ಆರ್.ಟಿ ನಗರ ಪ್ರಕರಣ: ಲಾಠಿ ಬೀಸಿದ ಪೊಲೀಸರದ್ದೇ ತಪ್ಪು
ಬೆಂಗಳೂರು, ನವೆಂಬರ್ 20 : ಆರ್.ಟಿ ನಗರದಲ್ಲಿ ತಡರಾತ್ರಿ ತೆರೆದಿದ್ದ ಹೊಟೆಲ್ ಗೆ ನುಗ್ಗಿದ ಪೊಲೀಸರು ಮಾಲೀಕನಿಗೆ ಲಾಠಿಯಿಂದ ತಳಿಸಿದ ಪ್ರಕರಣದಲ್ಲಿ ಪೊಲೀಸರದ್ದೆ ತಪ್ಪು ಎಂದು ಡಿಸಿಪಿ ಚೇತನ್ ಸಿಂಗ್ ಹೇಳಿದ್ದಾರೆ.
ಕಳೆದ ನವೆಂಬರ್ 9ರಂದು ಆರ್.ಟಿ.ನಗರದ ದಿಣ್ಣೂರ ರಸ್ತೆಯಲ್ಲಿರುವ ಶೆಟ್ಟಿ ಲಂಚ್ ಹೋಂ ತಡರಾತ್ರಿ ರಾತ್ರಿ 11-55ರವರೆಗೆ ತರೆದಿದ್ದರಿಂದ ಮಾಲೀಕ ರಾಜೀವ್ ಶೆಟ್ಟಿಗೆ ಎಸಿಪಿ ಮಂಜುನಾಥ್ ಲಾಟಿಯಿಂದ ಹೊಡೆದಿದ್ದರು ಪೊಲೀಸರ ದೌರ್ಜನ್ಯ ಕಂಡು ಲಂಚ್ ಹೋಂನಲ್ಲಿದ್ದ ಗ್ರಾಹಕರು ಭಯಭೀತಗೊಂಡು ಓಡಿ ಹೋಗಿದ್ದರು.

ನಂತರವೂ ಬಿಡದೆ ಪೊಲೀಸರು ಲೈಟ್ ಆಫ್ ಮಾಡಿ ಹಿಗ್ಗಾ-ಮುಗ್ಗಾ ಥಳಿಸಿದರೆಂದು ಲಂಚ್ ಹೋಂ ಮಾಲೀಕ ರಾಜೀವ ಶೆಟ್ಟಿ ಆರೋಪಿಸಿದ್ದರು. ಎಸಿಪಿ ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಮಾದ್ಯಮಗಳಲ್ಲಿ ಈ ಸುದ್ದಿ ಪ್ರಕಟಗೊಳ್ಳುತ್ತಲೇ ಎಚ್ಚರಗೊಂಡ ನಗರ ಪೊಲೀಸ್ ಆಯುಕ್ತ ಸುನೀಲ್ಕುಮಾರ್ ಅವರು ತನಿಖೆಗೆ ಆದೇಶಿಸಿದ್ದರು.
ಪ್ರಕರಣ ಕುರಿತಂತೆ ಎಸಿಪಿ ಮಂಜುನಾಥ್, ಪೊಲೀಸ್ ಪೇದೆ ಮತ್ತು ಹೊಟೇಲ್ ಮಾಲೀಕನ ಹೇಳಿಕೆ ಪಡೆದು ತನಿಖೆ ಮಾಡಿರುವ ಡಿಸಿಪಿ ಚೇತನ್ ಕುಮಾರ್ ಅವರು ಇದೀಗ ಎಸಿಪಿ ಮಂಜುನಾಥ ಅವರದ್ದೆ ತಪ್ಪು ಎಂಬ ವರದಿಯನ್ನು ಹೆಚ್ಚುವರಿ ಪೊಲೀಸ್ ಆಯುಕ್ತರಾದ ಮಾಲಿನಿ ಕೃಷ್ಣಮೂರ್ತಿ ಅವರಿಗೆ ಸಲ್ಲಿಸಿದ್ದಾರೆ. ವರದಿಯಲ್ಲಿ ಮಾಲಿನಿ ಕೃಷ್ಣಮೂರ್ತಿ ಅವರ ವಿರುದ್ಧ ಕ್ರಮಕೈಗೊಳ್ಳುವಂತೆಯೂ ಸೂಚಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ











Click it and Unblock the Notifications