ಮೆಟ್ರೋ ಯೋಜನೆಗೆ ರಕ್ಷಣಾ ಇಲಾಖೆ ಭೂಮಿ ನೀಡಲು ರಕ್ಷಣಾ ಮಂತ್ರಿ ಒಪ್ಪಿಗೆ
ಬೆಂಗಳೂರು, ಆಗಸ್ಟ್ 04: ಇಂದು ನಗರಕ್ಕೆ ಆಗಮಿಸಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿದ ಕೇಂದ್ರ ರಕ್ಷಣಾ ಮಂತ್ರಿ ನಿರ್ಮಲಾ ಸೀತಾರಾಮನ್ ಅವರು ಮೆಟ್ರೋ ಸೇರಿ ರಾಜ್ಯ ಸರ್ಕಾರದ 10 ವಿವಿಧ ಅಭಿವೃದ್ಧಿ ಯೋಜನೆಗಳಿಗೆ ರಕ್ಷಣಾ ಇಲಾಖೆಯ ಭೂಮಿಯನ್ನು ನೀಡಲು ಒಪ್ಪಿದ್ದಾರೆ.
ಕುಮಾರಸ್ವಾಮಿ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಅಭಿವೃದ್ಧಿ ಕಾರ್ಯಗಳಿಗೆ ರಕ್ಷಣಾ ಇಲಾಖೆ ಸುಪರ್ಧಿಯಲ್ಲಿರುವ ಭೂಮಿಯನ್ನು ನೀಡಲು ಒಪ್ಪಿದ್ದು, ರಕ್ಷಣಾ ಇಲಾಖೆಯು ಅಭಿವೃದ್ಧಿಗಾಗಿ ರಾಜ್ಯಗಳೊಂದಿಗೆ ಹೊಂದಿಕೊಂಡು ಸಾಗುತ್ತದೆ ಎಂದಿದ್ದಾರೆ.
ಮೆಟ್ರೋ ಎರಡನೇ ಹಂತದ ಕಾಮಗಾರಿಗೆ ಸುರಂಗ ಮಾರ್ಗ ಕೊರೆಯಲು ರಕ್ಷಣಾ ಇಲಾಖೆಗೆ ಸೇರಿದ ಜಾಗ ಅವಶ್ಯಕತೆ ಇತ್ತು. ಆಗಾಗಿ ಜಾಗ ನೀಡುವಂತೆ ಮುಖ್ಯಮಂತ್ರಿಳು ರಕ್ಷಣಾ ಇಲಾಖೆಗೆ ಪತ್ರ ಬರೆದಿದ್ದರು. ಇದಕ್ಕೆ ಸ್ಪಂದಿಸಿರುವ ಇಲಾಖೆಯು ಜಾಗ ಮಾಡಿಕೊಟ್ಟಿದೆ.

ರಕ್ಷಣಾ ಇಲಾಖೆಯು ಮೆಟ್ರೋ ಕಾಮಗಾರಿಗೆಂದು ಸರ್ಕಾರಕ್ಕೆ ಹಸ್ತಾಂತರಿಸುತ್ತಿರುವ ಭೂಮಿಯ ಮೌಲ್ಯಕ್ಕೆ ಸರಿಹೊಂದುವಷ್ಟೆ ಭೂಮಿಯನ್ನು ಸರ್ಕಾರವು ರಕ್ಷಣಾ ಇಲಾಖೆಗೆ ನೀಡಬೇಕು ಎಂಬ ಒಪ್ಪಂದವೂ ಈ ಸಮಯದಲ್ಲಿ ಆಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಭದ್ರತಾ ಎಕ್ಸ್ಪೊ ಪ್ರದರ್ಶನವನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳುವಂತೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಬಾರಿ ಗೋವಾ, ಈ ಬಾರಿ ತಮಿಳುನಾಡಿನಲ್ಲಿ ಆಗುತ್ತಿದೆ. ಹಲವು ನಗರಗಳು ರಕ್ಷಣಾ ಸಾಮಗ್ರಿಗಳ ಪ್ರದರ್ಶನಕ್ಕೆ ಮನವಿ ಮಾಡಿವೆ ನಾವಿನ್ನೂ ಅಂತಿಮಗೊಳಿಸಿಲ್ಲ ಎಂದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications