Dengue: ಬೆಂಗಳೂರಿಗರೇ ಎಚ್ಚರ, ಒಂದೇ ತಿಂಗಳಲ್ಲಿ 2,374 ಡೆಂಗ್ಯೂ ಪ್ರಕರಣ ವರದಿ: ಬಿಬಿಎಂಪಿ
ಬೆಂಗಳೂರು, ಸೆಪ್ಟಂಬರ್ 07: ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಕಾಯಿಲೆಗೆ ಒಳಗಾಗುತ್ತಿರುವವರ ಸಂಖ್ಯೆ ಅನಿರೀಕ್ಷಿತ ಮಟ್ಟದಲ್ಲಿ ಏರಿಕೆ ಆಗಿರುವುದು ಜನರಲ್ಲಿ ಆತಂಕ ಉಂಟು ಮಾಡಿದೆ. ಬಿಬಿಎಂಪಿ ಆರೋಗ್ಯ ವರದಿಯಲ್ಲಿ ಆಗಸ್ಟ್ ಒಂದೇ ತಿಂಗಳಲ್ಲಿ ಬರೊಬ್ಬರಿ 2,374 ಡೆಂಗ್ಯೂ ಪ್ರಕರಣಗಳು ವರದಿ ಆಗಿದೆ. ಈ ಸಂಬಂಧ ಬಿಬಿಎಂಪಿ ಹೈ ಅಲರ್ಟ್ ಆಗಿದೆ.
ವಾರದಿಂದ ವಾರಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆ ಆಗುತ್ತಾರೆ ಬಂದಿದೆ. ಈ ಸಂಬಂಧ ನಿಮ್ಮ ಮನೆಗಳ ಸುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಮಳೆಗಾಲ ಹಿನ್ನೆಲೆಯಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಿ, ಏಕೆಂದರೆ ಡೆಂಗ್ಯೂ ಹರಡುವ ಸೊಳ್ಳೆಗಳು ಇಂತಹ ನಿಂತ ನೀರಿನಲ್ಲಿ ಉತ್ಪತ್ತಿ ಆಗುತ್ತವೆ. ಆದ್ದರಿಂದ ಸದಾ ಜಾಗೃತರಾಗಿರುವಂತೆ ಸಾರ್ವಜನಿಕರಿಗೆ ತಿಳಿಸಲಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಜ್ವರ, ಆಯಾಸದಂತೆ ಲಕ್ಷಣಗಳಿಂದ ಸಾಕಷ್ಟು ಮಂದಿ ಆಸ್ಪತ್ರೆಗೆ ಬರುತ್ತಿದ್ದಾರೆ. ತಪಾಸಣೆ ಬಳಿಕ ಅವರಿಗೆ ಡೆಂಗ್ಯೂ ಬಂದಿರುವುದು ಗೊತ್ತಾಗಿದೆ. ಇಂತಹ ಲಕ್ಷಣಗಳು ಬಂದರೆ ಕೂಡಲೇ ಆಸ್ಪತ್ರೆಗೆ ಭೇಟಿ ನೀಡುವಂತೆ ಬಿಬಿಎಂಪಿ ಕೋರಿದೆ.
ಕರ್ನಾಟಕದ ವಿವಿಧೆಡೆ ಸಹ ಈ ಡೆಂಗ್ಯೂ ಪ್ರಕರಣ ಹೆಚ್ಚಾಗುತ್ತಿರುವುದು ಕಂಡು ಬಂದಿದೆ. ಇನ್ನೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಜೂನ್ ತಿಂಗಳಲ್ಲಿ ಕೇವಲ 689 ರಷ್ಟು ಡೆಂಗ್ಯೂ ಪ್ರಕರಣಗಳು ವರದಿ ಆಗಿದ್ದವು. ನಂತರದ ಜುಲೈ ತಿಂಗಳಲ್ಲಿ ಎರಡು ಪಟ್ಟು ಪ್ರಕರಣಗಳು ಹೆಚ್ಚಾಗಿದ್ದು, ಒಟ್ಟು 1,649 ಮಂದಿಗೆ ಡೆಂಗ್ಯೂ ಕಾಯಿಲೆ ವರದಿ ಆಗಿವೆ.
ಸೆಪ್ಟಂಬರ್ನಲ್ಲಿ 181 ಪ್ರಕರಣ ವರದಿ
ಇನ್ನೂ ಕಳೆದ ಆಗಸ್ಟ್ ತಿಂಗಳಲ್ಲಿ ಮತ್ತೆ ಅತ್ಯಧಿಕ ಪ್ರಮಾಣದಲ್ಲಿ ಡೆಂಗ್ಯೂ ಪ್ರಕರಣ (2,374 ಕೇಸ್) ಏರಿಕೆ ಆಗಿದೆ. ಇನ್ನೂ ಸೆಪ್ಟಂಬರ್ ಮೊದಲ ವಾರದ (ಸೆ. 6ರವರೆಗೆ) 181 ಪ್ರಕರಣಗಳು ಈಗಾಗಲೇ ವರದಿ ಆಗಿವೆ. ಇದರಲ್ಲಿ ಬಿಬಿಎಂಪಿಯ ದಕ್ಷಿಣ, ಪಶ್ಚಿಮ ಮತ್ತು ಮಹಾದೇವಪುರ ವಲಯದಲ್ಲಿ ಅತ್ಯಧಿಕ ಕೇಸುಗಳು ಪತ್ತೆಯಾಗಿವೆ.

ಈ ಸಂಬಂಧ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ನಗರಾದ್ಯಂತ ಜಾಗೃತಿ ಕಾರ್ಯಕ್ರಮ ಆಯೋಜಿಸಿದೆ. ಕಾಯಲೆ, ಸ್ವಚ್ಚತೆ ಮತ್ತು ಲಕ್ಷಣಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುತ್ತಿದೆ.
ಡೆಂಗ್ಯೂ: ಬಿಬಿಎಂಪಿ ಕೈಗೊಂಡ ಕ್ರಮಗಳೇನು?
ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ಕಾಯಿಲೆಗೆ ಹೆಚ್ಚೆಚ್ಚು ಜನ ಒಳಗಾಗುತ್ತಿರುವದರಿಂದ ಪ್ರಕರಣಗಳ ನಿಯಂತ್ರಿಸುವ ಸಲುವಾಗಿ ಎಲ್ಲ 198 ವಾರ್ಡ್ ಗಳಲ್ಲಿಯೂ ಸೊಳ್ಳೆ ನಿಯಂತ್ರಣ, ಜಾಗೃತಿ ಮೂಡಿಸುವ ಹಾಗೂ ಔಷಧಿ ಸಿಂಪಡಣೆ ಕಾರ್ಯಕ್ರಮಗಳನ್ನು ಹೆಚ್ಚಿಸಲಾಗಿದೆ. ಇದು ಮುಂದಿನ ಆದೇಶವರೆಗೆ ಮುಂದುವರಿಯಲಿದೆ. ಶಾಲಾ ಕಾಲೇಜುಗಳಿಂದ ಡೆಂಗ್ಯೂ ಬಗ್ಗೆ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.
ನೀರು ನಿಂತ ಸ್ಥಳಗಳಲ್ಲಿ ಮತ್ತು ಮೋರಿಗಳಿಗೆ ಔಷಧಿ ಸಿಂಪಡಿಲಾಗುತ್ತಿದೆ. ತ್ಯಾಜ್ಯ ಸಂಗ್ರಹ ವಾಹನಗಳ ಮೂಲಕ ಧ್ವನಿವರ್ಧಕ ಬಳಸಿ ಕಾಯಿಲೆ ಬಗ್ಗೆ ಅರಿವು ಮೂಡಿಸಲಾಗುತ್ತಿದೆ.
ಕೊಳಚೆ ಹಾಗೂ ಇನ್ನೀತರೇ ಪ್ರದೇಶಗಳಲ್ಲಿ ಆರೋಗ್ಯಾಧಿಕಾರಿಗಳು, ಆಶಾ ಕಾರ್ಯಕರ್ತೆಯರು, ನಮ್ಮ ಕ್ಲಿನಿಕ್ ವೈದ್ಯರ ತಂಡ, ನಗರ ಪ್ರಾಥಮಿಕ ಆರೋಗ್ಯಾಧಿಕಾರಿಗಳು ಡೆಂಗ್ಯೂ ಪ್ರಕರಣಗಳ ಪತ್ತೆ ಸಮೀಕ್ಷೆ ನಡೆಸುತ್ತಿದ್ದಾರೆ ಎಂದು ಸಾರ್ವಜನಿಕ ಆರೋಗ್ಯ ವಿಭಾಗದ ಮುಖ್ಯ ಆರೋಗ್ಯಾಧಿಕಾರಿ ಡಾ. ಬಾಲಸುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Summer Super Drink: ಪ್ರತಿದಿನ ಎರಡು ಗ್ಲಾಸ್ ಕಬ್ಬಿನ ರಸ: ಬೇಸಿಗೆಯ ಸೂಪರ್ ಡ್ರಿಂಕ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Harish Rana: ಭಾರತದ ಮೊದಲ ದಯಾಮರಣದ ಹಕ್ಕುದಾರ ಹರೀಶ್ ರಾಣಾ ನಿಧನ, ಕುಟುಂಬಸ್ಥರಿಂದ ಅಂಗಾಂಗ ದಾನ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ!












Click it and Unblock the Notifications