ಒತ್ತುವರಿ ತೆರವಿಗೆ ತೊಂದರೆ ಇಲ್ಲ ಎಂದ ದರ್ಶನ್
ಬೆಂಗಳೂರು, ಆಗಸ್ಟ್ , 19: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಮಾಜಿ ಸಚಿವ, ಕಾಂಗ್ರೆಸ್ ಪ್ರಭಾವಿ ಮುಖಂಡ ಶಾಮನೂರು ಶಿವಶಂಕರಪ್ಪ ಅವರ ಆಸ್ತಿಯೂ ರಾಜಕಾಲುವೆ ಒತ್ತುವರಿ ತೆರವಿನಡಿ ಸಿಕ್ಕಿದೆ.
ಸಾಮಾನ್ಯ ಜನರು, ಮಧ್ಯಮ ವರ್ಗದವರ ಮನೆಯನ್ನು ಒಡೆದು ಹಾಕುತ್ತಿದ್ದ ಬಿಬಿಂಪಿಯ ಜೆಸಿಬಿಗಳು ಇದೀಗ ಪ್ರಭಾವಿಗಳ ಮನೆ ಕಡೆ ಮುಖ ಮಾಡಿವೆ.[ಮನೆ ಕಳೆದುಕೊಂಡವರಿಂದ ಬಿಬಿಎಂಪಿಗೆ ಪ್ರಶ್ನೆಗಳ ಸುರಿಮಳೆ]
ರಾಜರಾಜೇಶ್ವರಿ ನಗರದ ದರ್ಶನ್ ಮನೆ ಒತ್ತುವರಿ ಸ್ಕ್ಯಾನರ್ ಅಡಿಯಲ್ಲಿ ಬಂದಿದೆ. ಜಂಟಿ ಆಯುಕ್ತ ಬಿ ವೀರಭದ್ರಪ್ಪ ಈ ಬಗ್ಗೆ ಸಮಗ್ರ ಮಾಹಿತಿ ನೀಡುವಂತೆ ಕಂದಾಯ ಇಲಾಖೆಗೆ ಮನವಿ ಮಾಡಿಕೊಂಡಿದ್ದಾರೆ. ದರ್ಶನ್ ರ 'ತೂಗುದೀಪ ನಿವಾಸ' ಮತ್ತು ಶಾಮನೂರು ಶಿವಶಂಕರಪ್ಪ ಅವರ ಎಸ್ ಎಸ್ ಆಸ್ಪತ್ರೆ ಸಹ ಇದೀಗ ತೆರವಿನ ಭಯ ಎದುರಿಸುತ್ತಿದೆ.

ಮತ್ತೆ ಸರ್ವೇ
ಕಂದಾಯ ಇಲಾಖೆ ಆಧಾರಲ್ಲಿ ನೀಡಿರುವ ಮಾಹಿತಿ ಆಧಾರದಲ್ಲಿ ಇನ್ನೊಮ್ಮೆ ಸರ್ವೆ ಮಾಡಿ ಅಂತಿಮ ಕ್ರಮ ತೆಗೆದುಕೊಳ್ಳಲಾಗುವುದು ಎಂದು ವೀರಭದ್ರಪ್ಪ ತಿಳಿಸಿದ್ದಾರೆ.

ಡಿಕೆಶಿ ಪಟ್ಟಿಯಿಂದ ಹೊರಕ್ಕೆ
ಒತ್ತುವರಿಯಡಿ ಇಂಧನ ಸಚಿವ ಡಿಕೆ ಶಿವಕುಮಾರ್ ಅವರಿಗೆ ಸೇರಿದ ಆಸ್ತಿಯೂ ಬರುತ್ತದೆ ಎಂದು ಈ ಮೊದಲು ಹೇಳಲಾಗಿತ್ತು. ಆದರೆ ಹೊಸ ಪಟ್ಟಿಯಲ್ಲಿ ಡಿಕೆಶಿ ಆಸ್ತಿ ಇಲ್ಲ.

ದಿನಕರ್ ತೂಗುದೀಪ್ ಏನಂತಾರೆ?
ಮಾಧ್ಯಮಗಳ ಮೂಲಕವೇ ನಾವು ಒತ್ತುವರಿಗೆ ಸಂಬಂಧಿಸಿದ ಮಾಹಿತಿ ಪಡೆದುಕೊಂಡಿದ್ದೇವೆ. ಈ ಬಗ್ಗೆ ಬಿಬಿಎಂಪಿಯಿಂದಲೂ ಮಾಹಿತಿ ಪಡೆದುಕೊಂಡಿದ್ದೇನೆ ಎಂದು ದಿನಕರ್ ತೂಗುದೀಪ್ ತಿಳಿಸಿದ್ದಾರೆ.

ಅವರ ಕೆಲಸ ಅವರು ಮಾಡಲಿ
ದರ್ಶನ್ ಸದ್ಯ ಸಿನಿಮಾದ ಚಿತ್ರೀಕರಣವೊಂದರಲ್ಲಿ ತೊಡಗಿಕೊಂಡಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ಯಾವ ತೀರ್ಮಾನ ತೆಗೆದುಕೊಂಡರೂ ನಾವು ಬದ್ಧರಾಗಿದ್ದೇವೆ ಎಂದು ದರ್ಶನ್ ಹೇಳಿದ್ದಾರೆ ಎಂದು ದಿನಕರ್ ತಿಳಿಸಿದ್ದಾರೆ.

ಶಾಮನೂರಿಗೆ ಕಂಟಕ
ದಾವಣಗೆರೆ ದಕ್ಷಿಣದ ಎಂ ಎಲ್ ಎ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರಿಗೆ ಸೇರಿದ ರಾಜರಾಜೇಶ್ವರಿ ನಗರದಲ್ಲಿ ಇರುವ ಎಸ್ ಎಸ್ ಆಸ್ಪತ್ರೆ ಸಹ ಒತ್ತುವರಿಯಾದ ಜಾಗದಲ್ಲಿ ನಿರ್ಮಾಣವಾಗಿದೆ ಎಂಬ ಸಂಗತಿ ಸರ್ವೆಯಲ್ಲಿ ಬಹಿರಂಗವಾಗಿದೆ.

ಬಿಡಿಎ ನೀಡಿದ್ದು ಅಕ್ರಮವೇ?
30 ವರ್ಷಗಳ ಹಿಂದೆ ಆಸ್ಪತ್ರೆಗೆಂದು 2.34 ಎಕರೆ ಜಾಗವನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ (ಬಿಡಿಎ)ಪಡೆದುಕೊಂಡಿದ್ದೆವು. ಅದು ಈಗ ಹೇಗೆ ಅಕ್ರಮವಾಗುತ್ತದೆ ಎಂದು ಶಿವಶಂಕರಪ್ಪ ಪ್ರಶ್ನೆ ಮಾಡುತ್ತಾರೆ.
-
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ












Click it and Unblock the Notifications