'ಬೆಂಗಳೂರು ಟ್ರಾಫಿಕ್' ನಿಯಂತ್ರಣಕ್ಕೆ 'ಪ್ರೀಮಿಯಂ ಬಸ್ ಸಂಚಾರ ಆರಂಭಿಸಿ', ಈ ಸೇವೆ ವಿಶೇಷತೆಗಳೇನು?
ಬೆಂಗಳೂರು, ಅಕ್ಟೋಬರ್ 27:ಸಿಲಿಕಾನ್ ಸಿಟಿ ಬೆಂಗಳೂರು ಸಂಚಾರ ದಟ್ಟಣೆ (Bengaluru Traffic) ವಿಚಾರದಲ್ಲಿ ವಿಶ್ವದ ಎರಡನೇ ಅತೀ ದೊಡ್ಡ ನಗರ ಎಂಬ ಹೆಸರಿದೆ. ಹೀಗಾಗಿ ಇಲ್ಲಿನ ಟ್ರಾಫಿಕ್ ಮತ್ತು ಮಾಲಿನ್ಯ ನಿಯಂತ್ರಣದ ದೃಷ್ಟಿಯಲ್ಲಿ ದೆಹಲಿ ಮಾದರಿಯ ಪ್ರೀಮಿಯಂ ಬಸ್ಗಳ ಸಂಚಾರ ಇಲ್ಲಿಯೂ ಆರಂಭಿಸಬೇಕು ಎಂಬ ಒತ್ತಾಯ ಕೇಳಿ ಬಂದಿದೆ.
ಆಮ್ ಆದ್ಮಿ ಪಕ್ಷದ ಮುಖಂಡ ಜಗದೀಶ್ ಸದಂ ಅವರು ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಸರ್ಕಾರವು "ಪ್ರೀಮಿಯಂ ಬಸ್ ಅಗ್ರಿಗೇಟರ್ ಪಾಲಿಸಿ 2023"ಗೆ ಅನುಮೋದನೆ ನೀಡಿದೆ. ಈ ಮೂಲಕ ಬಡತನ ರೇಖೆಗಿಂತ ಮೇಲಿರುವ ಮಧ್ಯಮ ವರ್ಗ ಹಾಗೂ ಶ್ರೀಮಂತ ವರ್ಗದವರನ್ನು ಬಸ್ಗಳಲ್ಲಿ ಸಂಚರಿಸುವಂತೆ ಉತ್ತೇಜನ ನೀಡುವ ಸಲುವಾಗಿ ಆ್ಯಪ್ ಆಧಾರಿತ ಆನ್ಲೈನ್ ಬಸ್ ಸೇವೆ ಯೋಜನೆಯನ್ನು ಆರಂಭಿಸಲಾಗಿದೆ.

ಇ-ವಾಹನಗಳ ಬಳಕೆಗೆ ಉತ್ತೇಜನ ನೀಡುತ್ತಿದೆ. ರಾಜ್ಯಪಾಲರ ಅನುಮೋದನೆ ಸಿಗುತ್ತಿದ್ದಂತೆ ಪ್ರೀಮಿಯಂ ಬಸ್ ಸೇವೆಗೆ ಚಾಲನೆ ಸಿಗಲಿದೆ ಎಂದು ತಿಳಿಸಿದರು.
ಸಿಎಂ, ಡಿಸಿಎಂಗೆ ಎಎಪಿ ಮನವಿ
ಬಡವರು ಮತ್ತು ಬಡ ಮಧ್ಯಮ ವರ್ಗದವರು ಬಸ್ಗಳಲ್ಲಿ ಸಂಚರಿಸುತ್ತಾರೆ. ಹಾಗೆಯೇ ಮಧ್ಯಮ ವರ್ಗದವರು ಮತ್ತು ಶ್ರೀಮಂತ ವರ್ಗದವರು ತಮ್ಮ ಖಾಸಗಿ ವಾಹನಗಳನ್ನು ಬಿಟ್ಟು ಬಸ್ಗಳಲ್ಲೇ ದಿನನಿತ್ಯ ಓಡುವಂತೆ ಉತ್ತೇಜನ ನೀಡುವ ಸಲುವಾಗಿ ದೆಹಲಿ ಮಾದರಿಯ ಪ್ರೀಮಿಯಂ ಬಸ್ಗಳ ಸೇವೆಯನ್ನು ರಾಜ್ಯದ ಬೆಂಗಳೂರಿನಂತಹ ನಗರಗಳಲ್ಲಿ ಆರಂಭಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರಿಗೆ ಮನವಿ ಮಾಡಿದರು.

