ದೇವನಹಳ್ಳಿ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳೇ ಸಿಗೊಲ್ಲ!
ದೇವನಹಳ್ಳಿ, ಜುಲೈ.19: ರಾಜಧಾನಿ ಬೆಂಗಳೂರಿನಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ದೇವನಹಳ್ಳಿಯಲ್ಲಿ ಅಧಿಕಾರಿಗಳಿಗೆ ಭಯ ಇಲ್ಲ. ತಾವು ಕಚೇರಿಗೆ ಬಾರದೆ ಹೋದರೆ ನಮ್ಮ ಮೇಲೆ ಕ್ರಮ ಕೈಗೊಳ್ತಾರೆ ಅನ್ನೋ ಭಯ ಇವರನ್ನು ಕಾಡೋದಿಲ್ಲ.
ಬೆಂಗಳೂರಲ್ಲಿ ಆಡಳಿತ ನಡೆಸುವ ಅಧಿಕಾರಿಗಳು ಇಲ್ಲಿಯವರೆಗೂ ಬರಲ್ಲ ಅನ್ನೋ ಬಂಡ ಧೈರ್ಯ ಇವರದು. ಹೀಗಾಗಿ ದೇವನಹಳ್ಳಿ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳೇ ಸಿಗೋದಿಲ್ಲ.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದ ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆ ಬಾಗಿಲು ತೆರೆದು ತಿಂಗಳುಗಳು ಕಳೆದುಹೋಗಿದೆ. ಇನ್ನು ಅಧಿಕಾರಿಗಳಂತೂ ಇಲ್ಲಿ ಸಿಗೋದೇ ಇಲ್ಲ. ಇದರಿಂದ ಉನ್ನತ ವ್ಯಾಸಂಗಕ್ಕೆ ದಾಖಲಾಗಬೇಕಾದ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ನಿತ್ಯವು ನರಕ ಅನುಭವಿಸುವ ಸ್ಥಿತಿ ಎದುರಾಗಿದೆ.

ಸರ್ಕಾರಿ ಲೆಕ್ಕದಲ್ಲಿ ಇಬ್ಬರು ಹೊರಗುತ್ತಿಗೆ ಆಧಾರದಲ್ಲಿ ಮೂವರು ಕಾರ್ಯನಿರ್ವಹಿಸಬೇಕಾದ ಕಚೇರಿ ಇದು. ಮುಖ್ಯ ವ್ಯವಸ್ಥಾಪಕರು ಹೆಚ್ಚುವರಿ ಹುದ್ದೆ ನಿಭಾಯಿಸುತ್ತಿದ್ದು, ಅವರು ಈ ಕಚೇರಿಗೆ ಬರುವುದೇ ಬಿಟ್ಟಿದ್ದಾರೆ. ಇನ್ನು ಸಹಾಯಕ ವ್ಯವಸ್ಥಾಪಕ ಹಿರಿಯ ಅಧಿಕಾರಿಯ ಬೆನ್ನ ಹಿಂದೆ ತಾವು ಗೈರಾಗಿದ್ದಾರೆ.
ಬೆಂಗಳೂರಿಂದ ಕೇವಲ 35 ಕಿ.ಮೀ ದೂರದಲ್ಲಿರುವ ಸರ್ಕಾರಿ ಕಚೇರಿಗಳ ಬದುಕೇ ಹೀಗಾದ್ರೆ ಇನ್ನು ರಾಜ್ಯದ ಮೂಲೆ, ಮೂಲೆಯಲ್ಲಿರುವ ಕಚೇರಿಗಳ ಪಾಡು ಹೇಗಿರಬಹುದು ಅನ್ನೋದು ಸಾರ್ವಜನಿಕರ ಪ್ರಶ್ನೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications