ಮೆಹದಿ ಬಿಡುಗಡೆ ಮಾಡಿ, ಐಎಸ್ಐಎಸ್ ಎಚ್ಚರಿಕೆ ಸಂದೇಶ
ಬೆಂಗಳೂರು, ಡಿ.14: ಇರಾಕಿ ಉಗ್ರ ಸಂಘಟನೆ ಇಸಿಸ್ ಪರ ಕಾರ್ಯ ನಿರ್ವಹಿಸುತ್ತಿದ್ದ ಮೆಹದಿ ಬಂಧನದಿಂದ ಐಎಸ್ಐಎಸ್ ಕಂಗಾಲಾಗಿದ್ದು, ಮೆಹದಿ ಬಿಡುಗಡೆ ಮಾಡಿ ಇಲ್ಲದಿದ್ದರೆ ಪರಿಣಾಮ ಎದುರಿಸಿ ಎಂದು ಎಚ್ಚರಿಕೆ ಸಂದೇಶವನ್ನು ಡಿಸಿಪಿ ಅಭಿಷೇಕ್ ಗೋಯಲ್ ಅವರಿಗೆ ಕಳಿಸಲಾಗಿದೆ.
ಅಪರಾಧ ವಿಭಾಗದ ಡಿಸಿಪಿ ಅಭಿಷೇಕ್ ಗೋಯಲ್ ಅವರು ಎಚ್ಚರಿಕೆ ಸಂದೇಶ ಬಂದಿರುವುದನ್ನು ದೃಢಪಡಿಸಿದ್ದಾರೆ. ಟ್ವಿಟ್ಟರ್ ಮೂಲಕ ಇಸಿಸ್ ಉಗ್ರ ಅಬೌನ್ಫಾಲ್ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ನಲ್ಲಿ FreeShamiWitness ಹ್ಯಾಶ್ ಟ್ಯಾಗ್ ಬಳಸಿ ಅಭಿಯಾನ ಆರಂಭಿಸಲಾಗಿದೆ. ಮೆಹದಿ ಪರವಾಗಿ ಕವನ, ಹೇಳಿಕೆ, ಪ್ರತಿಕ್ರಿಯೆಗಳು ಹರಿದು ಬರುತ್ತಿವೆ.

ಮೆಹದಿ ಒಬ್ಬ ಸಾಮಾನ್ಯ ಮುಸ್ಲಿಂ ಆಗಿದ್ದು, ಆತನ ಎಲ್ಲರಂತೆ ಸಾಮಾಜಿಕ ಜಾಲ ತಾಣ ಬಳಸಿ ತನ್ನ ಅಭಿಪ್ರಾಯ ಮಂಡನೆ ಮಾಡುತ್ತಿದ್ದ. ಅತನಿಗೆ ನೀವು ಚಿತ್ರಹಿಂಸೆ ನೀಡಿ ತಪ್ಪೊಪ್ಪಿಗೆ ನೀಡಿದ್ದಾನೆ ಎಂದರೆ ನಾವು ನಂಬುವುದಿಲ್ಲ ಎಂಬ ಟ್ವೀಟ್ ಗಳು ಹರಿದಾಡುತ್ತಿವೆ. [ಶಂಕಿತ ಉಗ್ರ ಮೆಹದಿ ಬಂಧನ : ಟಾಪ್ 10 ಬೆಳವಣಿಗೆ]
ನಿಮ್ಮ ಬಂಧನದಲ್ಲಿರುವ ನಮ್ಮ ಸಹೋದರರನ್ನು ನಿಮ್ಮ ಬಳಿಯೇ ಇರಲು ಬಿಡುವುದಿಲ್ಲ. ಇದಕ್ಕೆ ಬದಲಾಗಿ ನಾವು ಸೇಡು ತೀರಿಸಿಕೊಳ್ಳುತ್ತೇವೆ. ನಮ್ಮ ಪ್ರತಿಕ್ರಿಯೆ ಹೇಗಿರುತ್ತೆ ಎಂಬುದನ್ನು ಕಾದು ನೋಡಿ ಎಂದಿದ್ದಾನೆ.

ಇಸ್ಲಾಮಿಕ್ ಸ್ಟೇಟ್ ಇನ್ ಇರಾಕ್ ಅಂಡ್ ಸಿರಿಯಾ(ISIS) ಉಗ್ರ ಸಂಘಟನೆಯ ಹೆಸರಲ್ಲಿ ಸಾಮಾಜಿಕ ಜಾಲತಾಣ ಟ್ವಿಟ್ಟರ್ನಲ್ಲಿ(@shamiwitness) ಉಗ್ರರ ಪರ ಸಂದೇಶಗಳನ್ನು ಹಾಕುತ್ತಿದ್ದ ಖಾಸಗಿ ಸಂಸ್ಥ್ಎ ಉದ್ಯೋಗಿ ಮೆಹದಿಯನ್ನು ಶನಿವಾರ ಬೆಂಗಳೂರಿನ ಪೊಲೀಸರು ಬಂಧಿಸಿದ್ದರು. ಇಸಿಸ್ ಹೆಸರಲ್ಲಿ ಪ್ರಕಟವಾಗುತ್ತಿದ್ದ ಟ್ವಿಟರ್ ಖಾತೆಯ ಹಿಂದೆ ಬೆಂಗಳೂರು ಮೂಲದ ವ್ಯಕ್ತಿಯ ಕೈವಾಡವಿದೆ ಎಂದು ಬ್ರಿಟನ್ ಮೂಲದ ಚಾನೆಲ್ 4' ನ್ಯೂಸ್ ಸುದ್ದಿವಾಹಿನಿ ವರದಿ ಪ್ರಸಾರ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications