ಒಂದು ಸಮುದಾಯದ ವಿರುದ್ಧ ಪೋಸ್ಟ್: ಆರೋಪಿ ನವೀನ್ ಬಂಧನ
ಬೆಂಗಳೂರು, ಆಗಸ್ಟ್.12: ಒಂದು ಸಮುದಾಯದ ವಿರುದ್ಧ ಹಾಕಿದ್ದ ಒಂದೇ ಒಂದು ಫೇಸ್ ಬುಕ್ ಪೋಸ್ಟ್ ಬೆಂಗಳೂರಿನ ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಪ್ರದೇಶ ರಾತ್ರೋರಾತ್ರಿ ಹೊತ್ತಿ ಉರಿಯುವಂತೆ ಮಾಡಿತು.
Recommended Video
ಪುಲಕೇಶಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸೋದರಳಿಯ ನವೀನ್, ಒಂದು ಸಮುದಾಯದ ವಿರುದ್ಧ ಪೋಸ್ಟ್ ಹಾಕಿದ್ದಾರೆ ಎಂಬ ಆರೋಪವಿದೆ. ಈ ಹಿನ್ನೆಲೆ ಕೆ.ಜಿ.ಹಳ್ಳಿ ಠಾಣೆಯ ಪೊಲೀಸರು ರಾತ್ರಿ ಆರೋಪಿ ನವೀನ್ ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಕಾವಲ್ ಭೈರಸಂದ್ರದಲ್ಲಿ ಗಲಭೆ; ಗೃಹ ಸಚಿವರ ಎಚ್ಚರಿಕೆ
ಮಂಗಳವಾರ ಸಂಜೆ 6 ಗಂಟೆ ವೇಳೆಗೆ ಫೇಸ್ ಬುಕ್ ನಲ್ಲಿ ಒಂದು ಸಮುದಾಯದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಲಾಗಿತ್ತು. ರಾತ್ರಿ 8 ಗಂಟೆಯ ಹೊತ್ತಿಗೆ ಕಾವಲ್ ಬೈರಸಂದ್ರದಲ್ಲಿ ಇರುವ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಎದುರು ಉದ್ರಕ್ತರ ಗುಂಪು ಗಲಾಟೆ ಶುರು ಮಾಡಿತು.
ಮೊಬೈಲ್ ಕಳೆದಿರುವ ಬಗ್ಗೆ ನವೀನ್ ಹೇಳಿಕೆ:
ಒಂದು ಸಮುದಾಯದ ವಿರುದ್ಧ ಫೇಸ್ ಬುಕ್ ನಲ್ಲಿ ಹಾಕಲಾದ ಪೋಸ್ಟ್ ತಮ್ಮದಲ್ಲ ಎಂದು ಕೆಜಿ ಹಳ್ಳಿ ಪೊಲೀಸರ ವಶದಲ್ಲಿರುವ ನವೀನ್ ವಿಚಾರಣೆ ವೇಳೆ ಹೇಳಿದ್ದಾರೆ. ಮಂಗಳವಾರ ಸಂಜೆ 4 ಗಂಟೆ ಹೊತ್ತಿಗೆ ಮೊಬೈಲ್ ಕಳೆದಿದ್ದು, ಅದಾಗಿ ಎರಡು ಗಂಟೆಗೆ ತಮ್ಮ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಹಾಕಲಾಗಿದೆ ಎಂದು ಪೊಲೀಸರ ಎದುರು ನವೀನ್ ಹೇಳಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.