ಬೆಂಗಳೂರಲ್ಲಿ 'ಡೆಂಗ್ಯೂ' ನಿಯಂತ್ರಣಕ್ಕೆ ಸರ್ಕಾರದ ಕ್ರಮಗಳು ಇವು: ದಿನೇಶ್ ಗುಂಡೂರಾವ್
ಬೆಂಗಳೂರು, ಸೆಪ್ಟಂಬ್ 07: ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳ ಹೆಚ್ಚಾಗಿದ್ದು, ಅದರ ಮೇಲ್ವಿಚಾರಣೆಗಾಗಿ 'ಡೆಂಗ್ಯೂ ಮೇಲ್ವಿಚಾರಣ ತಂತ್ರಾಂಶ' ವನ್ನು ಅನಾವರಣಗೊಳಿಸುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳನ್ನು ತಡೆಯುವುದು ಸೇರಿದಂತೆ ಹಲವು ಆರೋಗ್ಯ ವಿಚಾರಗಳ ಬಿಬಿಎಂಪಿಯಲ್ಲಿ ಗುರುವಾರ ಅವರು ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ನಗರದಲ್ಲಿ ಕಳೆದ 2 ತಿಂಗಳಿಂದ ಹೆಚ್ಚು ಡೆಂಗ್ಯೂ ಪ್ರಕರಣಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಕಡೆ ಔಷಧಿ ಸಿಂಪಡಣೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಬೆಂಗಳೂರಿನಲ್ಲಿ ಜುಲೈ ನಲ್ಲಿ 1649, ಆಗಸ್ಟ್ ನಲ್ಲಿ 1589, ಸೆಪ್ಟಂಬರ್ ನಲ್ಲಿ 416 ಪ್ರಕರಣಗಳು ವರದಿ ಆಗಿವೆ. ಮಳೆನೀರು ನಿಂತ ಕಾರಣ ಸೊಳ್ಳೆಗಳ ಲಾರ್ವಾ ಉತ್ಪತ್ತಿ ಆಗುವುದರಿಂದ ಹೆಚ್ಚು ಪ್ರಕರಣಗಳು ಕಂಡು ಬರುತ್ತಿವೆ. ಈ ಸಂಬಂಧ ಎಲ್ಲಾ ಕಡೆ ಔಷಧಿ ಸಿಂಪಡಣೆ ಮಾಡಲಾಗುತ್ತಿದೆ. ಈ ಸಂಬಂಧ ವೈಧ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಪಾಲಿಕೆಯ ವ್ಯಾಪ್ತಿಯಲ್ಲಿ 6 ಹೈಟೆಕ್ ಲ್ಯಾಬ್ ಗಳಿವೆ. ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ನಮ್ಮ ಕ್ಲಿನಿಕ್ ಗಳಲ್ಲಿ ಸಂಗ್ರಹ ಮಾಡುವ ಬ್ಲಡ್ ಸ್ಯಾಂಪಲ್ ಗಳನ್ನು ಲ್ಯಾಬ್ ಗಳಿಗೆ ಕಳುಹಿಸಲು ರವಾನೆ (ಹಬ್ ಅಂಡ್ ಸ್ಪೋಕ್ ಮಾಡಲ್) ಹಾಗೂ ಇನ್ನಿತರೆ ಸೌಲಭ್ಯಗಳ ಅವಶ್ಯಕತೆ ಇದೆ. ಅದಕ್ಕೆ ಅನುದಾನ ಬೇಕಾಗಿದ್ದು, ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪಾಲಿಕೆ ಸಹಯೋಗದೊಂದಿಗೆ NHM ಅನುದಾನದಿಂದ ಒದಗಿಸಲಾಗುವುದು ಎಂದು ಹೇಳಿದರು.
ಬಿಬಿಎಂಪಿ ಪ್ರತ್ಯೇಕ ಜಿಲ್ಲೆಯಾಗಿ ಪರಿಗಣನೆ?
ಬಿಬಿಎಂಪಿ ವ್ಯಾಪ್ತಿಯಲ್ಲಿ ಆರೋಗ್ಯ ನಿರೀಕ್ಷಣಾ ಅಧಿಕಾರಿಗಳು, ಕಿರಿಯ ಆರೋಗ್ಯ ಮಹಿಳಾ ಸಹಾಯಕಿಯರ ಸಂಖ್ಯೆಯನ್ನು ಹೆಚ್ಚಿಸುವ ಜೊತೆಗೆ ಅವರ ವೇತನವನ್ನು ಸಹ ಕಾರ್ಮಿಕ ಇಲಾಖೆ ಕಾಯ್ದೆ ಕನಿಷ್ಟ ವೇತನ ಹೆಚ್ಚಳ ಮಾಡಬೇಕಿದೆ.
ನಗರದಲ್ಲಿ ಎಲ್ಲಾ ಆರೋಗ್ಯ ಸೇವೆಗಳನ್ನು ಸಮನಾಂತರವಾಗಿ ತರುವ ಉದ್ದೇಶದಿಂದ ಬಿಬಿಎಂಪಿಯನ್ನು ಪ್ರತ್ಯೇಕ ಜಿಲ್ಲೆ ಎಂದು ಪರಿಗಣಿಸಲು ನಿರ್ಧಾರ ಮಾಡಲಾಗಿದೆ, ಈ ಬಗ್ಗೆ ಉನ್ನತ ಮಟ್ಟದಲ್ಲಿ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಡೆಂಗ್ಯೂ ಮುನ್ಸೂಚನಾ ತಂತ್ರಾಂಶ ಲೋಕಾರ್ಪಣೆ
ಡೆಂಗ್ಯೂ ಪ್ರಕರಣಗಳನ್ನು ಒಂದು ತಿಂಗಳ ಮುಂಚಿತವಾಗಿಯೇ ತಿಳಿಯುವ ಉದ್ದೇಶದಿಂದ ಭಾರತೀಯ ವಿಜ್ಞಾನ ಸಂಸ್ಥೆಯಿಂದ ಒಂದು ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ. ಇದರಿಂದ ಮುಂಚಿತವಾಗಿಯೇ ಮಾಹಿತಿ ಲಭ್ಯವಾಗಲಿದ್ದು, ಕೂಡಲೆ ಸೊಳ್ಳೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಂಡು ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಅನುಕೂಲವಾಗಲಿದೆ ಎಂದು ಅವರು ವಿವರಿಸಿದರು.
ನಮ್ಮ ಕ್ಲಿನಿಕ್ ಸೇವೆ
ಬಿಬಿಎಂಪಿ ವ್ಯಾಪ್ತಿಯಲ್ಲಿ 50 ನಮ್ಮ ಕ್ಲಿನಿಕ್ ಗಳು ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಕಾರ್ಯ ನಿರ್ವಹಿಸಲು ಸೂಚಿಸಲಾಗಿದೆ. ಈ ಸಮಯದಲ್ಲಿ ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಲ್ಯಾಬ್ ಟೆಕ್ನಿಷಿಯನ್ ಗಳು ಹಾಗೂ ಮಧ್ಯಾಹ್ನ 12 ರಿಂದ ರಾತ್ರಿ 8 ಗಂಟೆಯವರೆಗೆ ವೈದ್ಯರು, ನರ್ಸ್ಗಳಿರವ ವ್ಯವಸ್ಥೆಯನ್ನು ಮಾಡಲಾಗುತ್ತಿದೆ ಎಂದು ಹೇಳಿದರು.
ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾದ ಡಿ. ರಂದೀಪ್, ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಡಾ. ತ್ರಿಲೋಕ್ ಚಂದ್ರ, ಎನ್.ಹೆಚ್.ಎಂ ನ ಅಭಿಯಾನ ವೀಕ್ಷಕರಾದ ನವೀನ್ ಭಟ್, ಮುಖ್ಯ ಆರೋಗ್ಯಾಧಿಕಾರಿಗಳು ಮತ್ತಿತರರು ಪಾಲ್ಗೊಂಡಿದ್ದರು.
-
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ












Click it and Unblock the Notifications