Mangoes in post: ಅಂಚೆ ಇಲಾಖೆ ಮೂಲಕ ಮನೆ ಬಾಗಿಲಿಗೆ ಬರಲಿದೆ ಮಾವಿನ ಹಣ್ಣು! ಬುಕ್ ಮಾಡುವುದು ಹೇಗೆ?
ಬೆಂಗಳೂರು, ಏಪ್ರಿಲ್.06: ಮಾವಿನ ಹಣ್ಣು ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಹೆಸರು ಕೇಳಿದ ತಕ್ಷಣ ಬಾಯಲ್ಲಿ ಎಂಥವರಿಗೂ ನೀರು ಬರುತ್ತದೆ. ಅವರಿಗಾಗಿಯೇ ಮಾವಿನ ಸುಗ್ಗಿ ಆರಂಭವಾಗಿದೆ. ಮಾರುಕಟ್ಟೆಗೆ ಬಗೆ ಬಗೆಯ ಮಾವಿನ ಹಣ್ಣು ಬರಲು ಆರಂಭವಾಗಿದೆ. ಹಣ್ಣುಗಳ ರಾಜನ ಪ್ರಿಯರಿಗಾಗಿಯೇ ಅಂಚೆ ಇಲಾಖೆ ಸೇವೆಗೆ ಸಿದ್ಧವಾಗಿದೆ.
ಪ್ರತಿ ವರ್ಷದಂತೆಯೇ ಈ ಬಾರಿಯೂ ಅಂಚೆ ಇಲಾಖೆ ಮಾವಿನ ಹಣ್ಣನ್ನು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸಲು ಸಿದ್ಧವಾಗಿದೆ. ಕರ್ನಾಟಕದ ಅಂಚೆ ಇಲಾಖೆಯು ವಿವಿಧ ಮಾವು ಬೆಳೆಗಾರರು ಮತ್ತು ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರ್ಕೆಟಿಂಗ್ ಕಾರ್ಪೊರೇಷನ್ ಲಿಮಿಟೆಡ್ನೊಂದಿಗೆ ಜಂಟಿಯಾಗಿ ಮಾವಿನ ಹಣ್ಣುಗಳ ಡೋರ್ ಡೆಲಿವರಿ ಸೇವೆ ಆರಂಭಿಸಿದೆ.

2019 ರಿಂದ ಅಂಚೆ ಇಲಾಖೆಯು ಮಾವಿನ ಸೀಸನ್ನಲ್ಲಿ ಮನೆ ಬಾಗಿಲಿಗೆ ಹಣ್ಣುಗಳನ್ನು ತಲುಪಿಸುವ ಸೇವೆ ನೀಡಿತ್ತಿದೆ. ಇಲ್ಲಿಯವರೆಗೆ ಇಲಾಖೆಯು ಒಟ್ಟು 3.15 ಲಕ್ಷ ಕೆಜಿ ತೂಕದ 92,265 ಮಾವಿನ ಹಣ್ಣುಗಳ ಪಾರ್ಸೆಲ್ಗಳನ್ನು ತಲುಪಿಸಿದೆ. ಇದರಿಂದ ಬರೋಬ್ಬರಿ 74,59,265 ರೂಪಾಯಿ ಆದಾಯವನ್ನು ಗಳಿಸಿದೆ.
ಮಾವುಗಳನ್ನು ರೈತರು 3 ಕೆಜಿ ಬಾಕ್ಸ್ಗಳಲ್ಲಿ ಪ್ಯಾಕ್ ಮಾಡಿ ಬೆಂಗಳೂರಿನ ಜನರಲ್ ಪೋಸ್ಟ್ ಆಫೀಸ್ (ಜಿಪಿಒ) ಗೆ ತರುತ್ತಾರೆ. ಬಾಕ್ಸ್ಗಳನ್ನು ವ್ಯಾಪಾರದ ಪಾರ್ಸೆಲ್ಗಳಾಗಿ ಕಾಯ್ದಿರಿಸಲಾಗುತ್ತದೆ. ಅದೇ ದಿನ ಅಥವಾ ಮರುದಿನ ಪೋಸ್ಟ್ಮ್ಯಾನ್ ಮೂಲಕ ಗ್ರಾಹಕರ ಮನೆ ಬಾಗಿಲಿಗೆ ಹಣ್ಣಿನ ಬಾಕ್ಸ್ಗಳನ್ನು ತಲುಪಿಸಲಾಗುತ್ತದೆ.

"ಈ ಒಪ್ಪಂದದಿಂದ ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ ರೈತರು ಉತ್ತಮ ಬೆಲೆಯನ್ನು ಪಡೆಯುತ್ತಾರೆ. ಗ್ರಾಹಕರು ತಮ್ಮ ಮನೆ ಬಾಗಿಲಿಗೆ ಅಂಚೆ ಇಲಾಖೆಯ ಮೂಲಕ ಉತ್ತಮ ಗುಣಮಟ್ಟದ ತಾಜಾ ಮಾವಿನಹಣ್ಣುಗಳನ್ನು ಪಡೆಯುತ್ತಾರೆ" ಎಂದು ಮಾವಿನ ಹಣ್ಣಿನ ಸೇವೆ ಬಗ್ಗೆ ಇಲಾಖೆಯ ಪತ್ರಿಕಾ ಪ್ರಕಟಣೆ ತಿಳಿಸಿದೆ.
ಮಾವಿನ ಹಣ್ಣು ಬುಕ್ ಮಾಡುವುದು ಹೇಗೆ?
ತಾಜಾ ಮಾವಿನ ಹಣ್ಣುಗಳನ್ನು ಖರೀದಿಸುವ ಗ್ರಾಹಗಕರು www.karsirimangoes.karnataka.gov.in ಅಥವಾ www.kolaramangoes.com. ಪೋರ್ಟಲ್ಗಳ ಮೂಲಕ ಮಾವಿನ ಹಣ್ಣುಗಳನ್ನು ಆರ್ಡರ್ ಮಾಡಬಹುದಾಗಿದೆ. ಗ್ರಾಹಕರು ಕನಿಷ್ಠ ಮೂರು ಕೆ.ಜಿ ಹಣ್ಣುಗಳನ್ನು ಆರ್ಡರ್ ಮಾಡಬೇಕು. ಮೂರು ಕೆಜಿ ಬಾಕ್ಸ್ ಗೆ 850 ರೂಪಾಯಿ ಚಾರ್ಜ್ ಮಾಡಲಾಗುತ್ತಿದೆ.
ವೆಬ್ಸೈಟ್ಗೆ ಭೇಟಿ ನೀಡಿದ ಬಳಿಕ ಲಾಗಿನ್ ಆಗಿ ಮಾವಿನ ಹಣ್ಣನ್ನು ಸೆಲೆಕ್ಟ್ ಮಾಡಬೇಕು. ಅದರ ದರ ಎಲ್ಲವನ್ನು ಪರಿಶೀಲಿಸಿ ಆನ್ಲೈನ್ನಲ್ಲಿಯೇ ಹಣ ಪಾವತಿ ಮಾಡಿದರೇ ಒಂದೇ ದಿನದಲ್ಲಿ ಮಾವಿನಹಣ್ಣು ನಿಮ್ಮ ಮನೆ ಬಾಗಿಲಿಗೆ ಅಂಚೆ ಇಲಾಖೆ ಸಿಬ್ಬಂದಿ ತಲುಪಿಸುತ್ತಾರೆ.
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications