ಐಟಿ ದಾಳಿ: ಮಾಧ್ಯಮಗಳಿಗೆ ಡಿ ಕೆ ಸುರೇಶ್ ನೀಡಿದ ಎಚ್ಚರಿಕೆ
ಡಿ ಕೆ ಶಿವಕುಮಾರ್ ನಿವಾಸಗಳ ಮೇಲೆ ಆದಾಯ ತೆರಿಗೆ ದಾಳಿ ವಿಚಾರದಲ್ಲಿ ಸುಳ್ಳು ಸುದ್ದಿ ಬಿತ್ತರಿಸುತ್ತಿರುವ ಮಾಧ್ಯಮಗಳ ಮೇಲೆ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಸಂಸದ ಡಿ ಕೆ ಸುರೇಶ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು, ಆ 4: ಇಂಧನ ಸಚಿವ ಡಿ ಕೆ ಶಿವಕುಮಾರ್ ನಿವಾಸಗಳ ಮೇಲೆ ಆದಾಯ ತೆರಿಗೆ ದಾಳಿ ವಿಚಾರದಲ್ಲಿ ಸುಳ್ಳು ಸುದ್ದಿ ಬಿತ್ತರಿಸುತ್ತಿರುವ ಮಾಧ್ಯಮಗಳ ಮೇಲೆ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಸಂಸದ ಮತ್ತು ಡಿಕೆಶಿ ಸಹೋದರ ಡಿ ಕೆ ಸುರೇಶ್ ಎಚ್ಚರಿಕೆ ನೀಡಿದ್ದಾರೆ.
ಮಾಧ್ಯಮಗಳು ಬಿತ್ತರಿಸುತ್ತಿರುವ ಸುದ್ದಿಗಳು ಆಧಾರರಹಿತವಾಗಿದ್ದು, ಡಿ ಕೆ ಶಿವಕುಮಾರ್ ಅವರ ತೇಜೋವಧೆ ಮಾಡುತ್ತಿವೆ. ಆದಾಯ ತೆರಿಗೆ ಅಧಿಕಾರಿಗಳು ದಾಳಿಯ ಬಗ್ಗೆ ಇದುವರೆಗೆ ಯಾವುದೇ ವಿಷಯವನ್ನು ಬಹಿರಂಗ ಪಡಿಸಲಿಲ್ಲ. ಆದಾಗ್ಯೂ, ಮಾಧ್ಯಮಗಳು ಸುಳ್ಳು ಸುದ್ದಿ ಪ್ರಸಾರ ಮಾಡುತ್ತಿವೆ.

ನಮ್ಮ ಹಣಕಾಸಿನ ವ್ಯವಹಾರ ಪಾರದರ್ಶಕವಾಗಿದ್ದು, ಆದಾಯ ತೆರಿಗೆ ದಾಳಿ ಮುಗಿದ ಮೇಲೆ ಎಲ್ಲಾ ಸತ್ಯ ಹೊರಬರಲಿದೆ. ನಮ್ಮ ವಿರುದ್ದ ಸುಳ್ಳು ಸುದ್ದಿ ಪ್ರಸಾರ ಮಾಡಲು ಕೆಲವರ ಷಡ್ಯಂತ್ರವೇ ಕಾರಣ. ಇಂತಹ ಮಾಧ್ಯಮಗಳ ಮೇಲೆ ಮಾನನಷ್ಟ ಮೊಕದ್ದಮೆ ಹೂಡುತ್ತೇವೆ ಎಂದು ಡಿ ಕೆ ಸುರೇಶ್ ತಿಳಿಸಿದ್ದಾರೆ.
ಶಿವಕುಮಾರ್ ಅವರ ನಿವಾಸಗಳ ಮೇಲೆ ದಾಳಿ ನಡೆಯುತ್ತಿರುವುದರಿಂದ ನಮ್ಮ ತಾಯಿ ಚಿಂತೆಗೀಡಾಗಿದ್ದಾರೆ. ಡಿ ಕೆ ಶಿವಕುಮಾರ್ ಅವರ ಆರೋಗ್ಯದಲ್ಲೂ ಏರುಪೇರಾಗಿದೆ. ಹಾಗಾಗಿ ಅವರನ್ನು ಭೇಟಿಯಾಗಲು ಅವರ ನಿವಾಸಕ್ಕೆ ಬಂದಿದ್ದೇನೆಂದು ಡಿ ಕೆ ಸುರೇಶ್ ಹೇಳಿದ್ದಾರೆ.
ನಮ್ಮ ನಾಯಕರು, ಕಾರ್ಯಕರ್ತರು ನಮಗೆ ಬೆಂಬಲ ನೀಡುತ್ತಿದ್ದಾರೆ. ಇದೆಲ್ಲಾ ರಾಜಕೀಯ ಪ್ರತೀಕಾರದ ದಾಳಿ, ಬಿಜೆಪಿಯನ್ನು ಎದುರಿಸಲು ಒಗ್ಗಟ್ಟಾಗಿದ್ದೇವೆ ಎಂದು ಡಿಕೆ ಸುರೇಶ್, ಬಿಜೆಪಿ ವಿರುದ್ದ ಕಿಡಿಕಾರಿದ್ದಾರೆ. ಡಿ ಕೆ ಶಿವಕುಮಾರ್ ಭೇಟಿಯಾಗಲು ಐಟಿ ಅಧಿಕಾರಿಗಳು ಡಿ ಕೆ ಸುರೇಶ್ ಅವರಿಗೆ ಅವಕಾಶ ನೀಡಲಿಲ್ಲ.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು?












Click it and Unblock the Notifications