ಬೆಂಗಳೂರು-ಮಂಗಳೂರು ರೈಲು: ಸಚಿವ ವಿ. ಸೋಮಣ್ಣ ಮುಂದೆ ಬೇಡಿಕೆಗಳೇನು?
ಬೆಂಗಳೂರು, ಏಪ್ರಿಲ್ 15: ರಾಜಧಾನಿ ಬೆಂಗಳೂರು ಮತ್ತು ಕರಾವಳಿಯನ್ನು ಸಂಪರ್ಕಿಸಲು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಮುಂದೆ ಹಲವು ಬೇಡಿಕೆಗಳನ್ನು ಇಡಲಾಗಿದೆ. ಇದರಲ್ಲಿ ವಂದೇ ಭಾರತ್ ರೈಲು ಸೇವೆ ಮುಂಬೈ ನಗರಕ್ಕೆ ವಿಸ್ತರಣೆ, ಯಶವಂತಪುರ-ಸಿಎಸ್ಟಿಎಂ ರೈಲನ್ನು ಮಂಗಳೂರು ತನಕ ವಿಸ್ತರಣೆ ಮಾಡುವುದು ಸೇರಿದಂತೆ ಹಲವು ಬೇಡಿಕೆಗಳು ಸೇರಿವೆ.
ಬೆಂಗಳೂರು ನಗರದ ಯಶವಂತಪುರ ಮತ್ತು ಛತ್ರಪತಿ ಶಿವಾಜಿ ಟರ್ಮಿನಸ್ ಮುಂಬೈ ನಡುವಿನ ರೈಲನ್ನು ಮಂಗಳೂರು ಸೆಂಟ್ರಲ್ ನಿಲ್ದಾಣದ ತನಕ ವಿಸ್ತರಣೆ ಮಾಡಬೇಕು ಎಂಬುದು ಬೇಡಿಕೆ. ಈ ಕುರಿತು ಸಚಿವ ವಿ. ಸೋಮಣ್ಣ ಅವರಿಗೆ ಪಶ್ಚಿಮ ಕರಾವಳಿ ರೈಲ್ವೆ ಯಾತ್ರಿ ಅಭಿವೃದ್ಧಿ ಸಮಿತಿ ಮನವಿಯನ್ನು ಸಲ್ಲಿಕೆ ಮಾಡಿದೆ.

ಯಾವ-ಯಾವ ಬೇಡಿಕೆಗಳು
* ಯಶವಂತಪುರ-ಮಂಗಳೂರು ಜಂಕ್ಷನ್ ಎಕ್ಸ್ಪ್ರೆಸ್ ರೈಲು (16575/ 76) ಮತ್ತು16539/ 40) ರೈಲುಗಳನ್ನು ಮಂಗಳೂರು ಸೆಂಟ್ರಲ್ ತನಕ ವಿಸ್ತರಣೆ ಮಾಡಬೇಕು.
* ಸಿಎಸ್ಟಿಎಂ ಮುಂಬೈ-ಮಂಗಳೂರು ಜಂಕ್ಷನ್ ರೈಲು (12133/ 34) ಮಂಗಳೂರು ಸೆಂಟ್ರಲ್ ತನಕ ವಿಸ್ತರಣೆ ಮಾಡಬೇಕು.
* ಮಂಗಳೂರು ಸೆಂಟ್ರಲ್-ಮಡಗಾಂವ್ ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಮುಂಬೈ ಸಿಎಸ್ಟಿಎಂ ತನಕ ವಿಸ್ತರಿಸಬೇಕು.
* ಮಂಗಳೂರು-ಕತ್ರಾ ನವಯುಗ ಎಕ್ಸ್ಪ್ರೆಸ್ ರೈಲನ್ನು ಪುನಃ ಆರಂಭಿಸಬೇಕು. ಮಾರ್ಗವನ್ನು ಸುಬ್ರಮಣ್ಯ ರೋಡ್, ಹಾಸನ, ಭೋಪಾಲ್ ಮತ್ತು ದೆಹಲಿಯಾಗಿ ಬದಲಾವಣೆ ಮಾಡಬೇಕು.
ರಾಜಧಾನಿ ಬೆಂಗಳೂರು ಮತ್ತು ಕರಾವಳಿ ಸಂಪರ್ಕಿಸಲು ಇನ್ನಷ್ಟು ರೈಲುಗಳು ಬೇಕು ಎಂಬುದು ಬೇಡಿಕೆಯಾಗಿದೆ. ಈಗಿರುವ ರೈಲುಗಳಲ್ಲಿ ಜನದಟ್ಟಣೆ ಅಧಿಕವಾಗಿದ್ದು, ಸಾಲು ಸಾಲು ರಜೆಗಳ ಸಂದರ್ಭದಲ್ಲಿ ಸೀಟುಗಳು ಸಿಗದೆ ಜನರು ಪರದಾಡುತ್ತಾರೆ. ಆದ್ದರಿಂದ ಇನ್ನಷ್ಟು ರೈಲುಗಳನ್ನು ಓಡಿಸಬೇಕು ಎಂದು ಪದೇ ಪದೇ ಮನವಿ ಮಾಡಲಾಗುತ್ತಿದೆ.
ಈ ಮನವಿಯಂತೆಯೇ ಯಶವಂತಪುರ ಮತ್ತು ಛತ್ರಪತಿ ಶಿವಾಜಿ ಟರ್ಮಿನಸ್ ಮುಂಬೈ ನಡುವಿನ ರೈಲನ್ನು ಮಂಗಳೂರು ಸೆಂಟ್ರಲ್ ನಿಲ್ದಾಣದ ತನಕ ವಿಸ್ತರಣೆ ಮಾಡಿ, ಕರಾವಳಿಗೆ ಸಂಚಾರ ನಡೆಸುವ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಬೇಡಿಕೆ ಇಡಲಾಗಿದೆ.
ಮಂಗಳೂರು-ಮುಂಬೈ ವಂದೇ ಭಾರತ್ ರೈಲು: ಮಂಗಳೂರು-ಮುಂಬೈ ನಡುವೆ ವಂದೇ ಭಾರತ್ ರೈಲು ಆರಂಭಿಸಬೇಕು ಎಂಬ ಬೇಡಿಕೆ ಇದೆ. ಸಚಿವ ವಿ. ಸೋಮಣ್ಣ ಉಭಯ ನಗರದ ನಡುವೆ ವಂದೇ ಭಾರತ್ ಸ್ಲೀಪರ್ ಮಾದರಿ ರೈಲು ಆರಂಭಿಸಲಾಗುತ್ತದೆ ಎಂಬ ಭರವಸೆಯನ್ನು ಸಹ ನೀಡಿದ್ದಾರೆ.
ಸದ್ಯ ಮಂಗಳೂರು-ಮಡಗಾಂವ್ ನಡುವೆ ವಂದೇ ಭಾರತ್ ರೈಲು ಸಂಚಾರವನ್ನು ನಡೆಸುತ್ತಿದೆ. ಈ ರೈಲು ಪ್ರಯಾಣಿಕರ ಕೊರತೆ ಎದುರಿಸುತ್ತಿದೆ. ಇದನ್ನು ರದ್ದುಗೊಳಿಸುವ ಬದಲು ಮುಂಬೈ ತನಕ ವಿಸ್ತರಣೆ ಮಾಡಬೇಕು ಎಂದು ಬೇಡಿಕೆ ಇಡಲಾಗಿದೆ.
ಈ ಕುರಿತು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. 'ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ರದ್ದಾಗುವುದಿಲ್ಲ, ಬದಲಾಗಿ ಮುಂಬೈಗೆ ಓಡಲಿದೆ' ಎಂದು ಹೇಳಿದ್ದಾರೆ.
'ಮಂಗಳೂರು-ಉಡುಪಿ-ಮಡಗಾಂವ್ ರೈಲು ಮುಂಬೈಗೆ ವಿಸ್ತರಣೆ ಆಗಬೇಕೆಂದು ರೈಲು ಸಚಿವರು ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ನಿರಂತರವಾಗಿ ನಾನು ಸಂಪರ್ಕದಲ್ಲಿದ್ದು ಕಳೆದ ವಾರವೂ ಮಾನ್ಯ ಸಚಿವರುಗಳು ಮತ್ತು ರೈಲು ಮಂಡಳಿಯ ಅಧ್ಯಕ್ಷರನ್ನು ಭೇಟಿಯಾಗಿ ಚರ್ಚಿಸಿದ್ದೆ' ಎಂದು ಸಂಸದರು ತಿಳಿಸಿದ್ದಾರೆ.
'ಇತ್ತೀಚೆಗೆ ರೈಲು ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ಮತ್ತು ವಿ. ಸೋಮಣ್ಣ ಅವರು ಈ ಸಂಬಂಧ ನನ್ನ ಮನವಿಯನ್ನು ಅತ್ಯಂತ ಗೌರವಪೂರ್ವಕವಾಗಿ ಆಲಿಸಿ ಈ ಯೋಜನೆಯನ್ನು ಜಾರಿಗೊಳಿಸುವುದಾಗಿ ತಿಳಿಸಿದ್ದಾರೆ' ಎಂದು ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ.
'ಸದ್ಯಕ್ಕೆ ಮಂಗಳೂರು-ಮಡಗಾಂವ್ ವಂದೇ ಭಾರತ್ ರೈಲು ಸೇವೆ ರದ್ದಾಗುವ ಭೀತಿ ಸಂಪೂರ್ಣವಾಗಿ ದೂರವಾಗಿದ್ದು ಈಗ ನಮ್ಮ ಮುಂದಿರುವ ಗುರಿ ಈ ರೈಲನ್ನು ಮುಂಬೈಗೆ ವಿಸ್ತರಿಸುವ ಗುರಿ ಮಾತ್ರವೇ ಆಗಿರುತ್ತದೆ. ಮುಂದುವರಿದು ಯಥಾಶೀಘ್ರ ವಂದೇಭಾರತ್ ಸ್ಲೀಪರ್ ರೈಲು ಆರಂಭವಾಗಲಿದ್ದು ಮುಂಬೈಗೆ ತೆರಳುವ ಕರಾವಳಿ ಪ್ರಯಾಣಿಕರಿಗೆ ಬಹಳಷ್ಟು ಉಪಯೋಗವಾಗಲಿದೆ' ಎಂದು ಸಂಸದರು ಪೋಸ್ಟ್ ಹಾಕಿದ್ದಾರೆ.
-
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ












Click it and Unblock the Notifications