Industry: ದೇವನಹಳ್ಳಿ ರೈತರ ಭೂ ಸ್ವಾಧೀನ ಬಿಕ್ಕಟ್ಟು: ಜುಲೈ 15ಕ್ಕೆ ಸಿಎಂ ಅಂತಿಮ ನಿರ್ಧಾರ..
ಬೆಂಗಳೂರು, ಜುಲೈ 13: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ 'ಹೈಟೆಕ್ ರಕ್ಷಣಾ ಮತ್ತು ವೈಮಾಂತರಿಕ್ಷ ಪಾರ್ಕ್' ಸ್ಥಾಪನೆಗೆ ಸಂಬಂಧಿಸಿದಂತೆ ಭೂಮಿ ಸ್ವಾಧಿನಕ್ಕೆ ರೈತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ನಿರಂತರ ಹೋರಾಟ ಮಾಡುತ್ತಾ ಬಂದಿದ್ದಾರೆ. ಇದೀಗ ಈ ಬಿಕ್ಕಟ್ಟಿಗೆ ಜುಲೈ 15ರಂದು ಮಂಗಳವಾರ ತೆರ ಬೀಳುವ ನಿರೀಕ್ಷೆ ಇದೆ.
ಇದೇ ವಿಚಾರ ಕುರಿತು ಮಾಹಿತಿ ನೀಡಿದರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಅವರು, ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿನ ಭೂಮಿ ಸ್ವಾಧೀನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 15ರಂದು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಒಟ್ಟಿನಲ್ಲಿ ಕೃಷಿ ಮತ್ತು ಕೈಗಾರಿಕೆ ಎರಡನ್ನೂ ಸರಿದೂಗಿಸಿಕೊಂಡು ಹೋಗಬೇಕೆನ್ನುವುದು ತಮ್ಮ ಕಳಕಳಿಯಾಗಿದೆ ಎಂದು ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.

ರೈತರ ಮಧ್ಯೆ ಭಿನ್ನ ಅಭಿಪ್ರಾಯಗಳು: ಸಚಿವ
ಕೆಲವು ರೈತರು ಭೂಸ್ವಾಧೀನ ಬೇಡವೆಂದು ಹೋರಾಟ ಮಾಡುತ್ತಿದ್ದಾರೆ. ಮತ್ತೆ ಕೆಲವರು 449 ಎಕರೆ ಜಮೀನನ್ನು ಬಿಟ್ಟುಕೊಡಲು ಸಿದ್ಧವಾಗಿದ್ದಾರೆ. ಎಕರೆಗೆ 3.5 ಕೋಟಿ ರೂ. ಪರಿಹಾರ ಕೇಳುತ್ತಿದ್ದಾರೆ. ರೈತರಲ್ಲೇ ಈ ಬಗ್ಗೆ ಬೇರೆಬೇರೆ ಅಭಿಪ್ರಾಯಗಳಿವೆ. ಸರಕಾರವು ಎಲ್ಲಾ ರೀತಿಯ ಸಾಧಕ-ಬಾಧಕಗಳನ್ನೂ ಪರಿಶೀಲಿಸುತ್ತಿದೆ ಎಂದಿದ್ದಾರೆ.
ಶನಿವಾರದಂದು 'ಚನ್ನರಾಯಪಟ್ಟಣ ಹೋಬಳಿ ರೈತ ಹೋರಾಟ ಸಮಿತಿ' ಹೆಸರಿನಲ್ಲಿ ಕೆಲವು ರೈತರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, 449 ಎಕರೆಯನ್ನು ಸರ್ಕಾರಕ್ಕೆ ಕೊಡುವುದಾಗಿ ಹೇಳಿದ್ದಾರೆ. ಯೋಜನೆಗೆ ಸಂಬಂಧಿಸಿದಂತೆ ಮೊದಲು ಅಧಿಸೂಚನೆ ಹೊರಟಿದ್ದೇ ಇಷ್ಟು ಭೂಮಿಗೆ. ಸರಕಾರವು ನಿಜವಾದ ರೈತರ ದನಿಗೆ ಬೆಲೆ ಕೊಡುತ್ತದೆಯೇ ವಿನಾ ರೈತರ ಹೆಸರಿನಲ್ಲಿ ಏನೇನೋ ಮಾತನಾಡುತ್ತಿರುವವರಿಗಲ್ಲ ಎಂದು ಅವರು ತಿಳಿಸಿದ್ದಾರೆ.
