ದೆಹಲಿ ಮಾದರಿಯಲ್ಲಿ ರಾಜ್ಯ ವಕೀಲರಿಗೆ ಆರೋಗ್ಯ ವಿಮೆ ಸೌಲಭ್ಯ
ಬೆಂಗಳೂರು, ಜು. 01: ರಾಜ್ಯದ ವಕೀಲರಿಗೆ ಸಂತಸದ ಸುದ್ದಿ. ದೆಹಲಿ ಮಾದರಿಯಲ್ಲಿ ರಾಜ್ಯದ ವಕೀಲರಿಗೂ ಜೀವ ವಿಮೆ ಮತ್ತು ಆರೋಗ್ಯ ವಿಮೆ ಸಿಗುವ ಕಾಲ ಸಮೀಪಿಸಿದೆ. ದೆಹಲಿ ಮಾದರಿಯಲ್ಲಿ ರಾಜ್ಯದ ವಕೀಲರಿಗೆ ಜೀವ ವಿಮೆ ಹಾಗೂ ಆರೋಗ್ಯ ವಿಮೆ ಯೋಜನೆಯನ್ನು ಪರಿಶೀಲಿಸಿ ಸರ್ಕಾರ ಪರಿಗಣಿಸಬಹುದು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ನಡೆದಿರುವ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ದೆಹಲಿ ಮಾದರಿಯಲ್ಲಿ ರಾಜ್ಯದಲ್ಲೂ ವಕೀಲರಿಗೆ ಜೀವವಿಮೆ ಮತ್ತು ಆರೋಗ್ಯ ವಿಮೆ ಒದಗಿಸಲು ಸೂಕ್ತ ಯೋಜನೆ ರೂಪಿಸುವಂತೆ ಕರ್ನಾಟಕ ಹೈಕೋರ್ಟ್ ಈ ಹಿಂದೆ ಸೂಚಿಸಿತ್ತು. ಕೊರೊನಾ ಸಂದರ್ಭದಲ್ಲಿಯೂ ಜೀವ ಲೆಕ್ಕಿಸದೆ ಕೆಲಸ ಮಾಡುತ್ತಿರುವ ವಕೀಲರಿಗೆ ವಿಮೆ ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಪತ್ರ ಬರೆದಿದ್ದರು. ಪತ್ರ ಆಧರಿಸಿ ಹೈಕೋರ್ಟ್ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿತ್ತು. ವಕೀಲರ ಸಂಘ, ಕರ್ನಾಟಕ ವಕೀಲರ ಪರಿಷತ್ ಪದಾಧಿಕಾರಿಗಳು ಮತ್ತು ವಿಮಾ ಕಂಪೆನಿಗಳೊಂದಿಗೆ ಸಭೆ ನಡೆಸಿ ಅಭಿಪ್ರಾಯ ಆಧರಿಸಿ ವಕೀಲರಿಗೆ ಜೀವ ವಿಮೆ ಹಾಗೂ ಆರೋಗ್ಯ ವಿಮೆ ಒದಗಿಸುವ ಸಂಬಂಧ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಸೂಚಿಸಲಾಗಿತ್ತು.'

Recommended Video
ನ್ಯಾಯಾಲಯ ಆದೇಶದ ಹಿನ್ನೆಲೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ವಕೀಲರ ಸಂಘದ ಅಧ್ಯಕ್ಷ ಎ.ಪಿ. ರಂಗನಾಥ್, ಸುರಕ್ಷ ಆರೋಗ್ಯ ಟ್ರಸ್ಟ್, ನ್ಯೂ ಇಂಡಿಯಾ ಅಶೂರೆನ್ಸ್ ಇಂಡಿಯಾ ಒದಗಿಸಿರುವ ಪಾಲಿಸಿಗಳ ಬಗ್ಗೆ ವಿವರಣೆ ನೀಡಿದ್ದರು. ದೆಹಲಿಯಲ್ಲಿ ವಕೀಲರಿಗೆ ಕಲ್ಪಿಸಿರುವ ವಿಮಾ ಸೌಲಭ್ಯದಿಂಧ 23 ಸಾವಿರ ವಕೀಲರು ಸೌಲಭ್ಯ ಪಡೆದುಕೊಂಡಿದ್ದು, ರಾಜ್ಯದಲ್ಲಿ ಒಂದು ಲಕ್ಷ ವಕೀಲರು ಇರುವ ಬಗ್ಗೆ ವಿವರಣೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯದಲ್ಲೂ ವಕೀಲರಿಗೆ ದೆಹಲಿ ಮಾದರಿಯಲ್ಲಿ ಜೀವ ವಿಮೆ ಮತ್ತು ಆರೋಗ್ಯ ವಿಮೆ ಸೌಲಭ್ಯ ವಿಸ್ತರಣೆ ಮಾಡುವ ನಿರ್ಧಾರ ತೆಗೆದುಕೊಳ್ಳಬಹುದು ಎಂದು ತೀರ್ಮಾನಿಸಲಾಗಿದೆ ಎಂದು ವಕೀಲ ಸಂಘದ ಮೂಲಗಳು ಸ್ಪಷ್ಟಪಡಿಸಿವ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ












Click it and Unblock the Notifications