ಲಂಚ ಕೇಳಿದ ತಿಲಕ್ ನಗರ ಠಾಣೆ ಇನ್ಸ್ಪೆಕ್ಟರ್ ಅಮಾನತು
ಬೆಂಗಳೂರು, ಅಕ್ಟೋಬರ್ 05 : ವೈನ್ ಶಾಪ್ ವಿರುದ್ಧ ಕೇಸು ದಾಖಲಿಸದೇ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದ ಪೊಲೀಸ್ ಇನ್ಸ್ಪೆಕ್ಟರ್ ಅಮಾನತು ಗೊಂಡಿದ್ದಾರೆ. ಬೆಂಗಳೂರಿನ ತಿಲಕ್ ನಗರ ಠಾಣೆ ಇನ್ಸ್ಪೆಕ್ಟರ್ ತನ್ವೀರ್ ಸೇಠ್ ಅಮಾನತುಗೊಂಡವರು.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಅವರು ತ್ವನೀರ್ ಸೇಠ್ ಅವರನ್ನು ಅಮಾನತು ಮಾಡಿದ್ದಾರೆ. ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರ ಸೂಚನೆಯಂತೆ ಅಮಾನತು ಮಾಡಲಾಗಿದ್ದು, ಇಲಾಖಾ ತನಿಖೆಗೆ ಆದೇಶ ಹೊರಡಿಸಲಾಗಿದೆ.

ಇನ್ಸ್ಪೆಕ್ಟರ್ ತನ್ವೀರ್ ಸೇಠ್ ವಿರುದ್ಧ ಹಲವು ಆರೋಪಗಳು ಕೇಳಿ ಬಂದಿದ್ದವು. ಅವುಗಳನ್ನು ಗಮನಿಸಿ ಗೃಹ ಸಚಿವರ ಗಮನಕ್ಕೆ ತರಲಾಗಿತ್ತು. ಇಲಾಖಾ ಮಟ್ಟದಲ್ಲಿ ನಡೆಸಿದ ರಹಸ್ಯ ತನಿಖೆಯಲ್ಲಿ ಅಕ್ರಮಗಳು ಸಾಬೀತಾಗಿತ್ತು. ಆದ್ದರಿಂದ, ಅಮಾನತು ಮಾಡಲಾಗಿದೆ.
ಕೆಲವು ದಿನಗಳ ಹಿಂದೆ ವೈನ್ ಶಾಪ್ ಮಾಲೀಕ ಸೇರಿದಂತೆ ಮೂವರನ್ನು ಠಾಣೆಗೆ ಕರೆದುಕೊಂಡು ಬಂದಿದ್ದ ತನ್ವೀರ್ ಸೇಠ್, ಅಕ್ರಮವಾಗಿ ಅವರನ್ನು ಒಂದು ದಿನ ಠಾಣೆಯಲ್ಲಿಟ್ಟುಕೊಂಡಿದ್ದರು. 2 ಲಕ್ಷ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು.
ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ರಾಮಲಿಂಗಾ ರೆಡ್ಡಿ ಅವರು ಎಲ್ಲಾ ಪೊಲೀಸರಿಗೆ 20 ಅಂಶಗಳ ವಿಚಾರವನ್ನು ತಿಳಿಸಿದ್ದರು. ಎಲ್ಲರೂ ಇದನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಇಲ್ಲವಾದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications