ಒಂದೇ ವಾರದಲ್ಲಿ 150 ಪ್ರಕರಣ: ರಾಜ್ಯದಲ್ಲಿ ಮಿತಿಮೀರಿದ ಡೆಂಗ್ಯೂ
ಬೆಂಗಳೂರು, ಜನವರಿ 11: ಹವಾಮಾನ ವೈಪರೀತ್ಯದಿಂದ ರಾಜ್ಯದಲ್ಲಿ ಜ್ವರ, ಶೀತ, ಕೆಮ್ಮುವಿನಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜೊತೆಗೆ ಕರ್ನಾಟಕದಲ್ಲಿ ಡೆಂಗ್ಯೂ ಪ್ರಕರಣ ಕೂಡ ಮಿತಿಮೀರಿ ಹೆಚ್ಚಾಗುತ್ತಿದೆ. ಕಳೆದ ಏಳು ದಿನಗಳಲ್ಲಿ ಅಂದರೆ ಒಂದೇ ವಾರದಲ್ಲಿ 150 ಡೆಂಗ್ಯೂ ಪ್ರಕರಣಗಳು ವರದಿಯಾಗಿದೆ.
ಕಳೆದ ವರ್ಷದ ವರದಿಯನ್ನು ಗಮನಿಸಿದರೆ ಈ ವರ್ಷ ಆರಂಭದಲ್ಲೇ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಕಳೆದ ವರ್ಷ 2023ರಲ್ಲಿ ಇಡೀ ವರ್ಷದಲ್ಲಿ 16,500ಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ದೃಢಪಟ್ಟಿದ್ದು, 9 ಮಂದಿ ಮೃತಪಟ್ಟಿದ್ದರು.

ಆದರೆ ಈ ವರ್ಷ 2024ರ ಆರಂಭದಲ್ಲೇ 150 ಪ್ರಕರಣಗಳು ದೃಢಪಟ್ಟಿದ್ದು, ಆತಂಕ ಹೆಚ್ಚಾಗಿದೆ. ಕಳೆದ ಏಳು ದಿನಗಳಲ್ಲಿ 2,352 ಶಂಕಿತರಲ್ಲಿ 1,371 ಮಂದಿಯ ರಕ್ತದ ಮಾದರಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ 150 ಜನರಿಗೆ ಡೆಂಗ್ಯೂ ಇರುವುದು ದೃಢಪಟ್ಟಿವೆ. ಕಳೆದ ವರ್ಷ ರಾಜ್ಯದಲ್ಲಿ 16,500ಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳ ಪೈಕಿ 9,620 ಮಂದಿ ಚಳಿ ಜ್ವರದಿಂದ ಬಳಲಿದ್ದರು. ಅವರಲ್ಲಿ ಒಂಬತ್ತು ಮಂದಿ ಮೃತಪಟ್ಟಿರುವುದು ದೃಢಪಟ್ಟಿತ್ತು.
ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಮಳೆ, ಮೋಡ ಕವಿದ ವಾತಾವರಣವಿದ್ದು, ಚಳಿ ಕೂಡ ಹೆಚ್ಚಾಗಿದ್ದು, ಜನರಲ್ಲಿ ಜ್ವರ, ಶೀತ ಹಾಗೂ ಗಂಟಲು ನೋವು ಕಾಣಿಸಿಕೊಳ್ಳುತ್ತಿದೆ. ಇನ್ನು ಕೊರೊನಾ ಸೋಂಕಿತರ ಸಂಖ್ಯೆ ಕೂಡ ಹೆಚ್ಚಾಗಿದ್ದು, ಸದ್ಯ ರಾಜ್ಯದಲ್ಲಿ 470 ಸಕ್ರಿಯ ಪ್ರಕರಣಗಳಿವೆ. ಇನ್ನು ಕಳೆದ ಏಳು ದಿನಗಳಲ್ಲಿ ಕರ್ನಾಟಕದಲ್ಲಿ 28 ಚಿಕನ್ಗುನ್ಯ ಪ್ರಕರಣಗಳು ವರದಿಯಾಗಿವೆ.

ಡೆಂಗ್ಯೂ ರೋಗದ ಲಕ್ಷಣವೇನು?
ಈಡಿಸ್ ಈಜಿಪ್ಟಿ ಸೊಳ್ಳೆಗಳಿಂದ ಡೆಂಗ್ಯೂ ಹರಡುತ್ತದೆ. ಇದನ್ನು ಮೂಳೆಮುರಕ ಅಥವಾ ಬ್ರೇಕ್ಬೋನ್ ಜ್ವರವೆಂದು ಕೂಡ ಕರೆಯಲಾಗುತ್ತದೆ. ಈಡಿಸ್ ಈಜಿಪ್ಟ್ಟೆ ಎಂಬ ಸೊಳ್ಳೆ ಕಚ್ಚಿದ ಮೂರರಿಂದ ಹದಿನಾಲ್ಕು ದಿನಗಳ ನಂತರ ವ್ಯಕ್ತಿಯಲ್ಲಿ ರೋಗ ಉಲ್ಭಣವಾಗಿ ರೋಗದ ಲಕ್ಷಣಗಳು ಹೊರಗೆ ಕಾಣಿಸಿಕೊಳ್ಳುತ್ತದೆ.
ಸೊಳ್ಳೆಯು ಸೋಂಕಿಗೆ ತುತ್ತಾಗದ ವ್ಯಕ್ತಿಯನ್ನು ಕಚ್ಚಿದಲ್ಲಿ, ಆ ಸೊಳ್ಳೆಯ ಜೊಲ್ಲಿನ ಮೂಲಕ ವೈರಸ್ ವ್ಯಕ್ತಿಯ ದೇಹವನ್ನು ಪ್ರವೇಶಿಸಿ ದೇಹದಲ್ಲಿನ ಬಿಳಿ ರಕ್ತಕಣದೊಂದಿಗೆ ಸೇರಿಕೊಂಡು, ಬಿಳಿ ರಕ್ತ ಕಣಗಳಲ್ಲಿ ದ್ವಿಗುಣಗೊಳ್ಳುತ್ತಾ ಸಾಗುತ್ತದೆ. ಈ ದ್ವಿಗುಣಗೊಳ್ಳುವಿಕೆಯು ಡೆಂಗ್ಯೂ ರೋಗದ ರೋಗದ ಪ್ರಮುಖ ಲಕ್ಷಣವಾಗಿರುತ್ತದೆ.
ಡೆಂಗ್ಯೂ ಕಾಣಿಸಿಕೊಳ್ಳುತ್ತಿದ್ದಂತೆ ಕೀಲು ನೋವು, ಸ್ನಾಯು ನೋವು, ಕೆಳಹೊಟ್ಟೆಯಲ್ಲಿ ನೋವು, ವಾಂತಿ ಅಥವಾ ಮಲದಲ್ಲಿ ರಕ್ತ, ತ್ವಚೆಯ ಮೇಲೆ ಸಣ್ಣ ಕೆಂಪು ಚುಕ್ಕೆಗಳು ಕಾಣಿಸಿಕೊಳ್ಳುತ್ತದೆ. ಜೊತೆಗೆ ಪದೇ ಪದೇ ಜ್ವರ ಮರುಕಳಿಸುವುದು, ಜ್ವರದ ತಾಪಮಾನವು 104 ಡಿಗ್ರಿವರೆಗೆ ಏರುವುದು, ಮೈ-ಕೈ ನೋವು ಮತ್ತು ಸ್ನಾಯುಗಳ ಸೆಳೆತ ಎಲ್ಲವೂ ಕಾಣಿಸಿಕೊಳ್ಳುತ್ತದೆ. ಹೀಗಾಗಿ ಜ್ವರ ಕಾಣಿಸಿಕೊಳ್ಳುತ್ತಿದ್ದಂತೆ ಸಮೀಪದ ಆರೋಗ್ಯ ಕೇಂದ್ರಕ್ಕೆ ತೆರಳಿ ತಪಾಸಣೆ ನಡೆಸುವುದು ಉತ್ತಮ. ರೋಗ ಉಲ್ಭಣಗೊಳ್ಳುವ ಮೊದಲು ಚಿಕಿತ್ಸೆ ಪಡೆಯುವುದರಿಂದ ಪ್ರಾಣಾಪಾಯ ತಪ್ಪಿಸಬಹುದು.
-
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ












Click it and Unblock the Notifications