ದೇವನಹಳ್ಳಿ ಸುತ್ತಮುತ್ತ ಯಾವ್ಯಾವ ಬಿಲ್ಡರ್ಗಳು ಎಷ್ಟೆಷ್ಟು ಭೂಮಿ ಖರೀದಿಸಿದ್ದಾರೆ, ಯಾರ ಜೊತೆ ಅವರು ಒಪ್ಪಂದ ಮಾಡಿಕೊಂಡಿದ್ದಾರೆ. ಯಾವ ರಾಜಕಾರಣಿಗಳ ಜಮೀನು ಎಷ್ಟಿದೆ, ಹೋರಾಟದ ಹಿಂದ ಯಾರ ಕುಮ್ಮಕ್ಕಿದೆ ಎನ್ನುವುದೆಲ್ಲ ನಮಗೆ ಗೊತ್ತಿದೆ. ದೇವನಹಳ್ಳಿ ಸುತ್ತಲಿನ ಪರಿಸರದಲ್ಲಿ ಕೃಷಿ ಉಳಿಯಬೇಕು ಎನ್ನುವ ಕೂಗು ಎದ್ದಿದೆ. ಹೀಗಾಗಿ ಸರ್ಕಾರ ಶಾಶ್ವತ ಕೃಷಿ ವಲಯ ಮಾಡುವ ಬಗ್ಗೆಯೂ ಚಿಂತಿಸುತ್ತಿದೆ. ಈಗ ಕೆಲವರು ಇದು ಬೇಡ ಎನ್ನುತ್ತಿದ್ದಾರೆ. ಈ ರೀತಿಯ ದ್ವಂದ್ವ ಸರಿಯಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಭೂಸ್ವಾಧೀನ ಬೇಡವೆಂದು ಕೆಲವು ಸಾಹಿತಿಗಳು, ಚಿಂತಕರು ನಮ್ಮ ಪಕ್ಷದ ಹೈಕಮಾಂಡ್ಗೆ ಪತ್ರ ಬರೆದಿದ್ದಾರೆ. ಅದನ್ನು ನಾನು ವಿರೋಧಿಸುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹೋರಾಡುವ ಹಕ್ಕಿದೆ. ನಾವು ಎಲ್ಲ ಸಾಧ್ಯತೆಗಳನ್ನೂ ಪರಿಶೀಲಿಸುತ್ತಿದ್ದು, ಕಾನೂನು ತಜ್ಞರ ಅಭಿಪ್ರಾಯ ಪಡೆಯುತ್ತಿದ್ದೇವೆ ಎಂದರು.
ನಾಯಕತ್ವದಲ್ಲಿ ಗೊಂದಲವಿಲ್ಲ
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವದ ಗೊಂದಲವೇನೂ ಇಲ್ಲ. ಪಕ್ಷದಲ್ಲಿ ರಾಜ್ಯ ಉಸ್ತುವಾರಿಯಾಗಿರುವ ರಣದೀಪ್ ಸುರ್ಜೇವಾಲಾ ಅವರು ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ ನಮ್ಮ ಪಕ್ಷದ ಶಾಸಕರ ಅಭಿಪ್ರಾಯ ಕೇಳಿದ್ದಾರೆ. ಅದರಲ್ಲಿ ತಪ್ಪೇನೂ ಇಲ್ಲ. ಕೊನೆಗೂ ದುಡ್ಡು ಕೊಡುವುದು ಮುಖ್ಯಮಂತ್ರಿಗಳೇ ತಾನೇ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಶಾಸಕರ ಮೇಲೆ ಬಿಜೆಪಿ ಕಣ್ಣು
ಬಿಜೆಪಿ ನಮ್ಮ ಐವತ್ತರವತ್ತು ಶಾಸಕರ ಮೇಲೆ ಕಣ್ಣಿಟ್ಟು, ಏಜೆಂಟರನ್ನು ಕಳಿಸುತ್ತಿದೆ ಎಂದು ನಮ್ಮ ಪಕ್ಷದ ಶಾಸಕರೇ ಹೇಳಿದ್ದಾರೆ. ಆದರೆ, ನಮ್ಮಲ್ಲಿ 140ಕ್ಕೂ ಹೆಚ್ಚು ಶಾಸಕರಿದ್ದಾರೆ. ಪಕ್ಷಾಂತರ ಆಗಬೇಕೆಂದರೆ 80-90 ಶಾಸಕರು ಹೋಗಬೇಕಾಗುತ್ತದೆ. ಈಗ ಯಾರೂ ಅಷ್ಟು ಮೂರ್ಖರು ಇಲ್ಲ. ಹಿಂದೇನೋ 17 ಶಾಸಕರು ಬಿಜೆಪಿಗೆ ಹೋದರು. ಈಗ ಅದೆಲ್ಲ ನಡೆಯುವುದಿಲ್ಲ. ವಾಸ್ತವವಾಗಿ ಬಿಜೆಪಿ-ಜೆಡಿಎಸ್ ಕೂಟದ 18-20 ಶಾಸಕರು ಕಾಂಗ್ರೆಸ್ ಬಾಗಿಲು ಬಡಿಯುತ್ತಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು












Click it and Unblock the Notifications