ಡೆಂಗ್ಯೂ, ವೈರಲ್ ಜ್ವರವೇ? ರಕ್ತ ಬೇಕೆ?
ಬೆಂಗಳೂರು, ಸೆ. 26: ಡೆಂಗ್ಯೂ, ವೈರಲ್ ಫೀವರ್ ಗಳಿಂದ ಬಳಲುತ್ತಿರುವ ರೋಗಿಗಳಿಗೆ ರಕ್ತದ ಅಗತ್ಯ ಹೆಚ್ಚಾಗಿರುತ್ತದೆ. ಸಮಯಕ್ಕೆ ಸರಿಯಾದ ರಕ್ತ ಒದಗಿಸಲು ಸಾಧ್ಯವಾಗುವುದಿಲ್ಲ ಎಂಬ ಕೊರಗನ್ನು ನೀಗಿಸಲು ಮೊಬೈಲ್ ಅಪ್ಲಿಕೇಷನ್ ಇಲ್ಲಿದೆ.
ಅನೇಕ ಬ್ಲಡ್ ಬ್ಯಾಂಕ್ ಗಳಿದ್ದೂ, ಸ್ನೇಹಿತ ಹಾಗೂ ಸಂಬಂಧಿಕರ ನೆಟ್ವರ್ಕ್ ಇದ್ದರೂ ರಕ್ತವನ್ನು ಹೊಂದಿಸಲಾಗದ ಘಟನೆಗಳಿವೆ. ಇಂಥ ಪರಿಸ್ಥಿತಿಗಳಿಂದ ಹೊರಬರಲು ಅವಿರತ ಸಂಸ್ಥೆ ಸರಳವಾದ ಸ್ಮಾರ್ಟ್ ಫೋನ್ ಅಪ್ಲಿಕೇಷನ್ ಹೊರ ತಂದಿದ್ದು, ಜನಪ್ರಿಯತೆ ಗಳಿಸುತ್ತಿದೆ.

ನಮ್ಮ ಕುಟುಂಬದವರೊ, ಸಂಬಂಧಿಕರೊ, ಸ್ನೇಹಿತರೊ ಅಥವಾ ನೆರೆಹೊರೆಯವರೊ ಅನಾರೋಗ್ಯ ಕಾರಣದಿಂದ ಬಳಲುತಿದ್ದಾಗ ಅವಶ್ಯಕ ರಕ್ತ ಲಭ್ಯವಿಲ್ಲದೆ ಪರಿದಾಡಿದ, ತೊಂದರೆಗೊಳಗಾದ ಸಾಕಷ್ಟು ಉದಾಹರಣೆಗಳು ಕಣ್ಣ ಮುಂದಿರುತ್ತದೆ. ರಕ್ತ ಹೊಂದಿಸಿದರೂ ಹಿಮೋಗ್ಲೋಬಿನ್, ಪೇಟ್ಲೆಟ್ಸ್, ಅದು ಇದು ಎಂದು ವಿಂಗಡಿಸಿ ಅಳೆದು ತೂಗಿ ರಕ್ತ ನೀಡಬೇಕಾಗುತ್ತದೆ.
ಡೆಂಗ್ಯೂ ಬಗ್ಗೆ ಖಂಡಿತಾ ಭಯ ಬೇಡ, ಆದರೆ ಎಚ್ಚರ ಇರಲಿ,ಸಾಮೂಹಿಕ ಜವಾಬ್ದಾರಿ ಮತ್ತು ಸಮುದಾಯದ ಆಸಕ್ತಿ , ಸ್ಥಳೀಯ ಮತ್ತು ನಗರಾಡಳಿತ ಹಾಗೂ ಆರೋಗ್ಯ ಇಲಾಖೆಯ ಜವಾಬ್ದಾರಿ ನಿರ್ವಹಣೆಯಿಂದ ಮಾತ್ರ ರೋಗ ತಡೆ ಸಾಧ್ಯ. ಅದಕ್ಕೆ ಎಲ್ಲರೂ ಒಟ್ಟಾಗಿ ಕೈ ಜೋಡಿಸಿದರೆ ಈ ಮಹಾಮಾರಿಯನ್ನು ತಡೆಯಬಹುದು.

ರಕ್ತದಾನ ಮಾಡಿದರೆ ದೇಹದ ತೂಕ ಕಡಿಮೆಯಾಗುತ್ತದೆ, ಅಥವಾ ಅಶಕ್ತತೆ ಕಾಡುತ್ತದೆ... ಇತ್ಯಾದಿ, ಇತ್ಯಾದಿ. ಆದರೆ ಇದ್ಯಾವುದೂ ಸತ್ಯವಲ್ಲ. ರಕ್ತ ನಮ್ಮ ದೇಹದ ಒಟ್ಟು ತೂಕದ ಶೇ.7 ಪ್ರತಿಶತ ಮಾತ್ರ ಇರುತ್ತದೆ.
ಅವಿರತದ ಪ್ರಮುಖ ಕಾರ್ಯಕ್ಷೇತ್ರಗಳಲ್ಲಿ "ಆರೋಗ್ಯ"ವು ಕೂಡ ಒಂದು. ಪ್ರತಿ ವರ್ಷ, ಅವಿರತವು ಹಳ್ಳಿಯ ಶಾಲಾ ಮಕ್ಕಳಿಗೆ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತ ಬಂದಿದೆ. ಈ ಅಪ್ಲಿಕೇಷನ್ ನಲ್ಲಿ ವಿವಿಧ ಗುಂಪಿಗೆ ಸೇರಿದ ರಕ್ತದಾನಿಗಳ ಡಾಟಾಬೇಸ್ ಇರುತ್ತದೆ. ಈ ಅಪ್ಲಿಕೇಷನ್ ಗೆ ಈಗ ಹೆಚ್ಚಿನ ಉಪಯೋಗ ಕಂಡು ಬಂದಿದೆ ಎಂದು ಅವಿರತ ಸಂಸ್ಥೆ ಅಧ್ಯಕ್ಷ ಕೆ.ಟಿ ಸತೀಶ್ ಗೌಡ ಅವರು ಒನ್ಇಂಡಿಯಾಕ್ಕೆ ತಿಳಿಸಿದರು. ಅಪ್ಲಿಕೇಷನ್ ಡೌನ್ ಲೋಡ್ ಮಾಡಿಕೊಳ್ಳಿ
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ











Click it and Unblock the Notifications