ಕರ್ನಾಟಕ ವಿಭಜನೆ ಕನಸಿನ ಮಾತು ಎಂದ ಪರಮೇಶ್ವರ
Recommended Video

ಬೆಂಗಳೂರು, ಜು.30: ಕರ್ನಾಟಕದ ವಿಭಜನೆ ಕನಸಿನ ಮಾತು, ಉತ್ತರ ಕರ್ನಾಟಕವನ್ನು ಎಂದಿಗೂ ನಿರ್ಲಕ್ಷಿಸಿಲ್ಲ ಮುಖ್ಯಮಂತ್ರಿಗಳ ಹೇಳಿಕೆಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ನಾವು ಕರ್ನಾಟಕದ ವಿಭಜನೆಗೆ ಎಂದಿಗೂ ಸಮ್ಮತಿ ಇಲ್ಲ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ಸಿಎಂ ನೇತೃತ್ವದಲ್ಲಿ ಕರೆಯಲಾಗಿದ್ದ ಜಿಲ್ಲಾಧಿಕಾರಿಗಳ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಹೈದರಾಬಾದ್ ಕರ್ನಾಟಕ ಅಭಿವೃದ್ಧಿಗೆ ಕೇಂದ್ರ ಸರಕಾರ 371ಜೆ ವಿಶೇಷ ಸವಲತ್ತು ಕೊಡಲಾಗಿದೆ. ಅಷ್ಟೆ ಅಲ್ಲದೇ ರಾಜ್ಯ ಸರಕಾರದಿಂದ 19 ಸಾವಿರ ಕೋಟಿ ರು.ಗಳನ್ನು ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ನೀಡಲಾಗಿದೆ. ಕರ್ನಾಟಕ ಯಾವತ್ತಿದ್ದರೂ ಒಂದೇ ರಾಜ್ಯ ಎಂದು ಹೇಳಿದರು.

ಜಿಲ್ಲಾಧಿಕಾರಿ, ಸಿಇಒ ಯಾರೇ ಆಗಲಿ ಸರ್ಕಾರವನ್ನು ಲಘುವಾಗಿ ಪರಿಗಣಿಸದೇ ಸರ್ಕಾರದ ಕಾರ್ಯಕ್ರಮವನ್ನು ಅನುಷ್ಠಾನ ಮಾಡುವತ್ತ ಬದ್ಧತೆ ಪ್ರದರ್ಶಿಸಿ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು.
ಸರ್ಕಾರದಲ್ಲಿ ಕೊರತೆ ಇಲ್ಲ. ಪ್ರತಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಕನಿಷ್ಠ 5 ಕೋಟಿ ರು. ಹಾಕಲಾಗಿದೆ. ಜಿಲ್ಲಾಧಿಕಾರಿಗಳು ಹೆಚ್ಚು ಆಸಕ್ತಿ ವಹಿಸಿ ಕೆಲಸ ಮಾಡಬೇಕು. ಜಿಲ್ಲಾ ಮುಖ್ಯ ನಿರ್ವಹಣಾಧಿಕಾರಿಗಳು ಹೋಬಳಿ ಅಥವಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತಿಂಗಳಿಗೆ ಒಮ್ಮೆಯಾದರೂ ಗ್ರಾಮ ವಾಸ್ತವ್ಯ ಮಾಡಿದರೆ ಆ ಜನರ ಸಮಸ್ಯೆ, ಬೇಡಿಕೆಗಳು ನಿಮ್ಮ ಗಮನಕ್ಕೆ ಬರಲಿದೆ.
ಜಿಲ್ಲಾಧಿಕಾರಿಗಳ ಹಂತದಲ್ಲೇ ಸಮಸ್ಯೆ ನೀಗಿಸಿದರೆ ಜನರು ಸಚಿವರವರೆಗೂ ಬರುವ ಸಮಸ್ಯೆ ತಪ್ಪಲಿದೆ. ನನ್ನ ಬಳಿಯೇ ಸಾಕಷ್ಟು ಜನರು ಬಂದು ಸಮಸ್ಯೆ ತೋಡಿಕೊಳ್ಳುತ್ತಾರೆ. ಅವರು ನಮ್ಮ ಬಳಿ ಬರುತ್ತಿದ್ದಾರೆಂದರೆ ನೀವು ಕೆಲಸ ಮಾಡುತ್ತಿಲ್ಲ ಎಂದರ್ಥ ಅಲ್ಲವೇ ಎಂದು ಕುಟುಕಿದರು.
ಸಣ್ಣ ಕೆಲಸಕ್ಕೂ ಜನ ವರ್ಷಾನುಗಟ್ಟಲೆ ಕಾಯುವಂಥ ಸ್ಥಿತಿ ಇದೆ. ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆದು ಸಂಪೂರ್ಣ ವ್ಯವಸ್ಥೆ ಪಡೆದುಕೊಳ್ಳಲು ಮೂರ್ನಾಲ್ಕು ವರ್ಷ ತೆಗೆದುಕೊಳ್ಳುತ್ತದೆ ಎಂದರೆ ಹೇಗೆ, ಜಿಲ್ಲಾಸ್ಪತ್ರೆಗಳ ವೈದ್ಯರು,ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದ್ದರೆ ಸರಕಾರಕ್ಕೆ ಪತ್ರ ಬರೆದು ಸಮಸ್ಯೆ ನೀಗಿಸಿ.
ಹಳ್ಳಿಗಳಲ್ಲಿಯೂ ಡ್ರಗ್ ವ್ಯಾಪಿಸಿದೆ ಎಂದರೆ, ಸಂಬಂಧ ಪಟ್ಟ ಇಲಾಖೆ ಇದರ ಬಗ್ಗೆ ಎಚ್ಚರಿಕೆ ವಹಿಸಿಲ್ಲವಾ, ಜಿಲ್ಲೆಗಳಲ್ಲಿ ಡ್ರಗ್ ಸಂಬಂಧ ಜಾಗೃತಿ ಕಾರ್ಯಕ್ರಮ ಮೂಡಿಸಬೇಕು. ಆದರೆ, ಈ ಕೆಲಸ ಆಗುತ್ತಿಲ್ಲ. ಜಿಲ್ಲಾಧಿಕಾರಿಗಳು ತಮ್ಮ ಕೆಲಸ ನಿಭಾಯಿಸಿದರೆ ಸರಕಾರದ ಎಲ್ಲ ಕಾರ್ಯಕ್ರಮಗಳು ಅನುಷ್ಠಾನವಾಗಲಿದೆ. ಈ ಬಗ್ಗೆ ಹೆಚ್ಚು ಗಮನ ಹರಿಸಿ ಎಂದು ಸೂಚನೆ ನೀಡಿದರು.
-
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ












Click it and Unblock the Notifications