ಖಾತೆ ಸ್ಥಗಿತ, PACL ಕಚೇರಿಗೆ ಠೇವಣಿದಾರರ ಮುತ್ತಿಗೆ
ಬೆಂಗಳೂರು, ಏ.22: ಮೋಸ ಮಾಡುವವರು ಹತ್ತಾರು ಮಂದಿಯಿದ್ದರೆ, ಮೋಸ ಹೋಗೋದಕ್ಕೇ ಅಂತಾನೆ ನೂರಾರು ಮಂದಿ ಇರುತ್ತಾರಂತೆ. ಇದು ನಿನ್ನೆ ಮೊನ್ನೆಯ ಕಥೆಯಲ್ಲ. ಜನರ ಮನದಲ್ಲಿ ಯಾವಾಗ ಹೆಚ್ಚು ದುಡ್ಡು ಮಾಡುವ ಆಸೆ ಬಂತೋ ಆ ಕಾಲದಿಂದಲೂ ಎರಡೂ ವರ್ಗದ ಜನ ಇದ್ದಾರೆ. ಇಷ್ಟಾದರೂ ಮೋಸ ಹೋಗುವ ಮಂದಿ ಎಚ್ಚೆತ್ತುಕೊಳ್ಳುವುದಿಲ್ಲವಲ್ಲಾ ಎಂಬುದೇ ಬೇಸರದ ಸಂಗತಿ.
ಅಂದಹಾಗೆ ದೆಹಲಿ ನೆಲೆಯ PACL (Pearls) ಮತ್ತು PGF ಎಂಬ 2 ಕಂಪನಿಗಳು ಮಹಾ ದಗಾಕೋರ ಕಂಪನಿಗಳು ಜನರಿಗೆ ಬರೋಬ್ಬರಿ 45,000 ಕೋಟಿ ರೂ ಅಗಾಧ ಪ್ರಮಾಣದ ವಂಚನೆ ಮಾಡಿದೆ ಎಂದು ಸಿಬಿಐ ತನಿಖಾ ಸಂಸ್ಥೆಯು ತನಿಖೆ ಕೈಗೆತ್ತಿಕೊಂಡಿದ್ದರ ಬಗ್ಗೆ ಈ ಹಿಂದೆ ಓದಿದ್ದಿರಿ. ಅದರ ಮುಂದುವರಿದ ಭಾಗವಾಗಿ, ಈ ಸಂಸ್ಥೆಗಳ ಏಜೆಂಟರುಗಳ ಕೈಗೆ ತಿಂಗಳಾ ತಿಂಗಳಾ ವಂತಿಗೆ ತುಂಬುತ್ತಾ ಲಕ್ಷಾಂತರ ರೂಪಾಯಿ ಕಳೆದುಕೊಂಡ ಕರ್ನಾಟಕದ ಜನ ಈಗ ನಿಜಕ್ಕೂ ಸಂಕಷ್ಟಕ್ಕೆ ಸಿಕ್ಕಿಹಾಕಿಕೊಂಡಿದ್ದಾರೆ.

PACL(Pearls) ಕಂಪನಿಯಲ್ಲಿ ಅವ್ಯವಹಾರ/ಅಕ್ರಮಗಳು ನಡೆಯುತ್ತಿವೆ ಎಂದು ದೂರುಗಳು ಕೇಳಿಬಂದಾಗ ಸಿಬಿಐ ತನಿಖೆಯನ್ನು ಕೈಗೆತ್ತಿಕೊಂಡಿದೆ. ಅದರಂತೆ ದಿಲ್ಲಿ ಹೈಕೋರ್ಟಿನಲ್ಲಿ ವಿಚಾರಣೆ ಸಹ ನಡೆಯುತ್ತಿದೆ. ಹಾಗಾಗಿ ಕಂಪನಿಯ ಎಲ್ಲಾ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವಂತೆ ಕೋರ್ಟ್ ಆದೇಶ ನೀಡಿದೆ. (PACL 45000 ಕೋ ರೂ ಹಗರಣ ಬಯಲಿಗೆಳೆದ ಸಿಬಿಐ!)
ಆದರೆ ಫೆ. 26ಕ್ಕೂ ಮೊದಲು ಕಂಪನಿ ಕೊಟ್ಟಿದ್ದ ಚೆಕ್ ಗಳು ಬೌನ್ಸ್ ಆಗಿ ಠೇವಣಿದಾರರಲ್ಲಿ ಆತಂಕ ಮೂಡಿಸಿದೆ. ಆತಂಕಕ್ಕೊಳಗಾದ ಠೇವಣಿದಾರರು ನಿನ್ನೆ ಕಚೇರಿಗೆ ಮುತ್ತಿಗೆ ಹಾಕಿ ಅಲ್ಲಿದ್ದ ಏಜೆಂಟರುಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ವಿಷಯ ತಿಳಿದ ಕಬ್ಬನ್ ಪಾರ್ಕ್ ಪೊಲೀಸರು ಸ್ಥಳಕ್ಕೆ ಧಾವಿಸಿ, ವಿಚಾರಣೆ ನಡೆಸಿದ್ದಾರೆ
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications