ಡೆಂಗ್ಯೂ, ವೈರಲ್ ಜ್ವರವೇ? ರಕ್ತ ಬೇಕೆ?
ಬೆಂಗಳೂರು, ಸೆ. 26: ಡೆಂಗ್ಯೂ, ವೈರಲ್ ಫೀವರ್ ಗಳಿಂದ ಬಳಲುತ್ತಿರುವ ರೋಗಿಗಳಿಗೆ ರಕ್ತದ ಅಗತ್ಯ ಹೆಚ್ಚಾಗಿರುತ್ತದೆ. ಸಮಯಕ್ಕೆ ಸರಿಯಾದ ರಕ್ತ ಒದಗಿಸಲು ಸಾಧ್ಯವಾಗುವುದಿಲ್ಲ ಎಂಬ ಕೊರಗನ್ನು ನೀಗಿಸಲು ಮೊಬೈಲ್ ಅಪ್ಲಿಕೇಷನ್ ಇಲ್ಲಿದೆ.
ಅನೇಕ ಬ್ಲಡ್ ಬ್ಯಾಂಕ್ ಗಳಿದ್ದೂ, ಸ್ನೇಹಿತ ಹಾಗೂ ಸಂಬಂಧಿಕರ ನೆಟ್ವರ್ಕ್ ಇದ್ದರೂ ರಕ್ತವನ್ನು ಹೊಂದಿಸಲಾಗದ ಘಟನೆಗಳಿವೆ. ಇಂಥ ಪರಿಸ್ಥಿತಿಗಳಿಂದ ಹೊರಬರಲು ಅವಿರತ ಸಂಸ್ಥೆ ಸರಳವಾದ ಸ್ಮಾರ್ಟ್ ಫೋನ್ ಅಪ್ಲಿಕೇಷನ್ ಹೊರ ತಂದಿದ್ದು, ಜನಪ್ರಿಯತೆ ಗಳಿಸುತ್ತಿದೆ.

ನಮ್ಮ ಕುಟುಂಬದವರೊ, ಸಂಬಂಧಿಕರೊ, ಸ್ನೇಹಿತರೊ ಅಥವಾ ನೆರೆಹೊರೆಯವರೊ ಅನಾರೋಗ್ಯ ಕಾರಣದಿಂದ ಬಳಲುತಿದ್ದಾಗ ಅವಶ್ಯಕ ರಕ್ತ ಲಭ್ಯವಿಲ್ಲದೆ ಪರಿದಾಡಿದ, ತೊಂದರೆಗೊಳಗಾದ ಸಾಕಷ್ಟು ಉದಾಹರಣೆಗಳು ಕಣ್ಣ ಮುಂದಿರುತ್ತದೆ. ರಕ್ತ ಹೊಂದಿಸಿದರೂ ಹಿಮೋಗ್ಲೋಬಿನ್, ಪೇಟ್ಲೆಟ್ಸ್, ಅದು ಇದು ಎಂದು ವಿಂಗಡಿಸಿ ಅಳೆದು ತೂಗಿ ರಕ್ತ ನೀಡಬೇಕಾಗುತ್ತದೆ.
ಡೆಂಗ್ಯೂ ಬಗ್ಗೆ ಖಂಡಿತಾ ಭಯ ಬೇಡ, ಆದರೆ ಎಚ್ಚರ ಇರಲಿ,ಸಾಮೂಹಿಕ ಜವಾಬ್ದಾರಿ ಮತ್ತು ಸಮುದಾಯದ ಆಸಕ್ತಿ , ಸ್ಥಳೀಯ ಮತ್ತು ನಗರಾಡಳಿತ ಹಾಗೂ ಆರೋಗ್ಯ ಇಲಾಖೆಯ ಜವಾಬ್ದಾರಿ ನಿರ್ವಹಣೆಯಿಂದ ಮಾತ್ರ ರೋಗ ತಡೆ ಸಾಧ್ಯ. ಅದಕ್ಕೆ ಎಲ್ಲರೂ ಒಟ್ಟಾಗಿ ಕೈ ಜೋಡಿಸಿದರೆ ಈ ಮಹಾಮಾರಿಯನ್ನು ತಡೆಯಬಹುದು.

ರಕ್ತದಾನ ಮಾಡಿದರೆ ದೇಹದ ತೂಕ ಕಡಿಮೆಯಾಗುತ್ತದೆ, ಅಥವಾ ಅಶಕ್ತತೆ ಕಾಡುತ್ತದೆ... ಇತ್ಯಾದಿ, ಇತ್ಯಾದಿ. ಆದರೆ ಇದ್ಯಾವುದೂ ಸತ್ಯವಲ್ಲ. ರಕ್ತ ನಮ್ಮ ದೇಹದ ಒಟ್ಟು ತೂಕದ ಶೇ.7 ಪ್ರತಿಶತ ಮಾತ್ರ ಇರುತ್ತದೆ.
ಅವಿರತದ ಪ್ರಮುಖ ಕಾರ್ಯಕ್ಷೇತ್ರಗಳಲ್ಲಿ "ಆರೋಗ್ಯ"ವು ಕೂಡ ಒಂದು. ಪ್ರತಿ ವರ್ಷ, ಅವಿರತವು ಹಳ್ಳಿಯ ಶಾಲಾ ಮಕ್ಕಳಿಗೆ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತ ಬಂದಿದೆ. ಈ ಅಪ್ಲಿಕೇಷನ್ ನಲ್ಲಿ ವಿವಿಧ ಗುಂಪಿಗೆ ಸೇರಿದ ರಕ್ತದಾನಿಗಳ ಡಾಟಾಬೇಸ್ ಇರುತ್ತದೆ. ಈ ಅಪ್ಲಿಕೇಷನ್ ಗೆ ಈಗ ಹೆಚ್ಚಿನ ಉಪಯೋಗ ಕಂಡು ಬಂದಿದೆ ಎಂದು ಅವಿರತ ಸಂಸ್ಥೆ ಅಧ್ಯಕ್ಷ ಕೆ.ಟಿ ಸತೀಶ್ ಗೌಡ ಅವರು ಒನ್ಇಂಡಿಯಾಕ್ಕೆ ತಿಳಿಸಿದರು. ಅಪ್ಲಿಕೇಷನ್ ಡೌನ್ ಲೋಡ್ ಮಾಡಿಕೊಳ್ಳಿ
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications