BBMP Demolition drive: ಆರು ಕಡೆ ರಾಜಕಾಲುವೆ ಒತ್ತುವರಿ ತೆರವು
ಬೆಂಗಳೂರು, ಡಿಸೆಂಬರ್ 22: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಮತ್ತೆ ಮುಂದುವರಿದಿದೆ. ಅನೇಕ ಕಡೆಗಳಲ್ಲಿ ಬುಲ್ಡೋಜರ್ಗಳು ಸದ್ದು ಮಾಡಿವೆ. ಒಟ್ಟು ಆರು ಕಡೆ ಒತ್ತುವರಿ ತೆರವು ಮಾಡಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.
ಬಿಬಿಎಂಪಿ ವ್ಯಾಪ್ತಿಯ ಮಹದೇವಪುರ ವಲಯದ ಮುನ್ನೇನಕೊಳಲು, ಶಾಂತಿನಿಕೇತನ ಲೇಔಟ್ ಹಾಗೂ ಎಬಿಕೆ ಹಳ್ಳಿಯಲ್ಲಿ ಆರು ಒತ್ತುವರಿಗಳ ತೆರವು ಕಾರ್ಯಾಚರಣೆ ಗುರುವರ ನಡೆಯಿತು. ಮುನ್ನೇನಕೊಳಲು ಹಾಗೂ ಶಾಂತಿನಿಕೇತನ ಲೇಔಟ್ ನಲ್ಲಿ 30x40 ಅಡಿ ಸ್ಥಳದಲ್ಲಿ ರಾಜಕಾಲುವೆಯ ಮೇಲೆ ನಿರ್ಮಿಸಿದ್ದ ಎರಡು ಕಟ್ಟಡಗಳನ್ನು ನೆಲಸಮಗೊಳಿಸಲಾಗಿದೆ. ಇದೇ ಸ್ಥಳದಲ್ಲಿ ರಾಜಕಾಲುವೆಯ ಮೇಲೆ ನಿರ್ಮಿಸಿದ್ದ ಎರಡು ಶೆಡ್ಗಳನ್ನು ಸಹ ಅಧಿಕಾರಿಗಳು ಖುದ್ದು ಮುಂದೆ ನಿಂತು ತೆರವು ಮಾಡಿದ್ದಾರೆ.
ಅಮಾನಿ ಬೆಳ್ಳಂದೂರು ಖಾನೆ (ಎಬಿಕೆ) ಹಳ್ಳಿ ವ್ಯಾಪ್ತಿಯಲ್ಲಿ ರಾಜಕಾಲುವೆ ಮಾರ್ಗದಲ್ಲಿ ನಿರ್ಮಿಸಿದ್ದ ಒಂದು ಶೆಡ್ ಹಾಗೂ ಸುಮಾರು 60 ಮೀಟರ್ ಉದ್ದದ ಕಾಂಪೌಂಡ್ ಗೋಡೆಯನ್ನು ನೆಲಸಮಗೊಳಿಸಲಾಗಿದೆ. ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಬೆಂಗಳೂರು ನಗರ ಜಿಲ್ಲೆಯ ತಹಶೀಲ್ದಾರರು ಒತ್ತುವರಿದಾರರಿಗೆ ನೋಟಿಸ್ ಜಾರಿ ಮಾಡಿ ಈಗಾಗಲೇ ಆದೇಶ ಹೊರಡಿಸಲಾಗಿತ್ತು.

ನೋಟಿ ಜಾರಿ ಮಾಡಿದ ಕೆಲವು ದಿನಗಳ ಬಳಿಕ ಗುರುತಿಸಲಾಗಿದ್ದ ಬಾಕಿ ಒತ್ತುವರಿಗಳ ತೆರವು ಕಾರ್ಯಾಚರಣೆ ಮುಂದುವರಿಸಲಾಗಿದೆ. ಈ ಸಂಬಂಧ ಇತ್ತೀಚೆಗಷ್ಟೇ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು. ರಾಜಕಾಲುವೆ ಸೇರಿದಂತೆ ಬೃಹತ್ ನೀರುಗಾಲುವೆಗಳನ್ನು ತೆರವು ತ್ವರಿತಗತಿಯಲ್ಲಿ ತೆರವುಗೊಳಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ರಾಜಕಾಲುವೆ ಒತ್ತುವರಿ ತೆರವು ಮಾಹಿತಿ ಹೀಗಿದೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಹದೇವಪುರ ವ್ಯಾಪ್ತಿಯಲ್ಲಿ 2015-16ರಿಂದ ಇದುವರೆಗೆ ಒಟ್ಟಾರೆ 1,174 ರಾಜಕಾಲುವೆ ಒತ್ತುವರಿಗಳನ್ನು ಗುರುತಿಸಲಾಗಿದೆ. ಈ ಪೈಕಿ 1,032 ಕಡೆಗಳಲ್ಲಿ ರಾಜಕಾಲುವೆ ಒತ್ತುವರಿಗಳನ್ನು ಈಗಾಗಲೇ ತೆರವುಗೊಳಿಸಲಾಗಿದೆ. 142 ಒತ್ತುವರಿಗಳನ್ನು ತೆರವುಗೊಳಿಸಬೇಕಾಗಿದೆ. ಈ ಪೈಕಿ 11 ಪ್ರಕರಣಗಳು ನ್ಯಾಯಾಲಯಕ್ಕೆ ಸಂಬಂಧಿಸಿದ್ದಾಗಿದೆ. ಇನ್ನು 131 ಒತ್ತುವರಿಗಳ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸರ್ವೇ ಕಾರ್ಯವನ್ನು ನಡೆಸುತ್ತಿದೆ. ರಾಜಕಾಲುಚವೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಬಿಬಿಎಂಪಿ ಹೇಳಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications