ಅಕ್ರಮ ಸಕ್ರಮ ಕಾಲಾವಕಾಶ ವಿಸ್ತರಣೆ : ಕಾಗೋಡು ತಿಮ್ಮಪ್ಪ
ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿರುವ ಮನೆಗಳನ್ನು ಸಕ್ರಮಗೊಳಿಸಲು ನೀಡಿದ್ದ ಕಾಲಾವಕಾಶವನ್ನು ರಾಜ್ಯ ಸರ್ಕಾರವು ವಿಸ್ತರಿಸಿದೆ.
ಬೆಂಗಳೂರು, ಡಿಸೆಂಬರ್ 23: ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿರುವ ಮನೆಗಳನ್ನು ಸಕ್ರಮಗೊಳಿಸಲು ನೀಡಿದ್ದ ಕಾಲಾವಕಾಶವನ್ನು ರಾಜ್ಯ ಸರ್ಕಾರವು ವಿಸ್ತರಿಸಿದೆ.
ಅಲ್ಲದೆ, ಗ್ರಾಮೀಣ ಭಾಗದಲ್ಲಿ ಶೇಕಡಾ 50 ರಷ್ಟು ದಂಡದ ಪ್ರಮಾಣ ಕಡಿಮೆ ಮಾಡಲು ತೀರ್ಮಾನಿಸಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. [ಅಕ್ರಮ ಸಕ್ರಮ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಿದ ಹೈಕೋರ್ಟ್]
ನಗರ ಮತ್ತು ಗ್ರಾಮೀಣ ಭಾಗದಲ್ಲಿ 40 ಲಕ್ಷದಷ್ಟು ಅರ್ಜಿಗಳು ಈ ವ್ಯಾಪ್ತಿಯಡಿ ಬರುವ ನಿರೀಕ್ಷೆಯಿದೆ. ಇದುವರೆಗೂ 20 ಲಕ್ಷದಷ್ಟು ಅರ್ಜಿಗಳು ಬಂದಿವೆ. ಬಡವರು ಮತ್ತು ಮಧ್ಯಮ ವರ್ಗದವರು ತಮ್ಮ ಮನೆಗಳನ್ನು ಸಕ್ರಮಗೊಳಿಸಲು ಅವಕಾಶ ಕೊಡುವ ಉದ್ದೇಶದಿಂದ ಜನವರಿ 21 ರವರೆಗೆ ಸಮಯ ವಿಸ್ತರಿಸಲಾಗಿದೆ ಆ ನಂತರ ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿ ಮಾಡಿ ಹಕ್ಕು ಪತ್ರ ನೀಡಲಾಗುವುದು ಎಂದರು.

ಅಂತೆಯೇ, ಈಗಾಗಲೇ ತೀರ್ಮಾನಿಸಿರುವಂತೆ ಗ್ರಾಮೀಣ ಭಾಗದಲ್ಲಿ 4000 ಚದರಡಿ ವಿಸ್ತೀರ್ಣದಲ್ಲಿ ನಿರ್ಮಿಸಿಕೊಂಡಿರುವ ಮನೆ ಸಕ್ರಮಗೊಳಿಸಲಾಗುವುದು.
ಇದಕ್ಕೆ ಆರು ಸಾವಿರ ರೂಪಾಯಿ ದಂಡ ಶುಲ್ಕವನ್ನು ನಿಗಡಿಪಡಿಸಲಾಗಿದೆ. ಇದನ್ನು ಕಟ್ಟಲು ಬಡವರಿಗೆ ಶೇಕಡಾ 50 ರಷ್ಟು ವಿನಾಯಿತಿ ನೀಡಲು ತೀರ್ಮಾನಿಸಲಾಗಿದೆ.
ರಾಜ್ಯ ಸಚಿವ ಸಂಪುಟದ ಸನ್ನಿಹಿತ ಸಭೆಯಲ್ಲಿ ದಂಡ ಪ್ರಮಾಣ ಕಡಿಮೆ ಮಾಡುವ ಪ್ರಸ್ತಾವನೆಗೆ ಒಪ್ಪಿಗೆ ಪಡೆಯಲಾಗುವುದು ಎಂದು ಅವರು ತಿಳಿಸಿದರು.
ಅದೇ ರೀತಿ ನಗರದ ಪ್ರದೇಶದಲ್ಲಿ ಪ್ರಸ್ತುತ 600 ಚದುರ ಅಡಿ (20X30) ವಿಸ್ತೀರ್ಣದಲ್ಲಿ ನಿರ್ಮಿಸಿಕೊಂಡಿರುವ ಮನೆ ಸಕ್ರಮಕ್ಕೆ ಅವಕಾಶ ಕಲ್ಪಿಸಿಕೊಡಲಾಗಿತ್ತು.
ಇದೀಗ ಆ ವಿಸ್ತೀರ್ಣದ ಪ್ರಮಾಣವನ್ನು 1200 ಚದುರ ಅಡಿಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ನಗರಪಾಲಿಕೆ, ನಗರಸಭೆ, ಪುರಸಭೆ ವ್ಯಾಪ್ತಿಯಿಂದ 15 ಕಿ. ಮೀ. ಹೊರಗೆ ಇರುವ ಪ್ರದೇಶಗಳಲ್ಲಿರುವ ಮನೆಗಳು ಮಾತ್ರ ಸಕ್ರಮಗೊಳ್ಳಲಿವೆ ಎಂದು ಸಚಿವರು ವಿವರಿಸಿದರು.
ಅಕ್ರಮ ಸಕ್ರಮ ಅರ್ಜಿಗಳ ಸ್ವೀಕಾರ ಮತ್ತು ವಿಲೇವಾರಿ ಸಂಬಂಧ ಪ್ರತಿ ಪಂಚಾಯತ್ ನಲ್ಲಿ ಗ್ರಾಮ ಲೆಕ್ಕಿಗ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಕಾಲಮಿತಿ ವಿಧಿಸಲಾಗಿದೆ.
ಕಾಲಮಿತಿಯಲ್ಲಿ ಅರ್ಜಿಗಳನ್ನು ಸ್ವೀಕರಿಸಿ ವಿಲೇವಾರಿ ಮಾಡದಿದ್ದರೆ ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾಧಿಕಾರಿಗಳಿಗೆ ಕೂಡಾ ಈ ಬಗ್ಗೆ ಸುತ್ತೋಲೆ ಹೊರಡಿಸಲಾಗಿದೆ ಎಂದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್












Click it and Unblock the Notifications