ಸಿಲಿಂಡರ್ ಸ್ಫೋಟದ ಬಳಿಕ ತಲೆ ಮರೆಸಿಕೊಂಡಿದ್ದ 'ರಣಂ' ಸ್ಟಂಟ್ ಮಾಸ್ಟರ್ ಅರೆಸ್ಟ್
ಬೆಂಗಳೂರು, ಏ.2: ರಣಂ ಸಿನಿಮಾ ಸಾಹಸ ದೃಶ್ಯ ಚಿತ್ರೀಕರಣದ ಸಂದರ್ಭದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ತಾಯಿ, ಮಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದ ಸ್ಟಂಟ್ ಮಾಸ್ಟರ್ ನ್ನು ಬಂಧಿಸಲಾಗಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಸುಭಾಷ್ನನ್ನು (55) ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ದುರಂತ ನಂತರ ಸುಭಾಷ್ ತಲೆ ಮರೆಸಿಕೊಂಡಿದ್ದ.
ಸುಭಾಷ್ ಕೆಲ ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ ಕೆಲಸ ಮಾಡುತ್ತಿದ್ದ. ರಣಂ ಸಿನಿಮಾ ಚಿತ್ರೀಕರಣ ಸಂದರ್ಭದಲ್ಲಿ ಸಾಹಸ ನಿರ್ದೇಶಕ ವಿಜಯನ್ಗೆ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಕಾರು ಸ್ಪೋಟಿಸುವ ಬಗ್ಗೆ ಇತರ ಸಿಬ್ಬಂದಿ ಜತೆ ಈತನೇ ಪೂರ್ವತಯಾರಿ ನಡೆಸಿದ್ದ ಎಂದು ಡಿಸಿಪಿ ಕಲಾ ಕೃಷ್ಣಸ್ವಾಮಿ ವಿಜಯವಾಣಿಗೆ ತಿಳಿಸಿದ್ದಾರೆ.

ಚಿತ್ರತಂಡದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದ ಪೊಲೀಸರಿಗೆ ಸುಭಾಷ್ ಕಗ್ಗಲೀಪುರದ ಮನೆಯಲ್ಲೇ ಇರುವುದು ಗೊತ್ತಾಗಿತ್ತು. ಭಾನುವಾರ ತಡರಾತ್ರಿ ಆತನ ಮನೆಗೆ ದಾಳಿ ಮಾಡಿ ಬಂಧಿಸಲಾಗಿದೆ. ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಎರಡು ದಿನಗಳ ಕಾಲ ವಶಕ್ಕೆ ಪಡೆಯಲಾಗಿದೆ.
ಸಿಲಿಂಡರ್ ಸ್ಪೋಟಗೊಳ್ಳುತ್ತದೆ ಎಂದು ನಾವು ಊಹಿಸಿರಲಿಲ್ಲ. ದುರದೃಷ್ಟವಶಾತ್ ಈ ದುರ್ಘಟನೆ ಸಂಭವಿಸಿದೆ. ಇಬ್ಬರು ಮೃತಪಟ್ಟಿರುವ ವಿಚಾರ ತಿಳಿದು ಆತಂಕಗೊಂಡು ಮೊಬೈಲ್ ಸ್ವಿಚ್ ಆಫ್ ಮಾಡಿ ಸ್ಥಳದಿಂದ ಕಾರಿನಲ್ಲಿ ಪರಾರಿಯಾಗಿದ್ದೆವು ಎಂದು ತಿಳಿಸಿದ್ದಾರೆ.
ಈ ನಡುವೆ ಮೃತ ಸುಮೈರಾ ಬಾನು ಪತಿ ತಬ್ರೇಜ್ ಖಾನ್ ಮತ್ತು ಸಂಬಂಧಿಕರು ನ್ಯಾಯ ಒದಗಿಸುವಂತೆ ಕೋರಿ ಸೋಮವಾರ (ಏ.1) ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಸಲ್ಲಿಸಿದೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications