ರಾಜ್ಯದಲ್ಲಿ ಬಿಯರ್ ಕುಡಿಯುವವರ ಪ್ರಮಾಣ ಇಳಿಕೆ: ತನಿಖೆಗೆ ಆದೇಶ
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಯರ್ ಕುಡಿಯುವವರ ಸಂಖ್ಯೆ ಕಡಿಮೆಯಾಗುತ್ತಿದೆ, ಇದನ್ನು ಗಂಭೀರವಾಗಿ ಪರಿಗಣಿಸಿರುವ ಅಬಕಾರಿ ಇಲಾಖೆ ತನಿಖೆಗೆ ಆದೇಶ ನೀಡಿದೆ.ಈ ವರ್ಷ ಮಾರಾಟದ ಪ್ರಮಾಣದಲ್ಲಿ ಇಳಿಕೆಯಾಗಿದೆ.
ಬೆಂಗಳೂರು, ಡಿಸೆಂಬರ್ 16: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಯರ್ ಕುಡಿಯುವವರ ಸಂಖ್ಯೆ ಕಡಿಮೆಯಾಗುತ್ತಿದೆ, ಇದನ್ನು ಗಂಭೀರವಾಗಿ ಪರಿಗಣಿಸಿರುವ ಅಬಕಾರಿ ಇಲಾಖೆ ತನಿಖೆಗೆ ಆದೇಶ ನೀಡಿದೆ.
ಬಿಯರ್ ಮಾರಾಟದ ಪ್ರಮಾಣ ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ಜಾಸ್ತಿಯಾಗುತ್ತಿತ್ತು, ಆದರೆ ಈ ವರ್ಷ ಮಾರಾಟದ ಪ್ರಮಾಣದಲ್ಲಿ ಇಳಿಕೆಯಾಗಿದೆ. ಮಾರಾಟ ಪ್ರಮಾಣ ಏರಿಕೆಯಾಗಿಲ್ಲದಿರುವುದು ಇಲಾಖೆಗೆ ತಲೆನೋವು ತರಿಸಿದೆ.
ಹೀಗಾಗಿ ಇದರ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ರಾಜ್ಯದ ಎಲ್ಲ ಅಬಕಾರಿ ಜಂಟಿ ಆಯುಕ್ತರು ಮತ್ತು ಉಪ ಆಯುಕ್ತರಿಗೆ ಅಬಕಾರಿ ಆಯುಕ್ತರು ಆದೇಶ ನೀಡಿದ್ದಾರೆ.

ಬಿಯರ್ ಮಾರಾಟದ ಪ್ರಮಾಣ ಮತ್ತು ಅದರ ಶೇಕಡಾವಾರು ಬೆಳವಣಿಗೆ ಕುಂಠಿತವಾಗಿದೆ. ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಮಾರಾಟ ಕಡಿಮೆಯಾಗಿರುವುದಕ್ಕೆ ಕಾರಣ ಪತ್ತೆ ಹಚ್ಚಬೇಕು ಮತ್ತು ಕೂಲಂಕಷವಾಗಿ ವಿಶ್ಲೇಷಣೆ ಮಾಡಿ ಗುರಿ ಸಾಧಿಸಲು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ವರದಿ ಕೊಡುವಂತೆ ಇಲಾಖೆ ತಿಳಿಸಿದೆ.
ಇದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಾರ್ ಮಾಲೀಕರ ಸಂಘದ ಕರುಣಾಕರ್ ಹೆಗ್ಡೆ, ನಮಗೆ ಬಿಯರ್ ಅನ್ನು ಅಬಕಾರಿ ಇಲಾಖೆ ಪೂರೈಸುತ್ತಿರಲಿಲ್ಲ, ಹೀಗಾಗಿ ಹೇಗೆ ಮಾರಾಟವಾಗಬೇಕು ಎಂದು ಪ್ರಶ್ನಿಸಿದ್ದಾರೆ.
ಅಬಕಾರಿ ಇಲಾಖೆ ಬರೀ ಮದ್ಯ ಮಾತ್ರ ಪೂರೈಕೆ ಮಾಡುತ್ತದೆ, ಅದರಲ್ಲಿ ಅಧಿಕ ಲಾಭವಿರುತ್ತದೆ. ಬಿಯರ್ ನಿಂದ ಸರ್ಕಾರಕ್ಕೆ ಬರುವ ಆದಾಯ ಕಡಿಮೆಯಿರುತ್ತದೆ, ಹಾಗಾಗಿ ಬಿಯರ್ ಪೂರೈಕೆ ಮಾಡುತ್ತಿಲ್ಲ, ನಾವು ಬಿಯರ್ ಪೂರೈಕೆಗೆ ಕೇಳಿಕೊಂಡರೂ ಕಳುಹಿಸತ್ತಿರಲಿಲ್ಲವೆಂದು ಬಾರ್ ಮಾಲೀಕರು ಹೇಳಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications