರೆ.
ವಿಧಾನಸಭೆ ಕಲಾಪಕ್ಕೂ ತೆರಳುವ ಮುನ್ನ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತಣಾಡಿದ ಅವರು, ನಮ್ಮ ಸ್ಟ್ರಾಟಜಿ ಫರ್ಸ್ಟ್ ಕ್ಲಾಸ್ ಆಗಿ ವರ್ಕೌಟ್ ಆಗಿದೆ ಎಂದು ಹೇಳಿದ್ದಾರೆ.
ಹಾಗಾದರೆ ಅವರ ಸ್ಟ್ರಾಟಜಿ ಏನಾಗಿತ್ತು ಎಂದು ಗಮನಿಸುವುದಾದರೆ ಹೀಗೆ ದಿನಾ ದಿನ ಕಲಾಪವನ್ನು ಮುಂದೂಡುವುದು, ಕೊನೆಗೆ ಹೇಗಾದರೂ ಮಾಡಿ ಅಂತ್ಯದಲ್ಲಿ ರಾಜೀನಾಮೆ ನೀಡಿರುವ ಶಾಸಕರನ್ನು ಮತ್ತೆ ವಿಶ್ವಾಸಕ್ಕೆ ಪಡೆದುಕೊಳ್ಳುವ ಆಲೋಚನೆಯಲ್ಲಿ ದೋಸ್ತಿ ಸರ್ಕಾರವಿತ್ತು.

ಇದೀಗ ಸುಪ್ರೀಂಕೋರ್ಟ್ ಅತೃಪ್ತ ಶಾಸಕರ ಅರ್ಜಿಯನ್ನು ಇಂದು ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿರುವುದು ದೋಸ್ತಿ ಸರ್ಕಾರಕ್ಕೆ ಇನ್ನಷ್ಟು ಪುಷ್ಠಿ ನೀಡಿದೆ.
ಆದರೆ ಕಲಾಪಕ್ಕೂ ಮುನ್ನ ಸ್ಪೀಕರ್ ರಮೇಶ್ ಕುಮಾರ್ ಮಾಧ್ಯಮದವರೊಂದಿಗೆ ಮಾತನಾಡಿ, ಇಂದು ಏನೇ ಆಗಲಿ ವಿಶ್ವಾಸಮತವನ್ನು ಪೂರ್ಣಗೊಳಿಸುತ್ತೇವೆ ಎಂದು ಹೇಳಿದ್ದರು.
ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದ ಅತೃಪ್ತ ಶಾಸಕರ ಅರ್ಜಿಯನ್ನು ವಿಚಾರಣೆ ನಡೆಸಲು ಇಂದು ಸಾಧ್ಯವಿಲ್ಲ ಎಂದು ಹೇಳಿದೆ. ಮಂಗಳವಾರವಾದರೂ ಅರ್ಜಿ ವಿಚಾರಣೆಗೆ ಬರಲಿದೆಯೇ ಎಂಬುದು ಸ್ಪಷ್ಟವಾಗಿಲ್ಲ. ಕಲಾಪ ಆರಂಭವಾಗಿದೆ. ತಮ್ಮ ಶಾಸಕರಿಗೆ ವಿಪ್ ಕೊಡುವ ಅಧಿಕಾರ ಇದೆ ಎಂದು ಸ್ಪೀಕರ್ ಹೇಳಿದ್ದಾರೆ.
ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿಯವರು ವಿಶ್ವಾಸಮತ ಯಾಚನೆಗೆ ಎರಡು ದಿನ ಕಾಲಾವಕಾಶ ಬೇಕು ಎಂದು ಕೇಳಿದ್ದಾರೆ. ಆದರೆ ಸ್ಪೀಕರ್ ರಮೇಶ್ ಕುಮಾರ್ ವಿಶ್ವಾಸಮತ ವಿಳಂಬದ ಕುರಿತು ಬೇಸರ ವ್ಯಕ್ತಪಡಿಸಿದ್ದು, ಮಧ್ಯಾಹ್ನ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications