Dengue Cases: ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹಂಚಿಕೊಂಡ ಅಂಕಿಅಂಶಗಳ ಪ್ರಕಾರ ಈ ವರ್ಷ ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. 4,323 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದೆ.
ಜೂನ್ನಲ್ಲಿ 689 ಪ್ರಕರಣಗಳಿದ್ದರೆ, ಆಗಸ್ಟ್ನಲ್ಲಿ ಪ್ರಕರಣಗಳ ಸಂಖ್ಯೆ 1,589 ಕ್ಕೆ ಏರಿದೆ. ಜುಲೈ ತಿಂಗಳಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 1,629 ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ನಗರ ಪಾಲಿಕೆಯಿಂದ ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 8 ರವರೆಗೆ 416 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ.
2019 ರಲ್ಲಿ 44,863 ಡೆಂಗ್ಯೂ ಪ್ರಕರಣಗಳಿದ್ದರೆ, 2020 ರಲ್ಲಿ 6,679 ಕ್ಕೆ ಇಳಿದಿದೆ ಎಂದು ಬಿಬಿಎಂಪಿ ಹಂಚಿಕೊಂಡ ಅಂಕಿಅಂಶಗಳು ತೋರಿಸುತ್ತವೆ. ಅಂತೆಯೇ, 2021 ರಲ್ಲಿ 6,166 ಪ್ರಕರಣಗಳು ಮತ್ತು 2022 ರಲ್ಲಿ 5,589 ಪ್ರಕರಣಗಳು ವರದಿಯಾಗಿವೆ.

ಜಾಗೃತಿ ವಹಿಸಲು ಮನವಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನವರಿಯಿಂದ ಸೆಪ್ಟೆಂಬರ್ 12ರವರೆಗೆ 198 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಆದರೆ, ಜ್ವರದಿಂದ ಸಾವನ್ನಪ್ಪಿರುವ ಯಾವುದೇ ಪ್ರಕರಣವನ್ನು ಆರೋಗ್ಯಾಧಿಕಾರಿಗಳು ಖಚಿತಪಡಿಸಿಲ್ಲ.
ಕಳೆದ ವಾರ, ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ರೋಗ ಕಣ್ಗಾವಲು ಡ್ಯಾಶ್ಬೋರ್ಡ್ ಮತ್ತು ಮೊಬೈಲ್ ಅಪ್ಲಿಕೇಶನ್ PRISM-H (ಪ್ಲಾಟ್ಫಾರ್ಮ್ ಫಾರ್ ರಿಸರ್ಚ್, ಇಂಟಿಗ್ರೇಟೆಡ್ ಸರ್ವೆಲೆನ್ಸ್ ಮತ್ತು ಮ್ಯಾನೇಜ್ಮೆಂಟ್ ಆಫ್ ಹೆಲ್ತ್) ಅನ್ನು ಭಾರತೀಯ ವಿಜ್ಞಾನ ಸಂಸ್ಥೆಯ ಎಐ ಮತ್ತು ರೊಬೊಟಿಕ್ಸ್ ಟೆಕ್ನಾಲಜಿ ಪಾರ್ಕ್ (ARTPARK) ಕಚೇರಿಯಲ್ಲಿ ಅನಾವರಣಗೊಳಿಸಿದರು. ಇದು ಡೆಂಗ್ಯೂ ಪ್ರಕರಣಗಳನ್ನು ನಿರ್ವಹಿಸುವಲ್ಲಿ ಸಹಾಯ ಮಾಡುತ್ತದೆ.
ಮಳೆಗಾಲದಲ್ಲಿ ನೀರು ನಿಂತು ಸೊಳ್ಳೆಗಳ ಉತ್ಪತ್ತಿ ಕೇಂದ್ರವಾಗುತ್ತಿರುವುದರಿಂದ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಗುಂಡೂರಾವ್ ಹೇಳಿದ್ದರು. ಜಾಗರೂಕರಾಗಿರಲು ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ತಿಂಗಳ ಆರಂಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದಲ್ಲಿ ಸೊಳ್ಳೆಗಳ ಉತ್ಪತ್ತಿ ಕೇಂದ್ರವಾಗಬಹುದಾದ ನೀರಿನ ಅಡಚಣೆಯಾಗದಂತೆ ನೋಡಿಕೊಳ್ಳಲು ಬಿಬಿಎಂಪಿ ಮತ್ತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಗೆ ಸೂಚನೆ ನೀಡಿದ್ದಾರೆ.
ನಾಗರೀಕರು ಕೂಡ ಡೆಂಗ್ಯೂ ಬಗ್ಗೆ ಎಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ. ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಲು ಸೂಚನೆ ನೀಡಲಾಗಿದ್ದು, ಸೊಳ್ಳೆಗಳ ಕಡಿತವನ್ನು ತಪ್ಪಿಸಲು ಸುರಕ್ಷಿತ ಕ್ರಮ ವಹಿಸಲು ಕೋರಲಾಗಿದೆ. ಸೊಳ್ಳೆ ಬತ್ತಿ, ಸೊಳ್ಳೆ ಪರದೆ ಬಳಸುವ ಮೂಲಕ ರಾತ್ರಿ ವೇಳೆ ರಕ್ಷಣೆ ಪಡೆದುಕೊಳ್ಳುವುದು, ಹಗಲು ಹೊತ್ತಿನಲ್ಲಿ ಸೊಳ್ಳೆ ಕಡಿತದ ಬಗ್ಗೆ ಹೆಚ್ಚಿನ ಜಾಗೃತ ವಹಿಸಲು ಮನವಿ ಮಾಡಿದ್ದಾರೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ









Click it and Unblock the Notifications