ಎಸಿ, ವೈಫೈ, ಜಿಪಿಎಸ್, ಸಿಸಿಟಿವಿ ಸೇರಿದಂತೆ ಲಕ್ಸೂರಿ ಖಾಸಗಿ ವಾಹನಗಳಲ್ಲಿರುವ ಎಲ್ಲ ರೀತಿಯ ವ್ಯವಸ್ಥೆಗಳನ್ನು ಒಳಗೊಂಡ ಆಧುನಿಕ ಬಸ್ಗಳು ಸಂಚಾರ ಆರಂಭಿಸಿದರೆ ಸ್ವಂತ ಕಾರುಗಳನ್ನು ಬಿಟ್ಟು ಬಸ್ಗಳಲ್ಲೇ ಸಂಚರಿಸಲು ಆರಂಭಿಸುತ್ತಾರೆ. ಈ ಮೂಲಕ ಸಂಚಾರ ದಟ್ಟಣೆ, ವಾಯು ಮಾಲಿನ್ಯದಂತಹ ಪ್ರಮುಖ ಸಮಸ್ಯೆಗಳನ್ನು ಹತೋಟಿಗೆ ತರಬಹುದು.
ಪ್ರಿಮಿಯಂ ಬಸ್ ಸೇವೆಯ ವಿಶೇಷತೆ
ಪ್ರೀಮಿಯಂ ಬಸ್ಗಳಲ್ಲಿ ಆನ್ಲೈನ್ ಮೂಲಕ ಸೀಟ್ ಕಾಯ್ದಿರಿಸುವುದು ಹಾಗೂ ಪೇಮೆಂಟ್ ಮಾಡುವ ಅವಕಾಶವಿದೆ. ನಿಂತು ಪ್ರಯಾಣಿಸುವುದಕ್ಕೆ ಅವಕಾಶವಿಲ್ಲ. ಎಲ್ಲರಿಗೂ ಆಸನದ ಸಿಗಲಿದೆ. ಬಸ್ ಒಳಗೆ ಟಿಕೆಟ್ ಹರಿಯುವ ಸಂಪ್ರದಾಯ ಇರುವುದಿಲ್ಲ. ನೂಕುನುಗ್ಗಲು, ಅನವಶ್ಯಕ ಗದ್ದಲ ಇರುವುದಿಲ್ಲ. ಸ್ವಂತ ಗಾಡಿಯಲ್ಲಿ ಆರಾಮದಾಯಕವಾಗಿ, ಅನುಕೂಲಕರವಾಗಿ ಪ್ರಯಾಣಿಸಿದಂತೆ ದಿನನಿತ್ಯ ಓಡಾಡಬಹುದು ಎಂದು ಜಗದೀಶ್ ವಿವರಿಸಿದರು.
ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಿಸಲು 190ಕಿ.ಮೀ. ಉದ್ದದ ಸುರಂಗ ಮಾರ್ಗವನ್ನು ಕೊರೆಯಲು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುಂದಾಗಿದ್ದಾರೆ. ಇಂತಹ ಅಪಾಯಕಾರಿ ಮತ್ತು ಅವೈಜ್ಞಾನಿಕ ಯೋಜನೆಗಳಿಗೆ ಕೈಹಾಕುವ ಬದಲು ದೆಹಲಿ ಸರ್ಕಾರದ ಪ ಕ್ರಾಂತಿಕಾರಿ ಯೋಜನೆಗಳನ್ನು ನಮ್ಮ ರಾಜ್ಯದಲ್ಲಿ ಅನುಷ್ಠಾನಗೊಳಿಸುವುದು ಉತ್ತಮ ಎಂದರು.
ಸಲೀಂರಂತಹ ದಕ್ಷ ಅಧಿಕಾರಿ ನೇಮಕಕ್ಕೆ ಆಗ್ರಹ
ಬೆಂಗಳೂರು ನಗರದ ವಾಹನಗಳ ಸುಗಮ ಸಂಚಾರ ಹಾಗೂ ಸಂಚಾರ ನಿಯಮಗಳ ಜಾರಿ ಹೊಣೆಯನ್ನು ನಿರ್ವಹಿಸಲು ಹೊಸದಾಗಿ ಸೃಷ್ಟಿಸಿದ್ದ ಬೆಂಗಳೂರು ವಿಶೇಷ ಟ್ರಾಫಿಕ್ ಕಮಿಷನರ್ ಹುದ್ದೆಯನ್ನು ಮರುಸ್ಥಾಪಿಸಬೇಕು ಹಾಗೂ ಸಮರ್ಥವಾಗಿ ನಿಭಾಯಿಸುತ್ತಿದ್ದ ಎಡಿಜಿಪಿ, ವಿಶೇಷ ಕಮಿಷನರ್ ಎಂ.ಎ.ಸಲೀಂ ಅವರನ್ನು ಪುನಃ ಮುಂದುವರಿಸಬೇಕು ಎಂದು ಆಗ್ರಹಿಸಿದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್







Click it and Unblock the Notifications