ಲೀಗಲ್ ಕೆಲಸಕ್ಕೆ ಲಂಚ ಕೇಳಿ ಸಿಕ್ಕಿಬಿದ್ದ ಬಿಬಿಎಂಪಿ ಇಂಜಿನಿಯರ್
ಬೆಂಗಳೂರು, ಏಪ್ರಿಲ್ 19: ಅಕ್ರಮವಾಗಿ ಕೆಲಸ ಮಾಡಿಕೋಡೋಕೆ ಲಂಚ ಪಡೆದು ಜೈಲು ಸೇರಿರುವ ಪ್ರಸಂಗ ನೋಡಿರುತ್ತೀರಿ. ಇಲ್ಲೊಬ್ಬ ಇಂಜಿನಿಯರ್ ಕಾನೂನು ಪ್ರಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲು ಲಂಚ ಸ್ವೀಕರಿಸಿ ಎಸಿಬಿ ಬಲೆಗೆ ಬಿದ್ದು ಜೈಲಿಗೆ ಹೋಗಿದ್ದಾನೆ.
ಆತನ ಹೆಸರು ಪೂಜಾರಪ್ಪ. ಬಿಬಿಎಂಪಿ ಗಾಂಧಿನಗರ ಉಪ ವಿಭಾಗದ ಸಹಾಯಕ ಇಂಜಿನಿಯರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ಐವತ್ತು ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪೂಜಾರಪ್ಪ ಹದಿನೈದು ಸಾವಿರ ರೂ. ಲಂಚ ಸ್ವೀಕರಿಸಿ ಬೆಂಗಳೂರು ನಗರ ಘಟಕದ ಎಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಬೆಂಗಳೂರಿನ ರಾಘವೇಂದ್ರ ನಗರದ ನಿವಾಸಿಗೆ ಸಂಬಂಧಿಸಿದ ಜಾಗವೊಂದು ಶೇಷಾದ್ರಿಪುರಂ ಬಳಿ ಇತ್ತು. ಇವರ ಸಂಬಂಧಿಯೊಬ್ಬರಿಂದ ಅಕ್ರಮವಾಗಿ ಭೂಮಿ ಖರೀದಿ ಮಾಡಿ ವಿವಾದಿತ ಜಮೀನಿನಲ್ಲಿ ಖರೀದಿದಾರರು ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡುತ್ತಿದ್ದರು. ಭೂ ವಿವಾದ ನ್ಯಾಯಾಲಯದಲ್ಲಿದ್ದರೂ ಅಕ್ರಮವಾಗಿ ಕಟ್ಟಡ ಕಟ್ಟುತ್ತಿರುವ ಬಗ್ಗೆ ರಾಘವೇಂದ್ರನಗರದ ನಿವಾಸಿ ಬಿಬಿಎಂಪಿ ಗಾಂಧಿನಗರದ ಉಪ ವಿಭಾಗ ಕಚೇರಿಗೆ ದೂರು ನೀಡಿದ್ದರು.

ದೂರಿನ ಅನ್ವಯ ಕೆಎಂಸಿ ಕಾಯ್ದೆ ಉಲ್ಲಂಘನೆ ಮಾಡಿದ ವ್ಯಕ್ತಿಯ ವಿರುದ್ಧ ಕ್ರಮ ಜರುಗಿಸಲು 50 ಸಾವಿರ ರೂ.ಲಂಚ ನೀಡುವಂತೆ ಪೂಜಾರಪ್ಪ ಬೇಡಿಕೆ ಇಟ್ಟಿದ್ದಾನೆ. ಇಷ್ಟೊಂದು ಹಣ ನೀಡಲು ಸಾಧ್ಯವಿಲ್ಲ, ಕಂತುಗಳ ಮೂಲಕ ನೀಡುವುದಾಗಿ ಹೇಳಿ ಎಸಿಬಿ ಪೊಲೀಸರಿಗೆ ದೂರು ನೀಡಿದ್ದರು.
Recommended Video
ಮುಂಗಡವಾಗಿ ಈಗಾಗಲೇ ಹದಿನೈದು ಸಾವಿರ ರೂ. ಸ್ವೀಕರಿಸಿದ್ದ ಪೂಜಾರಪ್ಪ ಇಂದು ಎರಡನೇ ಕಂತಿನ ಹದಿನೈದು ಸಾವಿರ ರೂ. ಲಂಚ ಹಣವನ್ನು ಪಡೆಯುವಾಗ ಬೆಂಗಳೂರು ನಗರ ಘಟಕದ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಲಂಚದ ಹಣ ಸಮೇತ ಪೂಜಾರಪ್ಪ ಸಿಕ್ಕಿಬಿದ್ದಿದ್ದು ಬೆಂಗಳೂರು ನಗರ ಘಟಕದ ಎಸಿಬಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಅಕ್ರಮವಾಗಿ ಕೆಲಸ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು, ಸಿಕ್ಕಿ ಬೀಳುವುದು ಸಾಮಾನ್ಯ. ಇಲ್ಲಿ ಕಾನೂನು ಪ್ರಕಾರ ಕೆಲಸ ಮಾಡಲಿಕ್ಕೆ ಲಂಚ ಕೇಳಿ ಇಂಜಿನಿಯರ್ ಜೈಲಿಗೆ ಹೋಗಿದ್ದಾನೆ.
-
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ.












Click it and Unblock the Notifications