ಮೆಹದಿ ಬಿಡುಗಡೆ ಮಾಡಿ, ಐಎಸ್ಐಎಸ್ ಎಚ್ಚರಿಕೆ ಸಂದೇಶ
ಬೆಂಗಳೂರು, ಡಿ.14: ಇರಾಕಿ ಉಗ್ರ ಸಂಘಟನೆ ಇಸಿಸ್ ಪರ ಕಾರ್ಯ ನಿರ್ವಹಿಸುತ್ತಿದ್ದ ಮೆಹದಿ ಬಂಧನದಿಂದ ಐಎಸ್ಐಎಸ್ ಕಂಗಾಲಾಗಿದ್ದು, ಮೆಹದಿ ಬಿಡುಗಡೆ ಮಾಡಿ ಇಲ್ಲದಿದ್ದರೆ ಪರಿಣಾಮ ಎದುರಿಸಿ ಎಂದು ಎಚ್ಚರಿಕೆ ಸಂದೇಶವನ್ನು ಡಿಸಿಪಿ ಅಭಿಷೇಕ್ ಗೋಯಲ್ ಅವರಿಗೆ ಕಳಿಸಲಾಗಿದೆ.
ಅಪರಾಧ ವಿಭಾಗದ ಡಿಸಿಪಿ ಅಭಿಷೇಕ್ ಗೋಯಲ್ ಅವರು ಎಚ್ಚರಿಕೆ ಸಂದೇಶ ಬಂದಿರುವುದನ್ನು ದೃಢಪಡಿಸಿದ್ದಾರೆ. ಟ್ವಿಟ್ಟರ್ ಮೂಲಕ ಇಸಿಸ್ ಉಗ್ರ ಅಬೌನ್ಫಾಲ್ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ನಲ್ಲಿ FreeShamiWitness ಹ್ಯಾಶ್ ಟ್ಯಾಗ್ ಬಳಸಿ ಅಭಿಯಾನ ಆರಂಭಿಸಲಾಗಿದೆ. ಮೆಹದಿ ಪರವಾಗಿ ಕವನ, ಹೇಳಿಕೆ, ಪ್ರತಿಕ್ರಿಯೆಗಳು ಹರಿದು ಬರುತ್ತಿವೆ.

ಮೆಹದಿ ಒಬ್ಬ ಸಾಮಾನ್ಯ ಮುಸ್ಲಿಂ ಆಗಿದ್ದು, ಆತನ ಎಲ್ಲರಂತೆ ಸಾಮಾಜಿಕ ಜಾಲ ತಾಣ ಬಳಸಿ ತನ್ನ ಅಭಿಪ್ರಾಯ ಮಂಡನೆ ಮಾಡುತ್ತಿದ್ದ. ಅತನಿಗೆ ನೀವು ಚಿತ್ರಹಿಂಸೆ ನೀಡಿ ತಪ್ಪೊಪ್ಪಿಗೆ ನೀಡಿದ್ದಾನೆ ಎಂದರೆ ನಾವು ನಂಬುವುದಿಲ್ಲ ಎಂಬ ಟ್ವೀಟ್ ಗಳು ಹರಿದಾಡುತ್ತಿವೆ. [ಶಂಕಿತ ಉಗ್ರ ಮೆಹದಿ ಬಂಧನ : ಟಾಪ್ 10 ಬೆಳವಣಿಗೆ]
ನಿಮ್ಮ ಬಂಧನದಲ್ಲಿರುವ ನಮ್ಮ ಸಹೋದರರನ್ನು ನಿಮ್ಮ ಬಳಿಯೇ ಇರಲು ಬಿಡುವುದಿಲ್ಲ. ಇದಕ್ಕೆ ಬದಲಾಗಿ ನಾವು ಸೇಡು ತೀರಿಸಿಕೊಳ್ಳುತ್ತೇವೆ. ನಮ್ಮ ಪ್ರತಿಕ್ರಿಯೆ ಹೇಗಿರುತ್ತೆ ಎಂಬುದನ್ನು ಕಾದು ನೋಡಿ ಎಂದಿದ್ದಾನೆ.

ಇಸ್ಲಾಮಿಕ್ ಸ್ಟೇಟ್ ಇನ್ ಇರಾಕ್ ಅಂಡ್ ಸಿರಿಯಾ(ISIS) ಉಗ್ರ ಸಂಘಟನೆಯ ಹೆಸರಲ್ಲಿ ಸಾಮಾಜಿಕ ಜಾಲತಾಣ ಟ್ವಿಟ್ಟರ್ನಲ್ಲಿ(@shamiwitness) ಉಗ್ರರ ಪರ ಸಂದೇಶಗಳನ್ನು ಹಾಕುತ್ತಿದ್ದ ಖಾಸಗಿ ಸಂಸ್ಥ್ಎ ಉದ್ಯೋಗಿ ಮೆಹದಿಯನ್ನು ಶನಿವಾರ ಬೆಂಗಳೂರಿನ ಪೊಲೀಸರು ಬಂಧಿಸಿದ್ದರು. ಇಸಿಸ್ ಹೆಸರಲ್ಲಿ ಪ್ರಕಟವಾಗುತ್ತಿದ್ದ ಟ್ವಿಟರ್ ಖಾತೆಯ ಹಿಂದೆ ಬೆಂಗಳೂರು ಮೂಲದ ವ್ಯಕ್ತಿಯ ಕೈವಾಡವಿದೆ ಎಂದು ಬ್ರಿಟನ್ ಮೂಲದ ಚಾನೆಲ್ 4' ನ್ಯೂಸ್ ಸುದ್ದಿವಾಹಿನಿ ವರದಿ ಪ್ರಸಾರ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ











Click it and Unblock the Notifications